ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮದ ಹೊಳ್ಮಗೆ ಶ್ರೀ ಬ್ರಹ್ಮ ಬೈದರ್ಕಳ ಕೋಟಿ ಚೆನ್ನಯ್ಯ ಪಂಜುರ್ಲಿ ಹಾಗೂ ಪರಿವಾರ ದೈವಗಳ ಗರಡಿ ದೈವಸ್ಥಾನದಲ್ಲಿ ವಾರ್ಷಿಕ ಗೆಂಡ ಸೇವೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.
ವರ್ಷಂಪ್ರತಿ ನಡೆಯುವ ಶ್ರೀ ದೇವರ ವಾರ್ಷಿಕ ಗೆಂಡಸೇವೆ ಕಾರ್ಯಕ್ರಮದ ಅಂಗವಾಗಿ ದೇವರಿಗೆ ಹೂವಿನ ಅಲಂಕಾರ ಪೂಜೆ,ಮಂಗಳಾರತಿ ಮತ್ತು ಹಣ್ಣುಕಾಯಿ ಸೇವೆ ಹಾಗೂ ತುಲಾಭಾರ ಸೇವೆ,ದೈವದರ್ಶನ ಸೇವೆ,ಹರಕೆ ಕೋಲ ಜರುಗಿತು.
ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಕಷ್ಟ ಕಾಲದಲ್ಲಿ ಹೇಳಿ ಕೊಂಡ ಹರಕೆಯನ್ನು ಸಲ್ಲಿಸಿದರು.
ವಾರ್ಷಿಕ ಹಬ್ಬದ ಅಂಗವಾಗಿ ದೈವಸ್ಥಾನವನ್ನು ಹೂವಿನ ಅಲಂಕಾರ ಮತ್ತು ದೀಪಾಲಂಕಾರದಿಂದ ಶೃಂಗರಿಸಲಾಯಿತು.
ಬಂಟರಗರಡಿ,ಹೋರ್ ಬೊಬ್ಬರ್ಯ ಹಾಗೂ ನೇತ್ರ ಹ್ಯಾಗುಳಿ ದೈವಸ್ಥಾನದ ದೈವಗಳು ಜತೆಯಾಗಿ ಕೊಡಿ ನೀರಿಗೆ ಅರ್ಚಕರ ಮನೆಗೆ ಹೊಗುವುದು ವಿಶೇಷವಾಗಿದೆ.ಚಂಡೆ ಡೋಲು ವಾದ್ಯ ಘೋಷದೊಂದಿಗೆ ದೈವವನ್ನು ಮೆರವಣಿಗೆ ಮೂಲಕ ಕೊಡಿ ನೀರಿಗೆ ಭಕ್ತ ಸಮೂಹವು ಬರಮಾಡಿ ಕೊಳ್ಳುತ್ತಾರೆ.
ಹೊಳ್ಮಗೆ ಶ್ರೀ ಬಹ್ಮ ಬೈದರ್ಕಳ ಕೋಟಿ ಚೆನ್ನಯ್ಯ ಪಂಜುರ್ಲಿ ಹಾಗೂ ಪರಿವಾರ ದೈವಗಳ ಗರಡಿ ದೈವಸ್ಥಾನದ ಕಾರ್ಯದರ್ಶಿ ಚಂದ್ರಹಾಸ ಮಾತನಾಡಿ,400 ವರ್ಷಗಳ ಕಾಲ ಇತಿಹಾಸವನ್ನು
ಹೊಂದಿರುವ ದೈವಸ್ಥಾನವೂ ಬಹಳಷ್ಟು ಪುರಾತನ ದೈವಸ್ಥಾನಗಳಲ್ಲಿ ಒಂದಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇರುವಂತಹ 66 ಗರಡಿಯಲ್ಲಿ ಇದು ಸಹ ಒಂದು ಗರಡಿ ಆಗಿದೆ.ತುಂಬಾ ಜೀರ್ಣಾವಸ್ಥೆಯಲ್ಲಿದ್ದ ದೈವಸ್ಥಾನವನ್ನು ಇತ್ತಿಚಿಗೆ ಪುನರ್ ನಿರ್ಮಾಣ ಮಾಡಲಾಗಿದೆ ಎಂದರು.ಬಂಟರಗರಡಿ,
ಹೋರ್ ಬೊಬ್ಬರ್ಯ,ನೇತ್ರ ಹೈಗುಳಿ ದೈವಸ್ಥಾನದ ಹಬ್ಬ ಒಟ್ಟಿಗೆ ನಡೆಯುವುದು ವಿಶೇಷವಾಗಿದೆ ಎಂದರು.
ದೈವಸ್ಥಾನದ ಗೌರವಾಧ್ಯಕ್ಷರಾದ ಕೆ.ಸೂರ ಮೊಗವೀರ ಅವರು ಮಾತನಾಡಿ,ವಾರ್ಷಿಕ ಗೆಂಡ ಸೇವೆ ಜತೆಗೆ ಹಾಲುಹಬ್ ವಿಶೇಷವಾದ ರೀತಿಯಲ್ಲಿ ನಡೆಯುತ್ತದೆ.ದೈವವನ್ನು ನಂಬಿದ ಕುಟುಂಸ್ಥರು ಉತ್ತರೋತ್ತರವಾಗಿ ಅಭಿವೃದ್ಧಿಗೊಳ್ಳುತ್ತಿರುವುದು ಪಂಜುರ್ಲಿ ದೈವದ ಕಾರಣಿಕ ಶಕ್ತಿಗೆ ಸಾಕ್ಷಿಭೂತವಾಗಿದೆ.ಪಂಜುರ್ಲಿ ಮಾತಾಡಿ ಹಾಳು ಮಾಡುವುದಿಲ್ಲ ನಂಬಿದ ಭಕ್ತರನ್ನು ಎಂದಿಗೂ ಕೈಬಿಡುವುದಿಲ್ಲ.ದೈವಸ್ಥಾವನ್ನು ಅಭಿವೃದ್ಧಿಗೊಳಿಸಲು ಹೊದಂತಹ ಸಂದರ್ಭದಲ್ಲಿ ದೈವವೇ ಮುಂದೆ ನಿಂತು ಎಲ್ಲಾ ಕೆಲಸವನ್ನು ಮಾಡಿಸಿಕೊಂಡಿದೆ ಎಂದು ಕ್ಷೇತ್ರದ ಮಹಿಮೆ ಬಗ್ಗೆ ವಿವರಿಸಿದರು.
ಮೂರು ದೈವಸ್ಥಾನಗಳ ಸಮಿತಿ ಒಳ್ಳೆ ರೀತಿ ಕೂಡುವಿಕೆ ಯಿಂದ ನಡೆದುಕೊಂಡು ಹೋಗುತ್ತಿದೆ.ಬಂಟರ ಗರಡಿ ದೈವಸ್ಥಾನದಲ್ಲಿ ಕಲ್ಯಾಣ ಮಂಟಪವನ್ನು ನಿರ್ಮಿಸಬೇಕೆನ್ನುವ ಆಶೆಯನ್ನು ಹೊಂದಿದ್ದು ಭಕ್ತರು ನಮ್ಮ ಜತೆ ಕೈ ಜೋಡಿಸಬೇಕು
ಎಂದು ಹೇಳಿದರು.ಈ ಸಂದರ್ಭದಲ್ಲಿ ದೈವಸ್ಥಾನದ
ಅಧ್ಯಕ್ಷರಾದ ಸುಭಾಷ್ ಶೆಟ್ಟಿ ಹೊಸ್ಮಗೆ,ಅರ್ಚಕರಾದ
ಸಂಜೀವ ಪೂಜಾರಿ,ಸದಸ್ಯರಾದ ಸತೀಶ ಪೂಜಾರಿ
ಕುಂದಬಾರಂದಾಡಿ,
ಭಾಸ್ಕರ ಪೂಜಾರಿ,ಗ್ರಾಮಸ್ಥರು,ಭಕ್ತಾದಿಗಳು
ಉಪಸ್ಥಿತರಿದ್ದರು.
ವರದಿ: ಜಗದೀಶ್ ದೇವಾಡಿಗ ಮುಳ್ಳಿಕಟ್
9916284048
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…