ಕುಂದಾಪುರ

ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಕುಂದಾಪುರದಲ್ಲಿ ಶುಭಾರಂಭ

Share

ಕುಂದಾಪುರ:ಸಿಸಿಟಿವಿ ಮತ್ತು ಮಾನಿಟರಿಂಗ್ ಕ್ಷೇತ್ರದಲ್ಲಿ ಈಗಾಗಲೇ ಬಹಳಷ್ಟು ಹೆಸರನ್ನು ಗಳಿಸಿರುವ ದಿಗಂತ ಶೆಟ್ಟಿ ಮತ್ತು ದಿಕ್ಷೀತ್ ಶೆಟ್ಟಿ ಮಾಲಿಕತ್ವದಲ್ಲಿ ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಬುಧವಾರ ಕುಂದಾಪುರ ಯುವ ಜನಾ ಕಾಂಪ್ಲೆಕ್ಸ್ನಲ್ಲಿ ಅದ್ದೂರಿಯಾಗಿ ಶುಭರಂಭಗೊಂಡಿತು.
ನಾನಾ ರೀತಿಯ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮುಖೇನ ಸಂಸ್ಥೆಯ ಶುಭಾರಂಭ ಕಾರ್ಯಕ್ರಮವನ್ನು ಮಾಡಲಾಯಿತು.
ಗಣ್ಯರು,ಉದ್ಯಮಿಗಳು,
ಅಧಿಕಾರಿ ವರ್ಗದವರು ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಶುಭಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿ.ಕಛೇರಿ ನಿರ್ವಹಣೆ ತಂತ್ರಜ್ಞಾನ ಬಳಕೆ ಮಾಡಿಕೊಳ್ಳುವಲ್ಲಿ ಸಂಸ್ಥೆಯ ಕಾರ್ಯ ಚಟುವಟಿಕೆಯನ್ನು ಪ್ರಶಂಸಿಸಿದ ಅವರು ಸಂಸ್ಥೆ ಸಾರ್ವಜನಿಕ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸಾಧಿಸಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ವಿನೂತನವಾದ ಶೈಲಿಯಲ್ಲಿ ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಕುಂದಾಪುರ,ಬೈಂದೂರು ಸೇರಿದಂತೆ ಹೊರಾ ಜಿಲ್ಲೆಗಳಲ್ಲಿ ಕಾರ್ಯಚರಣೆ ಮಾಡಲಿದೆ.
ಬೆಳೆಯುತ್ತಿರುವ ನಗರೀಕರಣಕ್ಕೆ ಭತ್ರದೆ ವ್ಯವಸ್ಥೆ ಕಲ್ಪಿಸುವುದು ಸರಕಾರಕ್ಕೂ ಹೊರೆಯಾಗಲಿದ್ದು.ಖಾಸಗಿ ಸಂಸ್ಥೆಗಳ ಅವಶ್ಯಕತೆ ಬಹಳಷ್ಟು ಇದೆ.ಆ ನಿಟ್ಟಿನಲ್ಲಿ ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಸಾರ್ವಜನಿಕ ಸೇವಾ ವಲಯದಲ್ಲಿ ತನ್ನ ವಿಶಿಷ್ಟವಾದ ಕಾರ್ಯಚರಣೆ ಮೂಲಕ ದಿನದ 24 ಗಂಟೆ ಕೆಲಸವನ್ನು ಮಾಡಲು ಮುಂದುಡಿ ಇಟ್ಟಿದೆ.
ಬ್ಯಾಂಕ್,ಸೊಸೈಟಿ,ಶಿಕ್ಷಣ ಸಂಸ್ಥೆ,ಆಭರಣ ಮಳಿಗೆ,ಕಮರ್ಷಿಯಲ್ ಬಿಲ್ಡಿಂಡಿಗ್,ಫ್ಯಾಕ್ಟರಿ,ಕೃಷಿ ತೋಟ,ಮನೆ ಮಠಗಳಿಗೆ ಸೇವೆಯನ್ನು ನೀಡಲಿದ್ದು.ಭತ್ರದೆಯ ದೃಷ್ಟಿಯಿಂದ ಸಾರ್ವಜನಿಕರು ಸಂಸ್ಥೆಯ ಸೇವೆಯನ್ನು ಬಳಸಿಕೊಳ್ಳಬಹುದು.
ಕಳೆದ ಆರು ತಿಂಗಳಿನಿಂದ ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಕುಂದಾಪುರದಲ್ಲಿ ಕೆಲಸವನ್ನು ನಿರ್ವಹಿಸುತ್ತಿದ್ದು ಮಾನಿಟರಿಂಗ್ ಕ್ಷೇತ್ರದಲ್ಲಿ ಅನುಭವವುಳ್ಳ ಸಂಸ್ಥೆಯಾಗಿದೆ.
ಬಳಕೆದಾರರಿಗೆ ಉಚಿತವಾಗಿ ಕ್ಯಾಮೆರಾವನ್ನು ಸಂಸ್ಥೆ ಅಳವಡಿಕೆ ಮಾಡಿಕೊಡುತ್ತಿದ್ದು.ನಿರ್ವಹಣೆ ಶುಲ್ಕವನ್ನು ಮಾತ್ರ ತಿಂಗಳು,ವಾರ್ಷಿಕ ರೂಪದಲ್ಲಿ ಪಡೆದುಕೊಳ್ಳುತ್ತದೆ.
ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿ,ಲೈವ್ ಮಾನಿಟರಿಂಗ್ ಸಿಸ್ಟಮ್ ಕುಂದಾಪುರದಲ್ಲಿ ಹೊಸ ವಿನ್ಯಾಸದೊಂದಿಗೆ ಆರಂಭಗೊಂಡಿರುವುದರಿಂದ ಉತ್ತಮ ಸಂಸ್ಥೆ ನಮ್ಮ ಊರಿಗೆ ದೊರಕಿ ದಂತೆ ಆಗಿದೆ.ಭದ್ರತೆ ದೃಷ್ಟಿಯಿಂದ ಉತ್ತಮ ಬೆಳವಣಿಗೆ ಎಂದು ಸಂಸ್ಥೆಯ ಏಳಿಗೆಗೆ ಶುಭವನ್ನು
ಹಾರೈಸಿದರು.
ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಮಾತನಾಡಿ,
ಇತ್ತೀಚಿನ ದಿನಗಳಲ್ಲಿ ಬೇರೆ ಬೇರೆ ಪ್ರಕರಣಗಳು ಸಂಭವಿಸಿದಂತಹ ಸಂದರ್ಭದಲ್ಲಿ ಸಿಸಿಟಿವಿ ಮಾನಿಟರಿಂಗ್ ಸಿಸ್ಟಮ್ ಬಹಳಷ್ಟು ಕೊಡುಗೆ ನೀಡಿರುವುದನ್ನು ನಾವು ಗಮನಿಸಿದ್ದೇವೆ.ಆವೊಂದು ನಿಟ್ಟಿನಲ್ಲಿ ಹೊಸ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಕುಂದಾಪುರ ಪ್ರದೇಶದಲ್ಲಿ ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ತನ್ನದೆ ರೀತಿಯಲ್ಲಿ ಕೆಲಸವನ್ನು ಮಾಡಲಿದ್ದು.ಸಾರ್ವಜನಿಕ ಕ್ಷೇತ್ರಕ್ಕೆ ಕೊಡುಗೆಯನ್ನು ನೀಡಲು ಮುಂದಾಗಿರುವುದು ಹೊಸ ಬೆಳವಣಿಗೆ ಆಗಿದೆ.
ನಟ ಪ್ರಮೋದ್ ಶೆಟ್ಟಿ ಅವರು ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಸಂಸ್ಥೆಗೆ ಭೇಟಿ ನೀಡಿ ಮಾತನಾಡಿ,ಯುವಕರು ಹೊಸ ಕಲ್ಪನೆ ಮತ್ತು ವಿಶೇಷವಾದ ಆಲೋಚನೆಯೊಂದಿಗೆ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸಂಸ್ಥೆಯನ್ನು ಹುಟ್ಟು ಹಾಕಿದ್ದಾರೆ.ಸಾರ್ವಜನಿಕ ಕ್ಷೇತ್ರಕ್ಕೆ ಭದ್ರತಾ ಸಂಸ್ಥೆಗಳ ಅವಶ್ಯಕತೆ ಬಹಳಷ್ಟಿದ್ದು ಸಮಾಜಕ್ಕೆ ಫೆರ್ಲ್ಸ್ ಸೆಕ್ಯೂರಿಟಿ ಸಿಸ್ಟಮ್ ಸಂಸ್ಥೆ ತನ್ನದೆ ರೀತಿಯಲ್ಲಿ ಕೊಡುಗೆ ನೀಡಲಿದೆ.ಸಂಸ್ಥೆ ಸೌಲಭ್ಯವನ್ನು ಎಲ್ಲರೂ ಬಳಕೆ ಮಾಡಿಕೊಳ್ಳುವಂತೆ ಆಗಲಿ ಎಂದು ಶುಭ ಹಾರೈಸಿದರು.
ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಪಾಲುದಾರರಾದ ದಿಗಂತ ಶೆಟ್ಟಿ ಮತ್ತು ದೀಕ್ಷಿತ್ ಶೆಟ್ಟಿ ಮಾತನಾಡಿ,ಕಳೆದ ಹತ್ತು ವರ್ಷಗಳಿಂದ ಸಿಸಿಟಿವಿ ಅಳವಡಿಕೆ ಸೇರಿದಂತೆ ಮಾನಿಟರಿಂಗ್ ಸಿಸ್ಟಮ್‌ನಲ್ಲಿ ಅನುಭವನ್ನು ಹೊಂದಲಾಗಿದ್ದು.5ಜಿ ನೆಟ್‌ವರ್ಕ್ ಮತ್ತು ಎಐ ತಂತ್ರಜ್ಞಾನ ಬಳಕೆ ಮಾಡಿಕೊಂಡು ಆಧುನಿಕ ವ್ಯವಸ್ಥೆಯೊಂದಿಗೆ ಸಂಸ್ಥೆ ಆರಂಭಿಸಲಾಗಿದೆ.ಸಾರ್ವಜನಿಕರು ಪ್ರೋತ್ಸಾಹ ನೀಡಬೇಕೆಂದು ಕೇಳಿಕೊಂಡರು.
ಈ ಸಂದರ್ಭದಲ್ಲಿ
ಕಂಬದಕೋಣೆ ರೈತರ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ,ಚಲನಚಿತ್ರ ನಟರಾದ ದೀಪಕ್ ಶೆಟ್ಟಿ,ರಕ್ಷಿತ್ ಶೆಟ್ಟಿ,ದಿವ್ಯಧರ ಶೆಟ್ಟಿ ಹಾಗೂ ಪ್ರೇಮಾನಂದ ಕಟ್ಕಕೆರೆ,ಡಾ.ಅತುಲ್ ಕುಮಾರ್ ಶೆಟ್ಟಿ,ಹರ್ಷವರ್ಧನ್,ಸ್ನೇಹಿತರು,ಹಿತೈಷಿಗಳು,ಬಂಧುಗಳು ಭೇಟಿ ನೀಡಿ ಶುಭಹಾರೈಸಿದರು.
ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಪಾಲುದಾರರಾದ ರಕ್ಷಿತ್ ಶೆಟ್ಟಿ ಸ್ವಾಗತಿಸಿದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

4 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

4 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago