ಉಡುಪಿ

ಅನುಷ್ಠಾನಗೊಂಡಿರುವ ನೀರಾವರಿ ಯೋಜನೆ ಸ್ಥಳೀಯರ ಅಭಿಪ್ರಾಯದೊಂದಿಗೆ ಮುಂದುವರಿಕೆ-ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ

Share

ಹೇರಂಜಾಲು ಏತ ನೀರಾವರಿ ಯೋಜನೆ ವೀಕ್ಷಣೆ

ಬೈಂದೂರು:ಸುಮಾರು 72 ಕೋಟಿ.ರೂ ವೆಚ್ಚದಲ್ಲಿ ಬೈಂದೂರು ತಾಲೂಕಿನ ಕಂಬದಕೋಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರಂಜಾಲು ಎಂಬಲ್ಲಿ ನಡೆಯುತ್ತಿರುವ ಹೇರಂಜಾಲು ಗುಡೇ ದೇವಸ್ಥಾನ ಏತ ನೀರಾವರಿ ಕಾಮಗಾರಿ ಪ್ರದೇಶಕ್ಕೆ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕರು,
ಬಹು ಚರ್ಚಿತ ಗುಡೇ ದೇವಸ್ಥಾನ ಏತ ನೀರಾವರಿ ಯೋಜನೆ ಸ್ಥಳೀಯರು ಹಾಗೂ ರೈತರ ವಿಶ್ವಾಸವನ್ನು ಪಡೆದುಕೊಂಡು ಒಂದಿಷ್ಟು ಬದಲಾವಣೆಯೊಂದಿಗೆ ಕಾಮಗಾರಿ ಕೆಲಸವನ್ನು ಪೂರ್ಣಗೊಳಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಯೋಜನೆ ವಿರುದ್ಧವಾಗಿ ಒಂದಿಷ್ಟು ವಿರೋಧಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಗೊಂದಲಗಳ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ ಎಂದು ತಿಳಿಸಿದರು.ಸ್ಥಳೀಯ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡು ರೈತರ ವಿಶ್ವಾಸ ಪಡೆದು ಜನರಿಗೆ ತೊಂದರೆಯಾಗದಂತೆ ಕಾಮಗಾರಿ ಪೂರ್ಣಗೊಳ್ಳಲಿದೆ. 1.8 ನೀರಿನ ಗುರಿಯನ್ನು ಇಟ್ಟುಕೊಂಡು ಸ್ಥಳೀಯರ ಬಳಕೆಗೆ ಉಪಗೋಗಿಸಲು ಮೊದಲ ಆದ್ಯತೆ ನೀಡಬೇಕು.ಹೆಚ್ಚುವರಿ ನೀರನ್ನು ಮಾತ್ರ ಕೆರೆಗೆ ತುಂಬಿಸುವ ಅಥವಾ ಕುಡಿಯುವ ನೀರಿನ ಬಳಕೆಗೆ ಉಪಯೋಸುವಂತೆ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ
ಮುಂದಿನ ದಿನಗಳಲ್ಲಿ ಸೌಪರ್ಣಿಕಾ ನದಿಯ ಅರೆಹೊಳೆ ಭಾಗದಲ್ಲಿ ಸಿಹಿ ನೀರಿನ ಡ್ಯಾಂ ನಿರ್ಮಾಣ ಮಾಡಲು ಕ್ರಮಗಳನ್ನು ಕೈಗೊಂಡು,ಈ ಭಾಗದ ಕೆರೆಗಳಿಗೆ ನೀರನ್ನು ತುಂಬಿಸುವ ಕಾರ್ಯಕ್ಕೂ ಕ್ರಮಗಳನ್ನು ಕೈಗೊಳ್ಳುವುದರ ಮುಖೇನ ರೈತರ ಹಿತ ಕಾಪಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಹಿರಿಯ ರೈತರಾದ ಮಾಲಿಂಗ ಪೂಜಾರಿ,ಖಂಬದಕೋಣೆ ಗ್ರಾ.ಪಂ ಮಾಜಿ ಅಧ್ಯಕ್ಷ ಸುಕೇಶ ಶೆಟ್ಟಿ,ರಮೇಶ ದೇವಾಡಿಗ,ಮಾಚ ಪೂಜಾರಿ,ರಾಜು ಗಾಣಿಗ ಹಾಗೂ ಸ್ಥಳೀಯ ರೈತರು,ಅಧಿಕಾರಿಗಳು ಹಾಜರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago