ಕುಂದಾಪುರ

ಆಲಸ್ಯಕರ ಜೀವನ ಪದ್ಧತಿಯಿಂದ ಹಣದುಬ್ಬರ ಏರಿಕೆ, ದುಡಿಯುವ ಕೈಗಳಿಂದ ಅಭಿವೃದ್ಧಿ:ಡಾ. ಹೆಚ್.ಎಸ್.ಶೆಟ್ಟಿ

Share

Advertisement
Advertisement
Advertisement

ಕುಂದಾಪುರ:ನಮ್ಮ ದೇಶದಲ್ಲಿ ಆಹಾರ ಹಣದುಬ್ಬರ ಕ್ಕೆ ಸರ್ಕಾರ ಕೈಗೊಳ್ಳುವ ಕ್ರಮಗಳ ಜೊತೆಗೆ ದುಡಿಯುವ ಕೈಗಳಿಗಿಂತ ಉಣ್ಣುವ ಕೈಗಳು ಹೆಚ್ಚಾಗಿದೆ.ಆಲಸ್ಯಕರ ಜೀವನ ಪದ್ಧತಿಯಿಂದ ಹಣದುಬ್ಬರ ಏರಿಕೆ ದರದಲ್ಲಿ ಸಾಗುತ್ತಿದೆ ಎಂದು ಮೈಸೂರು ಮರ್ಕಂಟೈಲ್ ಕಂಪೆನಿಯ ಚೇರ್ ಮೆನ್ ಉದ್ಯಮತಾರೆ ಡಾ. ಹೆಚ್.ಎಸ್.ಶೆಟ್ಟಿ ಹೇಳಿದರು.
ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಗುಸಿಟಿ ಮೈದಾನದಲ್ಲಿ ದೀಪಕ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ಆಯೋಜನೆ ಗೊಂಡಿರುವ ಬೈಂದೂರು ಜೋಡುಕೆರೆ ಕಂಬಳದ ಅಂಗವಾಗಿ ಗುರುವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಬಸ್ರೂರು ಮಹತೋಬಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ.ಅಪ್ಪಣ್ಣ ಹೆಗ್ಡೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಕಂಬಳದ ಇತಿಹಾಸದಲ್ಲಿ ಬೈಂದೂರು ಜೋಡುಕರೆ ಕಂಬಳ ಹೊಸ ಇತಿಹಾಸ ಸೃಷ್ಟಿಸುವಂತೆ ಆಗಲಿ ಎಂದು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯರನ್ನು ಸನ್ಮಾನಿಸಲಾಯಿತು. ಸಬಾಧ್ಯಕ್ಷತೆ ವಹಿಸಿದ್ದ ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ,ಕರಾವಳಿಯ ಗ್ರಾಮೀಣ ಕ್ರೀಡೆ ಕಂಬಳವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹಲವು ದಶಕಗಳಿಂದ ಬೈಂದೂರು ಕಂಬಳೋತ್ಸವ ನಡೆಸಿಕೊಂಡು ಬರುತ್ತಿದ್ದು,ಈ ಬಾರಿ ಮುಳ್ಳಿಕಟ್ಟೆಯಲ್ಲಿ ಆಧುನಿಕ ತಂತ್ರಜ್ಞಾನದೊಂದಿಗೆ ಜೋಡುಕೆರೆ ಕಂಬಳ ಆಯೋಜಿಸಲಾಗಿದೆ. ಮೂರುದಿನಗಳ ಕಾಲ ನಿರಂತರವಾಗಿ ಜೋಡುಕೆರೆ ಕಂಬಳ ನಡೆಸಲಾಗುತ್ತಿದೆ.ಅವಿಭಜಿತ ಜಿಲ್ಲೆಗಳಿಂದ ಕಂಬಳದ ಕೋಣಗಳು ಬಹಳಷ್ಟು ಸಂಖ್ಯೆಯಲ್ಲಿ ಭಾಗವಹಿಸಲಿದೆ ಎಂದರು.
ಡಾ. ಹೆಚ್.ಎಸ್ ಶೆಟ್ಟಿ ಅವರನ್ನು ವಿಶೇಷವಾಗಿ ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಬಳಿಕ ಜನತಾ ಪಿಯು ಕಾಲೇಜು ಹೆಮ್ಮಾಡಿ ವಿದ್ಯಾರ್ಥಿಗಳಿಂದ ಹಾಗೂ ಅರೆಹೊಳೆ ಪ್ರತಿಷ್ಠಾನ ವತಿಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.

Advertisement

ವರದಿ: ಜಗದೀಶ್ ದೇವಾಡಿಗ ಮುಳ್ಳಿಕಟ್ಟೆ

Advertisement
Advertisement

Share
Team Kundapur Times

Recent Posts

ಶ್ರೀ ಕೃಷ್ಣಾನಂದತೀರ್ಥಮಹಾಸ್ವಾಮಿ ಗೋಪಾಲಕೃಷ್ಣ ದೇವಸ್ಥಾನಕ್ಕೆ ಭೇಟಿ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…

1 week ago

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ “ಐಕ್ಯಂ” 2k25 ಕಾರ್ಯಕ್ರಮ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…

1 week ago

ಯುವಕ ಮಂಡಲ ತ್ರಾಸಿ 59ನೇ ವಾರ್ಷಿಕೋತ್ಸವ ಸಂಭ್ರಮ

ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…

2 weeks ago

ಕೃಷ್ಣ ಮಠ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ

ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…

3 weeks ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕ ಕ್ರೀಡಾಕೂಟ 2024-2025

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…

3 weeks ago

ಸ್ಕೈಡೈನಿಂಗ್ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಸಚಿವ

ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…

3 weeks ago