ಕುಂದಾಪುರ

ಹೊಳ್ಮಗೆ ಶ್ರೀ ಹೋರ್ ಬೊಬ್ಬರ್ಯ ದೈವಸ್ಥಾನದ ವಾರ್ಷಿಕ ಗೆಂಡ ಸೇವೆ,ಮಹಾ ಅನ್ನಸಂಪರ್ಣೆ

Share

Advertisement
Advertisement
ಅಮ್ಮನವರು
(ಹೋರ್ ಬೊಬ್ಬರ್ಯ)

ಕುಂದಾಪುರ:ಹೊಳ್ಮಗೆ ಶ್ರೀ ಹೋರ್ ಬೊಬ್ಬರ್ಯ ದೈವಸ್ಥಾನದ ವಾರ್ಷಿಕ ಗೆಂಡ ಸೇವೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.
ಶ್ರೀ ಹೋರ್ ಬೊಬ್ಬರ್ಯ ದೈವಸ್ಥಾನದ ವಾರ್ಷಿಕ ಹಬ್ಬದ ಅಂಗವಾಗಿ ಶ್ರೀ ದೇವರಿಗೆ ಮಹಾ ಮಂಗಳಾರತಿ ಸೇವೆ,ಹಣ್ಣು ಕಾಯಿ ಸೇವೆ,ಗೆಂಡ ಸೇವೆ,ಯಕ್ಷಗಾನ ಸೇವೆ,ದೈವ ದರ್ಶನ ಸೇವೆ,ಪಾಣರಾಟ ಸೇವೆ,ತುಲಾಭಾರ ಸೇವೆ,ವಿಶೇಷ ಪೂಜೆ ಜರುಗಿತು.
ವಾರ್ಷಿಕ ಹಬ್ಬದ ಪ್ರಯುಕ್ತ ದೈವಸ್ಥಾನವನ್ನು ಪುಷ್ಪಾಲಂಕಾರ ಹಾಗೂ ದೀಪಾಲಂಕಾರದಿಂದ ಶೃಂಗಾರಿಸಲಾಗಿತ್ತು.
ಶ್ರೀಹೋರ್ ಬೊಬ್ಬರ್ಯ ದೈವಸ್ಥಾನ,ಶ್ರೀ ನೆತ್ರ ಹ್ಯಾಗುಳಿ ಹಾಗೂ ಬಂಟರ ಗರಡಿ ದೈವಸ್ಥಾನದ ಮೂರು ದೈವಗಳು ಜೊತೆಯಾಗಿ ಕೊಡಿ ನೀರಿಗೆ ಹೋಗುವುದು ಇಲ್ಲಿನ ವಿಶೇಷವಾದ ಆಚರಣೆ ಆಗಿದೆ. ಚಂಡೆ,ವಾದ್ಯ ಘೋಷದೊಂದಿಗೆ ದೈವವನ್ನು
ಮೆರವಣಿಗೆ ಮೂಲಕ ಕೊಡಿ ನೀರಿಗೆ ಕರೆದುಕೊಂಡು ಹೋಗಲಾಗುತ್ತದೆ.ಇದು ಅನಾದಿ ಕಾಲದಿಂದಲೂ ನಡೆದು ಬಂದ ಪದ್ಧತಿ ಆಗಿದೆ.
ಶ್ರೀ ಹೋರ್ ಬೊಬ್ಬರ್ಯ ಮತ್ತು ಅಮ್ಮನವರು ಹಾಗೂ ಸಹಪರಿವಾರ ದೈವಗಳ ಕಾರಣಿಕ ಶಕ್ತಿ ಮತ್ತು ದೇವರ ಮೇಲಿರುವ ನಂಬಿಕೆಯಿಂದ ವರ್ಷದಿಂದ ವರ್ಷಕ್ಕೆ ಭಕ್ತ ಸಮೂಹದ ಸಂಖ್ಯೆ ಅಧಿಕವಾಗುತ್ತಿದೆ.

Advertisement
Advertisement
Advertisement
Advertisement

Share
Team Kundapur Times

Recent Posts

ಹೊಳ್ಮಗೆ ಶ್ರೀ ಬ್ರಹ್ಮ ಬೈದರ್ಕಳ ಕೋಟಿ ಚೆನ್ನಯ್ಯ ಪಂರ್ಜುಲಿ ಹಾಗೂ ಪರಿವಾರ ದೈವಗಳ ವಾರ್ಷಿಕ ಗೆಂಡಸೇವೆ

(ಪಂಜುರ್ಲಿ) ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮದ ಹೊಳ್ಮಗೆ ಶ್ರೀ ಬ್ರಹ್ಮ ಬೈದರ್ಕಳ ಕೋಟಿ ಚೆನ್ನಯ್ಯ ಪಂಜುರ್ಲಿ ಹಾಗೂ…

4 hours ago

ಹೊಳ್ಮಗೆ ನೇತ್ರಹೈಗುಳಿ,ಸಪರಿವಾರ ದೈವಸ್ಥಾನದ ವಾರ್ಷಿಕ ಗೆಂಡೆ ಸೇವೆ ಸಂಪನ್ನ

ನೇತ್ರ ಹೈಗುಳಿ ಕುಂದಾಪುರ:ಹಕ್ಲಾಡಿ ಗ್ರಾಮದ ಹೊಳ್ಮಗೆ ಶ್ರೀ ನೇತ್ರ ಹೈಗುಳಿ ಹಾಗೂ ಸಪರಿವಾರ ದೈವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ ಗೆಂಡ ಸೇವೆ…

5 hours ago

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಸ್ಟಾಕ್ ಮಾರ್ಕೆಟ್,ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದಿಂದ ಸ್ಟಾಕ್ ಮಾರ್ಕೆಟ್ ನಲ್ಲಿ ವೃತ್ತಿ ಮಾರ್ಗದರ್ಶನ…

13 hours ago

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಿದ್ಯಾರ್ಥಿನಿ ಪ್ರಾನಂಜಲಿ ರಾಜ್ಯಕ್ಕೆ ಪ್ರಥಮ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಪದವಿ ಕಾಲೇಜಿನ ವಿದ್ಯಾರ್ಥಿನಿ ಪ್ರಾನಂಜಲಿ ಕೆ.ಹೆಚ್ ಬಿಸ್ಸಿ. ಪುಡ್ ಟೆಕ್ನಾಲಜಿ 2021-2024 ಸಾಲಿನ…

1 day ago

ಆಲೂರು:ಸಾವಿನಲ್ಲೂ ಸಾರ್ಥಕತೆ ಮೆರೆದ ರತ್ನಾಕರ ಜೊಯಿಸ್

ಕುಂದಾಪುರ:ತಾಲೂಕಿನ ಆಲೂರು ಗ್ರಾಮದ ನಿವಾಸಿ ರತ್ನಾಕರ ಜೊಯಿಸ್ (48) ಅವರು ತಮ್ಮ ಅಂಗಾಂಗಗಳನ್ನು ದಾನ ಮಾಡುವುದರ ಮುಖೇನ ಸಾವಿನಲ್ಲೂ ಸಾರ್ಥಕತೆ…

2 weeks ago

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ, ಉಪನ್ಯಾಸಕರಿಗೆ “ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ” ಕಾರ್ಯಕ್ರಮ

ಕುಂದಾಪುರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಎಲ್ಲಾ ಉಪನ್ಯಾಸಕರಿಗೆ "ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ" ಎಂಬ ಕಾರ್ಯಕ್ರಮ ನಡೆಸಲಾಯಿತು .ಈ…

2 weeks ago