ಕುಂದಾಪುರ

ಹೊಳ್ಮಗೆ ಶ್ರೀ ಹೋರ್ ಬೊಬ್ಬರ್ಯ ದೈವಸ್ಥಾನದ ವಾರ್ಷಿಕ ಗೆಂಡ ಸೇವೆ,ಮಹಾ ಅನ್ನಸಂಪರ್ಣೆ

Share

Advertisement
Advertisement
Advertisement
ಅಮ್ಮನವರು
(ಹೋರ್ ಬೊಬ್ಬರ್ಯ)

ಕುಂದಾಪುರ:ಹೊಳ್ಮಗೆ ಶ್ರೀ ಹೋರ್ ಬೊಬ್ಬರ್ಯ ದೈವಸ್ಥಾನದ ವಾರ್ಷಿಕ ಗೆಂಡ ಸೇವೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.
ಶ್ರೀ ಹೋರ್ ಬೊಬ್ಬರ್ಯ ದೈವಸ್ಥಾನದ ವಾರ್ಷಿಕ ಹಬ್ಬದ ಅಂಗವಾಗಿ ಶ್ರೀ ದೇವರಿಗೆ ಮಹಾ ಮಂಗಳಾರತಿ ಸೇವೆ,ಹಣ್ಣು ಕಾಯಿ ಸೇವೆ,ಗೆಂಡ ಸೇವೆ,ಯಕ್ಷಗಾನ ಸೇವೆ,ದೈವ ದರ್ಶನ ಸೇವೆ,ಪಾಣರಾಟ ಸೇವೆ,ತುಲಾಭಾರ ಸೇವೆ,ವಿಶೇಷ ಪೂಜೆ ಜರುಗಿತು.
ವಾರ್ಷಿಕ ಹಬ್ಬದ ಪ್ರಯುಕ್ತ ದೈವಸ್ಥಾನವನ್ನು ಪುಷ್ಪಾಲಂಕಾರ ಹಾಗೂ ದೀಪಾಲಂಕಾರದಿಂದ ಶೃಂಗಾರಿಸಲಾಗಿತ್ತು.
ಶ್ರೀಹೋರ್ ಬೊಬ್ಬರ್ಯ ದೈವಸ್ಥಾನ,ಶ್ರೀ ನೆತ್ರ ಹ್ಯಾಗುಳಿ ಹಾಗೂ ಬಂಟರ ಗರಡಿ ದೈವಸ್ಥಾನದ ಮೂರು ದೈವಗಳು ಜೊತೆಯಾಗಿ ಕೊಡಿ ನೀರಿಗೆ ಹೋಗುವುದು ಇಲ್ಲಿನ ವಿಶೇಷವಾದ ಆಚರಣೆ ಆಗಿದೆ. ಚಂಡೆ,ವಾದ್ಯ ಘೋಷದೊಂದಿಗೆ ದೈವವನ್ನು
ಮೆರವಣಿಗೆ ಮೂಲಕ ಕೊಡಿ ನೀರಿಗೆ ಕರೆದುಕೊಂಡು ಹೋಗಲಾಗುತ್ತದೆ.ಇದು ಅನಾದಿ ಕಾಲದಿಂದಲೂ ನಡೆದು ಬಂದ ಪದ್ಧತಿ ಆಗಿದೆ.
ಶ್ರೀ ಹೋರ್ ಬೊಬ್ಬರ್ಯ ಮತ್ತು ಅಮ್ಮನವರು ಹಾಗೂ ಸಹಪರಿವಾರ ದೈವಗಳ ಕಾರಣಿಕ ಶಕ್ತಿ ಮತ್ತು ದೇವರ ಮೇಲಿರುವ ನಂಬಿಕೆಯಿಂದ ವರ್ಷದಿಂದ ವರ್ಷಕ್ಕೆ ಭಕ್ತ ಸಮೂಹದ ಸಂಖ್ಯೆ ಅಧಿಕವಾಗುತ್ತಿದೆ.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

2 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

3 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

6 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

7 days ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

7 days ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago