ಕುಂದಾಪುರ

ಉಮಾಮಹೇಶ್ವರ ದೇವರಿಗೆ ಚಂಡಿಕಾ ಹೋಮ ಸಮರ್ಪಣೆ

Share

ಕುಂದಾಪುರ:ಉಪ್ಪುಂದ ಮಾದಯ್ಯ ಶೆಟ್ರಮನೆ ಮೂಲಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶಿಲಾಮಯ ಮಂದಿರ ಲೋಕಾರ್ಪಣೆ ಹಾಗೂ ಶ್ರೀ ಉಮಾಮಹೇಶ್ವರ,ಶ್ರೀ ನಂದಿಕೇಶ್ವರ ಹಾಗೂ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾಪನೆ ಅಂಗವಾಗಿ ಶ್ರೀ ದೇವರಿಗೆ ಪಂಚಕುಂಡಗಳಲ್ಲಿ ಅಧಿವಾಸಹೋಮ,
ತತ್ವಹೋಮ,ವಿಶೇಷ ಚಂಡಿಕಾ ಹವನ,ಬಲಿ ಪೂಜೆ,ಪ್ರಸಾದ ವಿತರಣೆ ಕಾರ್ಯಕ್ರಮ ಮಂಗಳವಾರ ನಡೆಯಿತು.
ಸಂಜೆ ಕಟ್ಟೆ ಉತ್ಸವ, ಅಷ್ಟಾವಧಾನ ಸೇವೆ ಜರುಗಿತು.
ಯು.ಸದಾನಂದ ಶೆಟ್ಟಿ ಮಾತನಾಡಿ,ಶ್ರೀ ದೇವರ ದೇವತಾ ಕಾರ್ಯಕ್ರಮಗಳು ಯಾವುದೇ ರೀತಿಯ ವಿಘ್ನವಿಲ್ಲದೆ‌ ನೆರವೇರುತ್ತಿದ್ದು.ಭಕ್ತರ ಸಮೂಹವೇ ಕ್ಷೇತ್ರಕ್ಕೆ ಹರಿದು ಬರುತ್ತಿದೆ.ನಾಳೆ ದಿನ ನಡೆಯುವ ಶ್ರೀ ದೇವರ ರಥೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೇಳಿಕೊಂಡರು.
ಜ್ಯೋತಿ ರತ್ನಾಕರ ಶೆಟ್ಟಿ ಅವರು ಮಾತನಾಡಿ,ಶ್ರೀ ದೇವರ ದೇವತಾ ಕಾರ್ಯಕ್ರಮ ಫ್ರೆಬ್ರವರಿ 21 ರಿಂದ ಆರಂಭಗೊಂಡು ಫೆಬ್ರವರಿ 27ಕ್ಕೆ ಸಂಪನ್ನಗೊಳ್ಳಲಿದೆ.ನಾಳೆ ನಡೆಯುವ ಶ್ರೀ ದೇವರ ರಥೋತ್ಸವ ಕಾರ್ಯಕ್ರಮದಲ್ಲಿ ಊರಪರ ಊರಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕುಟುಂಬಸ್ಥರ ಪರವಾಗಿ ಕೇಳಿಕೊಂಡರು .
ಈ‌ ಸಂದರ್ಭದಲ್ಲಿ
ಸಿದ್ದಮ್ಮ ಮಾದಯ್ಯ ಶೆಟ್ಟಿ ಫ್ಯಾಮಿಲಿ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷರಾದ ಯು.ಸೀತಾರಾಮ ಶೆಟ್ಟಿ,ಸದಸ್ಯರಾದ ನಾರಾಯಣ ಎಂ ಶೆಟ್ಟಿ,ಯು.ಬಿ ಶೆಟ್ಟಿ,ಭುಜಂಗಯ್ಯ ಶೆಟ್ಟಿ,ಹರೀಶ್ ಕುಮರ್ ಶೆಟ್ಟಿ ಹಾಗೂ ಸಹದೋರರು
ಉಪಸ್ಥಿತರಿದ್ದರು.
ಫ್ರೆಬ್ರವರಿ 26 ರಂದು ನೂತನ ರಥಯಾತ್ರೆ ನಡೆಯಲಿದೆ.
ಫೆಬ್ರವರಿ 27 ರ ಗುರುವಾರದಂದು ಬ್ರಹ್ಮಕಲಾಶಾಭಿಷೇಕ,ಮಹಾಅನ್ನಸಂತರ್ಪಣೆ ನಡೆಯಲಿದೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago