ಕುಂದಾಪುರ

ಆಲಸ್ಯಕರ ಜೀವನ ಪದ್ಧತಿಯಿಂದ ಹಣದುಬ್ಬರ ಏರಿಕೆ, ದುಡಿಯುವ ಕೈಗಳಿಂದ ಅಭಿವೃದ್ಧಿ:ಡಾ. ಹೆಚ್.ಎಸ್.ಶೆಟ್ಟಿ

Share

ಕುಂದಾಪುರ:ನಮ್ಮ ದೇಶದಲ್ಲಿ ಆಹಾರ ಹಣದುಬ್ಬರ ಕ್ಕೆ ಸರ್ಕಾರ ಕೈಗೊಳ್ಳುವ ಕ್ರಮಗಳ ಜೊತೆಗೆ ದುಡಿಯುವ ಕೈಗಳಿಗಿಂತ ಉಣ್ಣುವ ಕೈಗಳು ಹೆಚ್ಚಾಗಿದೆ.ಆಲಸ್ಯಕರ ಜೀವನ ಪದ್ಧತಿಯಿಂದ ಹಣದುಬ್ಬರ ಏರಿಕೆ ದರದಲ್ಲಿ ಸಾಗುತ್ತಿದೆ ಎಂದು ಮೈಸೂರು ಮರ್ಕಂಟೈಲ್ ಕಂಪೆನಿಯ ಚೇರ್ ಮೆನ್ ಉದ್ಯಮತಾರೆ ಡಾ. ಹೆಚ್.ಎಸ್.ಶೆಟ್ಟಿ ಹೇಳಿದರು.
ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಗುಸಿಟಿ ಮೈದಾನದಲ್ಲಿ ದೀಪಕ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ಆಯೋಜನೆ ಗೊಂಡಿರುವ ಬೈಂದೂರು ಜೋಡುಕೆರೆ ಕಂಬಳದ ಅಂಗವಾಗಿ ಗುರುವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಬಸ್ರೂರು ಮಹತೋಬಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ.ಅಪ್ಪಣ್ಣ ಹೆಗ್ಡೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಕಂಬಳದ ಇತಿಹಾಸದಲ್ಲಿ ಬೈಂದೂರು ಜೋಡುಕರೆ ಕಂಬಳ ಹೊಸ ಇತಿಹಾಸ ಸೃಷ್ಟಿಸುವಂತೆ ಆಗಲಿ ಎಂದು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯರನ್ನು ಸನ್ಮಾನಿಸಲಾಯಿತು. ಸಬಾಧ್ಯಕ್ಷತೆ ವಹಿಸಿದ್ದ ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ,ಕರಾವಳಿಯ ಗ್ರಾಮೀಣ ಕ್ರೀಡೆ ಕಂಬಳವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹಲವು ದಶಕಗಳಿಂದ ಬೈಂದೂರು ಕಂಬಳೋತ್ಸವ ನಡೆಸಿಕೊಂಡು ಬರುತ್ತಿದ್ದು,ಈ ಬಾರಿ ಮುಳ್ಳಿಕಟ್ಟೆಯಲ್ಲಿ ಆಧುನಿಕ ತಂತ್ರಜ್ಞಾನದೊಂದಿಗೆ ಜೋಡುಕೆರೆ ಕಂಬಳ ಆಯೋಜಿಸಲಾಗಿದೆ. ಮೂರುದಿನಗಳ ಕಾಲ ನಿರಂತರವಾಗಿ ಜೋಡುಕೆರೆ ಕಂಬಳ ನಡೆಸಲಾಗುತ್ತಿದೆ.ಅವಿಭಜಿತ ಜಿಲ್ಲೆಗಳಿಂದ ಕಂಬಳದ ಕೋಣಗಳು ಬಹಳಷ್ಟು ಸಂಖ್ಯೆಯಲ್ಲಿ ಭಾಗವಹಿಸಲಿದೆ ಎಂದರು.
ಡಾ. ಹೆಚ್.ಎಸ್ ಶೆಟ್ಟಿ ಅವರನ್ನು ವಿಶೇಷವಾಗಿ ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಬಳಿಕ ಜನತಾ ಪಿಯು ಕಾಲೇಜು ಹೆಮ್ಮಾಡಿ ವಿದ್ಯಾರ್ಥಿಗಳಿಂದ ಹಾಗೂ ಅರೆಹೊಳೆ ಪ್ರತಿಷ್ಠಾನ ವತಿಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.

ವರದಿ: ಜಗದೀಶ್ ದೇವಾಡಿಗ ಮುಳ್ಳಿಕಟ್ಟೆ

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago