ಕುಂದಾಪುರ:ಹೊಳ್ಮಗೆ ಶ್ರೀ ಹೋರ್ ಬೊಬ್ಬರ್ಯ ದೈವಸ್ಥಾನದ ವಾರ್ಷಿಕ ಗೆಂಡ ಸೇವೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.
ಶ್ರೀ ಹೋರ್ ಬೊಬ್ಬರ್ಯ ದೈವಸ್ಥಾನದ ವಾರ್ಷಿಕ ಹಬ್ಬದ ಅಂಗವಾಗಿ ಶ್ರೀ ದೇವರಿಗೆ ಮಹಾ ಮಂಗಳಾರತಿ ಸೇವೆ,ಹಣ್ಣು ಕಾಯಿ ಸೇವೆ,ಗೆಂಡ ಸೇವೆ,ಯಕ್ಷಗಾನ ಸೇವೆ,ದೈವ ದರ್ಶನ ಸೇವೆ,ಪಾಣರಾಟ ಸೇವೆ,ತುಲಾಭಾರ ಸೇವೆ,ವಿಶೇಷ ಪೂಜೆ ಜರುಗಿತು.
ವಾರ್ಷಿಕ ಹಬ್ಬದ ಪ್ರಯುಕ್ತ ದೈವಸ್ಥಾನವನ್ನು ಪುಷ್ಪಾಲಂಕಾರ ಹಾಗೂ ದೀಪಾಲಂಕಾರದಿಂದ ಶೃಂಗಾರಿಸಲಾಗಿತ್ತು.
ಶ್ರೀಹೋರ್ ಬೊಬ್ಬರ್ಯ ದೈವಸ್ಥಾನ,ಶ್ರೀ ನೆತ್ರ ಹ್ಯಾಗುಳಿ ಹಾಗೂ ಬಂಟರ ಗರಡಿ ದೈವಸ್ಥಾನದ ಮೂರು ದೈವಗಳು ಜೊತೆಯಾಗಿ ಕೊಡಿ ನೀರಿಗೆ ಹೋಗುವುದು ಇಲ್ಲಿನ ವಿಶೇಷವಾದ ಆಚರಣೆ ಆಗಿದೆ. ಚಂಡೆ,ವಾದ್ಯ ಘೋಷದೊಂದಿಗೆ ದೈವವನ್ನು
ಮೆರವಣಿಗೆ ಮೂಲಕ ಕೊಡಿ ನೀರಿಗೆ ಕರೆದುಕೊಂಡು ಹೋಗಲಾಗುತ್ತದೆ.ಇದು ಅನಾದಿ ಕಾಲದಿಂದಲೂ ನಡೆದು ಬಂದ ಪದ್ಧತಿ ಆಗಿದೆ.
ಶ್ರೀ ಹೋರ್ ಬೊಬ್ಬರ್ಯ ಮತ್ತು ಅಮ್ಮನವರು ಹಾಗೂ ಸಹಪರಿವಾರ ದೈವಗಳ ಕಾರಣಿಕ ಶಕ್ತಿ ಮತ್ತು ದೇವರ ಮೇಲಿರುವ ನಂಬಿಕೆಯಿಂದ ವರ್ಷದಿಂದ ವರ್ಷಕ್ಕೆ ಭಕ್ತ ಸಮೂಹದ ಸಂಖ್ಯೆ ಅಧಿಕವಾಗುತ್ತಿದೆ.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…