ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು ಯುವಕ ಮಂಡಲದ ಗೌರವಾಧ್ಯಕ್ಷ ತ್ರಾಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಿಥುನ್ ಎಂ.ಡಿ ಬಿಜೂರು ಹೇಳಿದರು.
ಕಲ್ಲಾನಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿ ನಡೆದ ಯುವಕ ಮಂಡಲ ತ್ರಾಸಿ ಅದರ 59ನೇ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂಘದ 60ನೇ ವರ್ಷದ ಸವಿನೆನಪಿಗಾಗಿ ಸುಮಾರು 20 ಲಕ್ಷ.ರೂ ವೆಚ್ಚದಲ್ಲಿ ಸ್ವತಃ ಕಟ್ಟಡ ನಿರ್ಮಾಣ ಸಹಿತ ತ್ರಾಸಿ ಜಂಕ್ಷನ್ನಲ್ಲಿ ಸುಮಾರು 5 ಲಕ್ಷ.ರೂ ವೆಚ್ಚದಲ್ಲಿ ಸುಸಜ್ಜಿತ ಬಸ್ಸ್ಟ್ಯಾಂಡ್ ನಿರ್ಮಿಸುವ ಯೋಜನೆ ಹಾಕಲಾಗಿದೆ ಎಂದರು.
ತ್ರಾಸಿ ಇಗರ್ಜಿ ಧರ್ಮಗುರು ರೊಜಾರಿಯೋ ಫರ್ನಾಂಡೆಸ್ ಉದ್ಘಾಟಿಸಿ ಶುಭಹಾರೈಸಿದರು.ಯುವಜನ ಕ್ರೀಡಾ ಇಲಾಖೆ ಕುಂದಾಪುರ ಕುಸುಮಾಕರ ಶೆಟ್ಟಿ,ಉದ್ಯಮಿ ಶಿವ ಆರ್ ಪೂಜಾರಿ ಬೆಂಗಳೂರು,ನಿವೃತ್ತ ಪಶುವೈದ್ಯಾಧಿಕಾರಿ ರಾಘವೇಂದ್ರ ಶೆಟ್ಟಿ,ನಿವೃತ್ತ ಮುಖ್ಯೋಪಾಧ್ಯಾಯ ಧಾಮಸ್ ರೊಡ್ರಿಗಸ್,ಲಿಪ್ಟನ್ ಒಲಿವೆರಾ,ಭಾವನಾ ಆರ್.ದೇವಾಡಿಗ ತ್ರಾಸಿ,ರಾಘವೇಂದ್ರ ಶೆಟ್ಟಿ ಉಪ್ರಳ್ಳಿ ಉಪಸ್ಥಿತರಿದ್ದರು.ಕಲಿಯುವಿಕೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು,ಆಶಾ ಹಾಗೂ ಆರೋಗ್ಯ ಕಾರ್ಯಕರ್ತೆಯರನ್ನು,ಪವರ್ ಮ್ಯಾನ್,ಸ್ವಚ್ಛತಾ ಸಿಬ್ಬಂದಿ,ಗ್ರಾಮ ಸಹಾಯಕರು ಸೇರಿದಂತೆ ಒಟ್ಟು 50ಕ್ಕೂ ಅಧಿಕ ಜನರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.ಯುವಕ ಮಂಡಲ ತ್ರಾಸಿ ಅಧ್ಯಕ್ಷ ವಿನಯ್ ಪೂಜಾರಿ ಸ್ವಾಗತಿಸಿದರು.ಸುಂದರ ಜಿ ಗಂಗೊಳ್ಳಿ ನಿರೂಪಿಸಿದರು.ಜಗದೀಶ್ ಆಚಾರ್ಯ ವಂದಿಸಿದರು.ಲಕ್ಕಿ ಕೂಪನ್ ಡ್ರಾ ಫಲಿತಾಂಶವನ್ನು ಪ್ರಕಟಿಸಲಾಯಿತು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…