ಪ್ರಮುಖ

ಯುವಕ ಮಂಡಲ ತ್ರಾಸಿ 59ನೇ ವಾರ್ಷಿಕೋತ್ಸವ ಸಂಭ್ರಮ

Share

Advertisement
Advertisement
Advertisement

ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು ಯುವಕ ಮಂಡಲದ ಗೌರವಾಧ್ಯಕ್ಷ ತ್ರಾಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಿಥುನ್ ಎಂ.ಡಿ ಬಿಜೂರು ಹೇಳಿದರು.
ಕಲ್ಲಾನಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿ ನಡೆದ ಯುವಕ ಮಂಡಲ ತ್ರಾಸಿ ಅದರ 59ನೇ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂಘದ 60ನೇ ವರ್ಷದ ಸವಿನೆನಪಿಗಾಗಿ ಸುಮಾರು 20 ಲಕ್ಷ.ರೂ ವೆಚ್ಚದಲ್ಲಿ ಸ್ವತಃ ಕಟ್ಟಡ ನಿರ್ಮಾಣ ಸಹಿತ ತ್ರಾಸಿ ಜಂಕ್ಷನ್‍ನಲ್ಲಿ ಸುಮಾರು 5 ಲಕ್ಷ.ರೂ ವೆಚ್ಚದಲ್ಲಿ ಸುಸಜ್ಜಿತ ಬಸ್‍ಸ್ಟ್ಯಾಂಡ್ ನಿರ್ಮಿಸುವ ಯೋಜನೆ ಹಾಕಲಾಗಿದೆ ಎಂದರು.
ತ್ರಾಸಿ ಇಗರ್ಜಿ ಧರ್ಮಗುರು ರೊಜಾರಿಯೋ ಫರ್ನಾಂಡೆಸ್ ಉದ್ಘಾಟಿಸಿ ಶುಭಹಾರೈಸಿದರು.ಯುವಜನ ಕ್ರೀಡಾ ಇಲಾಖೆ ಕುಂದಾಪುರ ಕುಸುಮಾಕರ ಶೆಟ್ಟಿ,ಉದ್ಯಮಿ ಶಿವ ಆರ್ ಪೂಜಾರಿ ಬೆಂಗಳೂರು,ನಿವೃತ್ತ ಪಶುವೈದ್ಯಾಧಿಕಾರಿ ರಾಘವೇಂದ್ರ ಶೆಟ್ಟಿ,ನಿವೃತ್ತ ಮುಖ್ಯೋಪಾಧ್ಯಾಯ ಧಾಮಸ್ ರೊಡ್ರಿಗಸ್,ಲಿಪ್ಟನ್ ಒಲಿವೆರಾ,ಭಾವನಾ ಆರ್.ದೇವಾಡಿಗ ತ್ರಾಸಿ,ರಾಘವೇಂದ್ರ ಶೆಟ್ಟಿ ಉಪ್ರಳ್ಳಿ ಉಪಸ್ಥಿತರಿದ್ದರು.ಕಲಿಯುವಿಕೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು,ಆಶಾ ಹಾಗೂ ಆರೋಗ್ಯ ಕಾರ್ಯಕರ್ತೆಯರನ್ನು,ಪವರ್ ಮ್ಯಾನ್,ಸ್ವಚ್ಛತಾ ಸಿಬ್ಬಂದಿ,ಗ್ರಾಮ ಸಹಾಯಕರು ಸೇರಿದಂತೆ ಒಟ್ಟು 50ಕ್ಕೂ ಅಧಿಕ ಜನರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.ಯುವಕ ಮಂಡಲ ತ್ರಾಸಿ ಅಧ್ಯಕ್ಷ ವಿನಯ್ ಪೂಜಾರಿ ಸ್ವಾಗತಿಸಿದರು.ಸುಂದರ ಜಿ ಗಂಗೊಳ್ಳಿ ನಿರೂಪಿಸಿದರು.ಜಗದೀಶ್ ಆಚಾರ್ಯ ವಂದಿಸಿದರು.ಲಕ್ಕಿ ಕೂಪನ್ ಡ್ರಾ ಫಲಿತಾಂಶವನ್ನು ಪ್ರಕಟಿಸಲಾಯಿತು.

Advertisement
Advertisement
Advertisement

Share
Team Kundapur Times

Recent Posts

ಶ್ರೀ ಕೃಷ್ಣಾನಂದತೀರ್ಥಮಹಾಸ್ವಾಮಿ ಗೋಪಾಲಕೃಷ್ಣ ದೇವಸ್ಥಾನಕ್ಕೆ ಭೇಟಿ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…

1 week ago

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ “ಐಕ್ಯಂ” 2k25 ಕಾರ್ಯಕ್ರಮ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…

1 week ago

ಕೃಷ್ಣ ಮಠ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ

ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…

2 weeks ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕ ಕ್ರೀಡಾಕೂಟ 2024-2025

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…

2 weeks ago

ಸ್ಕೈಡೈನಿಂಗ್ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಸಚಿವ

ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…

3 weeks ago

ತ್ರಾಸಿ ಜಂಕ್ಷನ್‍ನಲ್ಲಿ ಅಪಘಾತ:ಕಾರು ಜಖಂ

ತ್ರಾಸಿ:ಚರ್ಚ್ ರೋಡ್ ನಿಂದ ಜಂಕ್ಷನ್ ಮೂಲಕ ವಿರುದ್ಧ ದಿಕ್ಕಿನಲ್ಲಿ ಕ್ರಾಸಿಂಗ್ ತೆಗೆದುಕೊಂಡು ಸಾಗುತ್ತಿದ್ದ ವೇಳೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ…

3 weeks ago