ಕುಂದಾಪುರ

ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಗದೀಶ ಪಿ.ಪೂಜಾರಿ ಹಕ್ಕಾಡಿ ಹಾಗೂ ಉಪಾಧ್ಯಕ್ಷರಾಗಿ ಸತೀಶ ಕುಮಾರ್ ಶೆಟ್ಟಿ ಆಯ್ಕೆ

Share

ಕುಂದಾಪುರ:ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅದರ ಪ್ರಧಾನ ಕಚೇರಿಯಲ್ಲಿ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆ ಗುರುವಾರ ನಡೆಯಿತು. ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅದರ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಜಗದೀಶ ಪಿ.ಪೂಜಾರಿ ಹಕ್ಕಾಡಿ ಹಾಗೂ ಉಪಾಧ್ಯಕ್ಷರಾಗಿ ಸತೀಶ ಕುಮಾರ್ ಶೆಟ್ಟಿ ಆಯ್ಕೆಯಾಗಿದರು.
ಅಧ್ಯಕ್ಷ ಜಗದೀಶ ಪಿ.ಪೂಜಾರಿ ಹಕ್ಕಾಡಿ ಮಾತನಾಡಿ,ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಅರೆಹೊಳೆ ಕುದ್ರುಕೋಡು ಮಧ್ಯ ಭಾಗದಲ್ಲಿ ನಮ್ಮ ಸಂಘದ ವತಿಯಿಂದ ರೇಷನ್ ಅಂಗಡಿಯನ್ನು ತೆರೆಯುವ ಉದ್ದೇಶವನ್ನು ಹೊಂದಲಾಗಿದೆ.ಮುಂದಿನ ಐದು ವರ್ಷಗಳ ಅವಧಿಯಲ್ಲಿ ರೈತಪರ ಜನಪರ ಯೋಜನೆಗಳನ್ನು ಅನುಷ್ಠಾನ ಮಾಡಲು ಪ್ರಯತ್ನಿಸಲಾಗುವುದು ಎಂದರು.
ಉಪಾಧ್ಯಕ್ಷ ಸತೀಶ್ ಕುಮಾರ್ ಶೆಟ್ಟಿ ಮಾತನಾಡಿ,ಪ್ರಣಾಳಿಕೆಯಲ್ಲಿ ಘೋಷಿಸಿದ ಅಂಶಗಳನ್ನು ಜಾರಿಗೆ ತರುವುದರ ಮುಖೇನ ಭ್ರಷ್ಟಚಾರ ಮುಕ್ತ ರೈತಪರ ಆಡಳಿತವನ್ನು ನೀಡಲಾಗುವುದು ಎಂದರು.
ಸಂಘದ ಹಿರಿಯ ನಿರ್ದೇಶಕ ನರಸಿಂಹ ದೇವಾಡಿಗ ಶುಭಹಾರೈಸಿದರು.ನೂತನ ನಿರ್ದೇಶಕರಾಗಿ ಆಯ್ಕೆಗೊಂಡಿರುವ ಶ್ರೀನಿವಾಸ ಪೂಜಾರಿ,ಗಣೇಶ ಪೂಜಾರಿ,ಪ್ರಭಾಕರ ಎಂ. ಖಾರ್ವಿ,ಹರಿಶ್ಚಂದ್ರ ಆಚಾರ್ಯ,ಲಕ್ಷ್ಮೀ,ಶಕುಂತಲಾ,ಗಣೇಶ ಪೂಜಾರಿ,ವೀರೇಂದ್ರ ಹೆಗ್ಡೆ,ರಾಮ ಕಂತಿಹೊಂಡ,ಸುರೇಶ ಉಪಸ್ಥಿತರಿದ್ದರು.ಚುನಾವಣಾಧಿಕಾರಿ ಸುನೀಲ್ ಕುಮಾರ್ ಹಾಜರಿದ್ದರು.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ಸ್ವಾಗತಿಸಿ,ವಂದಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago