ಕುಂದಾಪುರ

ಉಮಾಮಹೇಶ್ವರ ದೇವರಿಗೆ ಚಂಡಿಕಾ ಹೋಮ ಸಮರ್ಪಣೆ

Share

ಕುಂದಾಪುರ:ಉಪ್ಪುಂದ ಮಾದಯ್ಯ ಶೆಟ್ರಮನೆ ಮೂಲಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶಿಲಾಮಯ ಮಂದಿರ ಲೋಕಾರ್ಪಣೆ ಹಾಗೂ ಶ್ರೀ ಉಮಾಮಹೇಶ್ವರ,ಶ್ರೀ ನಂದಿಕೇಶ್ವರ ಹಾಗೂ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾಪನೆ ಅಂಗವಾಗಿ ಶ್ರೀ ದೇವರಿಗೆ ಪಂಚಕುಂಡಗಳಲ್ಲಿ ಅಧಿವಾಸಹೋಮ,
ತತ್ವಹೋಮ,ವಿಶೇಷ ಚಂಡಿಕಾ ಹವನ,ಬಲಿ ಪೂಜೆ,ಪ್ರಸಾದ ವಿತರಣೆ ಕಾರ್ಯಕ್ರಮ ಮಂಗಳವಾರ ನಡೆಯಿತು.
ಸಂಜೆ ಕಟ್ಟೆ ಉತ್ಸವ, ಅಷ್ಟಾವಧಾನ ಸೇವೆ ಜರುಗಿತು.
ಯು.ಸದಾನಂದ ಶೆಟ್ಟಿ ಮಾತನಾಡಿ,ಶ್ರೀ ದೇವರ ದೇವತಾ ಕಾರ್ಯಕ್ರಮಗಳು ಯಾವುದೇ ರೀತಿಯ ವಿಘ್ನವಿಲ್ಲದೆ‌ ನೆರವೇರುತ್ತಿದ್ದು.ಭಕ್ತರ ಸಮೂಹವೇ ಕ್ಷೇತ್ರಕ್ಕೆ ಹರಿದು ಬರುತ್ತಿದೆ.ನಾಳೆ ದಿನ ನಡೆಯುವ ಶ್ರೀ ದೇವರ ರಥೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೇಳಿಕೊಂಡರು.
ಜ್ಯೋತಿ ರತ್ನಾಕರ ಶೆಟ್ಟಿ ಅವರು ಮಾತನಾಡಿ,ಶ್ರೀ ದೇವರ ದೇವತಾ ಕಾರ್ಯಕ್ರಮ ಫ್ರೆಬ್ರವರಿ 21 ರಿಂದ ಆರಂಭಗೊಂಡು ಫೆಬ್ರವರಿ 27ಕ್ಕೆ ಸಂಪನ್ನಗೊಳ್ಳಲಿದೆ.ನಾಳೆ ನಡೆಯುವ ಶ್ರೀ ದೇವರ ರಥೋತ್ಸವ ಕಾರ್ಯಕ್ರಮದಲ್ಲಿ ಊರಪರ ಊರಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕುಟುಂಬಸ್ಥರ ಪರವಾಗಿ ಕೇಳಿಕೊಂಡರು .
ಈ‌ ಸಂದರ್ಭದಲ್ಲಿ
ಸಿದ್ದಮ್ಮ ಮಾದಯ್ಯ ಶೆಟ್ಟಿ ಫ್ಯಾಮಿಲಿ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷರಾದ ಯು.ಸೀತಾರಾಮ ಶೆಟ್ಟಿ,ಸದಸ್ಯರಾದ ನಾರಾಯಣ ಎಂ ಶೆಟ್ಟಿ,ಯು.ಬಿ ಶೆಟ್ಟಿ,ಭುಜಂಗಯ್ಯ ಶೆಟ್ಟಿ,ಹರೀಶ್ ಕುಮರ್ ಶೆಟ್ಟಿ ಹಾಗೂ ಸಹದೋರರು
ಉಪಸ್ಥಿತರಿದ್ದರು.
ಫ್ರೆಬ್ರವರಿ 26 ರಂದು ನೂತನ ರಥಯಾತ್ರೆ ನಡೆಯಲಿದೆ.
ಫೆಬ್ರವರಿ 27 ರ ಗುರುವಾರದಂದು ಬ್ರಹ್ಮಕಲಾಶಾಭಿಷೇಕ,ಮಹಾಅನ್ನಸಂತರ್ಪಣೆ ನಡೆಯಲಿದೆ.

Advertisement

Share
Team Kundapur Times

Recent Posts

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

6 days ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

3 months ago