ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದಿಂದ ಸ್ಟಾಕ್ ಮಾರ್ಕೆಟ್ ನಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಹೂಡಿಕೆಯ ಕುರಿತು ಕಾರ್ಯಾಗಾರ ನಡೆಯಿತು. ಅಕ್ಷತ್ರಾಜ್ ಜೈನ್ ಹಿರಿಯ ಸಹಾಯಕ ಪ್ರಾಧ್ಯಾಪಕರು ನಿರ್ವಹಣಾ ಅಧ್ಯಯನ ವಿಭಾಗ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಇಂಜಿನಿಯರಿಂಗ್ ಮಿಜಾರು ಮೂಡಬಿದ್ರೆ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಮುಂದಿನ ಜೀವನದಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಹೂಡಿಕೆಯ ಕುರಿತು ಯಾವೆಲ್ಲ ನೆಲೆಯಲ್ಲಿ ಮುಂದುವರೆಯಲು ಸಾಧ್ಯವಿದೆ ಎನ್ನುವುದರ ಕುರಿತು ಸೂಕ್ತವಾದ ಮಾಹಿತಿಯನ್ನು ನೀಡಿದರು. ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ಹಾಗೂ ಕಾಲೇಜಿನ ನಿರ್ದೇಶಕಿ ಮಮತಾ ಹಾಗೂ ಪ್ರಾಂಶುಪಾಲರಾದ ಡಾ ಸೀಮಾ ಜಿ ಭಟ್ ಉಪಸ್ಥಿತರಿದ್ದರು.ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶೈಲಾ,ನಿರ್ವಹಣಾ ವಿಭಾಗದ ಮುಖ್ಯಸ್ಥೆ ಶ್ರೀಮತಿ ಗೀತಾ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿನಿ ನಂದಿನಿ ನಿರೂಪಿಸಿದರು, ಐಶ್ವರ್ಯ ಸ್ವಾಗತಿಸಿದರು , ಕಾವ್ಯ ಅತಿಥಿಗಳನ್ನು ಪರಿಚಯಿಸಿದರು,ಮಿಥಿಲ್ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…