ಕುಂದಾಪುರ

ಪ್ರಗತಿಪರ ಕೃಷಿಕ ಸುಬ್ಬಣ್ಣ ಶೆಟ್ಟಿ ಅವರಿಗೆ ಗೌರವದ ಸನ್ಮಾನ

Share

ಕೃಷಿಕ ಸುಬ್ಬಣ್ಣ ಶೆಟ್ಟಿ ಅವರು ಸನ್ಮಾನವನ್ನು ಸ್ವೀಕರಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಪ್ರಗತಿಪರ ಕೃಷಿಕರಾದ ಸುಬ್ಬಣ್ಣ ಶೆಟ್ಟಿ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ನಾಯ್ಕನಕಟ್ಟೆ ವತಿಯಿಂದ ಶ್ರೀಗೋಪಾಲಕೃಷ್ಣ ಕಲ್ಯಾಣ ಮಂಟಪ ನಾಗೂರುನಲ್ಲಿ ಭಾನುವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಪ್ರಗತಿಪರ ಕೃಷಿಕರಾದ ಸುಬ್ಬಣ್ಣ ಶೆಟ್ಟಿ ಅವರು ಪ್ರಸ್ತುತ ವರ್ಷದಲ್ಲಿ ಶ್ರೀ ಮೂಕಾಂಬಿಕಾ ಬೆಳೆಗಾರರ ಒಕ್ಕೂಟಕ್ಕೆ ಸುಮಾರು 250 ರಿಂದ 260 ಕ್ವಿಂಟಾಲ್ ಭತ್ತವನ್ನು ನೀಡುವುದರ ಮೂಲಕ ಬೈಂದೂರು ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.ಸುಬ್ಬಣ್ಣ ಶೆಟ್ಟಿ ಅವರು ಮುಂಗಾರಿನಲ್ಲಿ ಭತ್ತವನ್ನು ಬೆಳೆಯುತ್ತಿದ್ದು.ಹಿಂಗಾರಿನಲ್ಲಿ ಕಲ್ಲಂಗಡಿ ಹಣ್ಣನ್ನು ಬೆಳೆಯುತ್ತಾರೆ.ತಮ್ಮ ಪೂರ್ತಿ ಸಮಯವನ್ನು ಕೃಷಿಗಾಗಿ ವಿನಿಯೋಗ ಮಾಡುತ್ತಿರುವ ಸುಬ್ಬಣ್ಣ ಶೆಟ್ಟಿ ಅವರು ಕೃಷಿ ಕ್ಷೇತ್ರವನ್ನು ವ್ಯವಹಾರಿಕಾ ಕ್ಷೇತ್ರವನ್ನಾಗಿ ಪರಿಗಣಿಸಿಕೊಂಡು ವರ್ಷಕ್ಕೆ ಲಕ್ಷಾಂತರ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.ಹಡವು ಬಿದ್ದ ಭೂಮಿಗಳನ್ನು ಲಿಜಿಗೆ ಪಡೆದು ಕೃಷಿಯನ್ನು ಮಾಡುತ್ತಿರುವ ಸುಬ್ಬಣ್ಣ ಶೆಟ್ಟಿ ಅವರು ಉತ್ತಮ ಹೈನುಗಾರರು ಕೂಡ ಹೌದು.ಕೃಷಿ ಜತೆಗೆ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು.ಕಿರಿಮಂಜೇಶ್ವರ ಗ್ರಾಮ ಪಂಚಾಯಿತಿ ಸದಸ್ಯರಾಗಿ,ಹಾಲು ಸೊಸೈಟಿ ಅಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.
ಪ್ರಗರಿಪರ ಕೃಷಿಕರಾದ ಸುಬ್ಬಣ್ಣ ಶೆಟ್ಟಿ ಅವರು ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟದ ವತಿಯಿಂದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ,ಸನ್ಮಾನವನ್ನು ಸ್ವೀಕರಿಸಿದ್ದು ಬಹಳಷ್ಟು ಖುಷಿ ಆಗಿದ್ದು,ಕೃಷಿಯಲ್ಲಿ ತೊಡಗಿಕೊಳ್ಳಲು ಇನ್ನಷ್ಟು ಪ್ರೇರಣೆ ನೀಡಿದೆ ಎಂದು ತಮ್ಮ ಅಭಿಪ್ರಾಯವನ್ನು ಮಾಧ್ಯಮದವರ ಜತೆ ಹಚ್ಚಿಕೊಂಡರು.
ಪ್ರಗತಿಪರ ಕೃಷಿಕರಾದ ಸುಬ್ಬಣ್ಣ ಶೆಟ್ಟಿ ಅವರ ಕೃಷಿ ಕಾಯಕವನ್ನು ಗುರುತಿಸುವ ಕಾರ್ಯ ಜಿಲ್ಲಾಡಳಿತ ಮಾಡಬೇಕಾಗಿದೆ.

Advertisement

Share
Team Kundapur Times

Recent Posts

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

6 hours ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 days ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 weeks ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 weeks ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

3 weeks ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

3 weeks ago