ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಸ್ಟಾಕ್ ಮಾರ್ಕೆಟ್,ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

Share

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದಿಂದ ಸ್ಟಾಕ್ ಮಾರ್ಕೆಟ್ ನಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಹೂಡಿಕೆಯ ಕುರಿತು ಕಾರ್ಯಾಗಾರ ನಡೆಯಿತು. ಅಕ್ಷತ್ರಾಜ್ ಜೈನ್ ಹಿರಿಯ ಸಹಾಯಕ ಪ್ರಾಧ್ಯಾಪಕರು ನಿರ್ವಹಣಾ ಅಧ್ಯಯನ ವಿಭಾಗ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಇಂಜಿನಿಯರಿಂಗ್ ಮಿಜಾರು ಮೂಡಬಿದ್ರೆ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಮುಂದಿನ ಜೀವನದಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಹೂಡಿಕೆಯ ಕುರಿತು ಯಾವೆಲ್ಲ ನೆಲೆಯಲ್ಲಿ ಮುಂದುವರೆಯಲು ಸಾಧ್ಯವಿದೆ ಎನ್ನುವುದರ ಕುರಿತು ಸೂಕ್ತವಾದ ಮಾಹಿತಿಯನ್ನು ನೀಡಿದರು. ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ಹಾಗೂ ಕಾಲೇಜಿನ ನಿರ್ದೇಶಕಿ ಮಮತಾ ಹಾಗೂ ಪ್ರಾಂಶುಪಾಲರಾದ ಡಾ ಸೀಮಾ ಜಿ ಭಟ್ ಉಪಸ್ಥಿತರಿದ್ದರು.ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶೈಲಾ,ನಿರ್ವಹಣಾ ವಿಭಾಗದ ಮುಖ್ಯಸ್ಥೆ ಶ್ರೀಮತಿ ಗೀತಾ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿನಿ ನಂದಿನಿ ನಿರೂಪಿಸಿದರು, ಐಶ್ವರ್ಯ ಸ್ವಾಗತಿಸಿದರು , ಕಾವ್ಯ ಅತಿಥಿಗಳನ್ನು ಪರಿಚಯಿಸಿದರು,ಮಿಥಿಲ್ ವಂದಿಸಿದರು.

Advertisement

Share

Leave a comment

Your email address will not be published. Required fields are marked *

You cannot copy content of this page