ಪ್ರಮುಖ

ಸ್ಕೈಡೈನಿಂಗ್ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಸಚಿವ

Share

ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ ತಾಣಗಳನ್ನು ವೀಕ್ಷಿಸಲು ಬಂದಿದ್ದು,ನದಿ ಹಾಗೂ ಸಮುದ್ರದ ಸುಂದರವಾದ ವಾತಾವರಣ ಇಲ್ಲಿದೆ.ತ್ರಾಸಿ- ಮರವಂತೆಯನ್ನು ಅತ್ಯುತ್ತಮ ಪ್ರವಾಸೋದ್ಯಮ ಸ್ಥಳವನ್ನಾಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿಸ್ತೃತ ಯೋಜನೆಯೊಂದಿಗೆ ಪ್ರಸ್ತಾವನೆ ಸಲ್ಲಿಸಿದರೆ,ಒಟ್ಟಾಗಿ ಅಭಿವೃದ್ಧಿಪಡಿಸಬಹುದು ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದರು.
ಅವರು ಗುರುವಾರ ಸಂಜೆ ತ್ರಾಸಿ – ಮರವಂತೆ ಬೀಚ್ ಗೆ ಭೇಟಿ ನೀಡಿದ,ಸಮಯದಲ್ಲಿ ತ್ರಾಸಿ ಬೀಚ್ ನಲ್ಲಿನ ಸ್ಕೈಡೈನಿಂಗ್ ನಲ್ಲಿ ಕುಳಿತು ಪ್ರಕೃತಿ ಸೌಂದರ್ಯ ಸವಿಯುತ್ತಾ ಮಾತನಾಡಿದರು. ಸಮಗ್ರ ಅಭಿವೃದ್ಧಿ ಯೋಜನೆಗಳ ಕುರಿತಂತೆ ಪರಿಶೀಲಿಸಿ,ಸಂಸದರು, ಶಾಸಕರು, ಅಧಿಕಾರಿಗಳೊಂದಿಗೆ ಸಮಾಲೋಚಿಸಿದ ಬಳಿಕ, ಪತ್ರಕರ್ತರೊಂದಿಗೆ ಚರ್ಚಿಸಿದರು.
ಒಂದೆಡೆ ಕಾಡು,ನದಿ, ಇನ್ನೊಂದೆಡೆ ಕಡಲು, ನಡುವೆ ರಾಷ್ಟ್ರೀಯ ಹೆದ್ದಾರಿಯು ಹಾದುಹೋಗುತ್ತದೆ.ಇಂತಹ ಒಳ್ಳೆಯ ಜಾಗಕ್ಕೆ ಬರಲು ತುಬಾ ಖುಷಿ ಆಗ್ತಾ ಇದೆ. ಪ್ರವಾಸೋದ್ಯಮ ದೃಷ್ಟಿಯಿಂದ ಉತ್ತಮ ಅವಕಾಶಗಳನ್ನು ಹೊಂದಿವೆ ಎಂದರು.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ,ಕೇಂದ್ರದ ಸ್ವದೇಶಿ ದರ್ಶನ್ 2.೦ ಯೋಜನೆಯಡಿ ತ್ರಾಸಿ- ಮರವಂತೆಗೆ 112 ಕೋ.ರೂ., ಪಡುವರಿ- ಸೋಮೇಶ್ವರಕ್ಕೆ 1೦೦ ಕೋ.ರೂ. ಹಾಗೂ ಕೊಲ್ಲೂರಿಗೆ ಸೇರಿದಂತೆ ಒಟ್ಟಾರೆ 3೦೦ ಕೋ.ರೂ. ಅನುದಾನ ಒದಗಿಸುವಂತೆ ಕೇಳಿದ್ದೇವೆ. ತಿಂಗಳ ಹಿಂದೆ ಕೇಂದ್ರ ಸಚಿವರನ್ನು ಭೇಟಿಯಾಗಿದ್ದೆವು. ರಾಜ್ಯ ಸರಕಾರದಿಂದ ತ್ರಾಸಿ-ಮರವಂತೆ ಮತ್ತು ಪಡುವರಿ-ಸೋಮೇಶ್ವರ ಅಭಿವೃದ್ಧಿಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಸ್ವತ: ಸಚಿವರೇ ಈ ಸ್ಥಳಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿರುವುದರಿಂದ ಹೆಚ್ಚಿನ ಅನುದಾನದ ನಿರೀಕ್ಷೆಯಿದೆ ಎಂದರು.
ರಾಜ್ಯ ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ರಾಜೇಂದ್ರ ಕೆ.ವಿ., ಬಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಜಿಲ್ಲಾಽಕಾರಿ ಡಾ| ವಿದ್ಯಾ ಕುಮಾರಿ, ಕುಂದಾಪುರ ಉಪವಿಭಾಗಾಽಕಾರಿ ರಶ್ಮಿ ಎಸ್.ಆರ್., ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮತ್ತಿತರರಿದ್ದರು.

Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

6 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

7 days ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago