ಕುಂದಾಪುರ

ಪ್ರಗತಿಪರ ಕೃಷಿಕ ಸುಬ್ಬಣ್ಣ ಶೆಟ್ಟಿ ಅವರಿಗೆ ಗೌರವದ ಸನ್ಮಾನ

Share

ಕೃಷಿಕ ಸುಬ್ಬಣ್ಣ ಶೆಟ್ಟಿ ಅವರು ಸನ್ಮಾನವನ್ನು ಸ್ವೀಕರಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಪ್ರಗತಿಪರ ಕೃಷಿಕರಾದ ಸುಬ್ಬಣ್ಣ ಶೆಟ್ಟಿ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ನಾಯ್ಕನಕಟ್ಟೆ ವತಿಯಿಂದ ಶ್ರೀಗೋಪಾಲಕೃಷ್ಣ ಕಲ್ಯಾಣ ಮಂಟಪ ನಾಗೂರುನಲ್ಲಿ ಭಾನುವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಪ್ರಗತಿಪರ ಕೃಷಿಕರಾದ ಸುಬ್ಬಣ್ಣ ಶೆಟ್ಟಿ ಅವರು ಪ್ರಸ್ತುತ ವರ್ಷದಲ್ಲಿ ಶ್ರೀ ಮೂಕಾಂಬಿಕಾ ಬೆಳೆಗಾರರ ಒಕ್ಕೂಟಕ್ಕೆ ಸುಮಾರು 250 ರಿಂದ 260 ಕ್ವಿಂಟಾಲ್ ಭತ್ತವನ್ನು ನೀಡುವುದರ ಮೂಲಕ ಬೈಂದೂರು ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.ಸುಬ್ಬಣ್ಣ ಶೆಟ್ಟಿ ಅವರು ಮುಂಗಾರಿನಲ್ಲಿ ಭತ್ತವನ್ನು ಬೆಳೆಯುತ್ತಿದ್ದು.ಹಿಂಗಾರಿನಲ್ಲಿ ಕಲ್ಲಂಗಡಿ ಹಣ್ಣನ್ನು ಬೆಳೆಯುತ್ತಾರೆ.ತಮ್ಮ ಪೂರ್ತಿ ಸಮಯವನ್ನು ಕೃಷಿಗಾಗಿ ವಿನಿಯೋಗ ಮಾಡುತ್ತಿರುವ ಸುಬ್ಬಣ್ಣ ಶೆಟ್ಟಿ ಅವರು ಕೃಷಿ ಕ್ಷೇತ್ರವನ್ನು ವ್ಯವಹಾರಿಕಾ ಕ್ಷೇತ್ರವನ್ನಾಗಿ ಪರಿಗಣಿಸಿಕೊಂಡು ವರ್ಷಕ್ಕೆ ಲಕ್ಷಾಂತರ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.ಹಡವು ಬಿದ್ದ ಭೂಮಿಗಳನ್ನು ಲಿಜಿಗೆ ಪಡೆದು ಕೃಷಿಯನ್ನು ಮಾಡುತ್ತಿರುವ ಸುಬ್ಬಣ್ಣ ಶೆಟ್ಟಿ ಅವರು ಉತ್ತಮ ಹೈನುಗಾರರು ಕೂಡ ಹೌದು.ಕೃಷಿ ಜತೆಗೆ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು.ಕಿರಿಮಂಜೇಶ್ವರ ಗ್ರಾಮ ಪಂಚಾಯಿತಿ ಸದಸ್ಯರಾಗಿ,ಹಾಲು ಸೊಸೈಟಿ ಅಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.
ಪ್ರಗರಿಪರ ಕೃಷಿಕರಾದ ಸುಬ್ಬಣ್ಣ ಶೆಟ್ಟಿ ಅವರು ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟದ ವತಿಯಿಂದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ,ಸನ್ಮಾನವನ್ನು ಸ್ವೀಕರಿಸಿದ್ದು ಬಹಳಷ್ಟು ಖುಷಿ ಆಗಿದ್ದು,ಕೃಷಿಯಲ್ಲಿ ತೊಡಗಿಕೊಳ್ಳಲು ಇನ್ನಷ್ಟು ಪ್ರೇರಣೆ ನೀಡಿದೆ ಎಂದು ತಮ್ಮ ಅಭಿಪ್ರಾಯವನ್ನು ಮಾಧ್ಯಮದವರ ಜತೆ ಹಚ್ಚಿಕೊಂಡರು.
ಪ್ರಗತಿಪರ ಕೃಷಿಕರಾದ ಸುಬ್ಬಣ್ಣ ಶೆಟ್ಟಿ ಅವರ ಕೃಷಿ ಕಾಯಕವನ್ನು ಗುರುತಿಸುವ ಕಾರ್ಯ ಜಿಲ್ಲಾಡಳಿತ ಮಾಡಬೇಕಾಗಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago