ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ “ಐಕ್ಯಂ” 2025 ಅದ್ದೂರಿಯಿಂದ ನಡೆಯಿತು.
ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ ಸ್ವತಃ ತಾವೇ ವಿನ್ಯಾಸಗೊಳಿಸಿರುವ ಸೀರೆಯ ಮೇಲೆ ಚಿತ್ರಗಳ ಚಿತ್ತಾರ,ಎಂಬ್ರಾಡರಿ ಪ್ರದರ್ಶನ ಮತ್ತು ರ್ಯಾಂಪ್ ವಾಕ್ ಜರುಗಿತು.
ಶೈಕ್ಷಣಿಕವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ನಾನಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.
ರಾಜ್ಯಶಾಸ್ತ್ರ ನಿವೃತ್ತ ಉಪನ್ಯಾಸಕ ಡಾ.ದಯಾನಂದ ನಾಯಕ್ ಮಂಗಳೂರು ವಿಶ್ವವಿದ್ಯಾಲಯ ಹಾಗೂ ಅಧ್ಯಾಪಕರಾದ ಕರುಣಾಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ವಿದ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಭವಿಷ್ಯವನ್ನು ಉತ್ತಮವಾಗಿ ನಿರ್ಮಿಸಿಕೊಳ್ಳುವುದು ನಮ್ಮ ಕೈಯಲ್ಲಿರುತ್ತದೆ.ಮತ್ತು ವಿದ್ಯೆಯ ಜೊತೆಗೆ ನಮ್ಮ ನಡತೆ ಎಂಬುದು ಅತಿ ಮುಖ್ಯವಾದಂತಹ ವಿಚಾರ ಎಂದು ತಿಳಿಸಿದರು.ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ,ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಶಸ್ಸು ಪಡೆಯಲು ಉತ್ತಮವಾದಂತಹ ಸಾಧಿಸುವ ಛಲಬೇಕು ಎಂದು ಶುಭ ಹಾರೈಸಿದರು. ನಿರ್ದೇಶಕಿ ಮಮತಾ ಮತ್ತು ಪ್ರಿನ್ಸಿಪಾಲ್ ಡಾ.ಸೀಮಾ.ಜಿ ಭಟ್ ಮತ್ತು ಸಾಂಸ್ಕೃತಿಕ ಸಮಿತಿಯ ವ್ಯವಸ್ಥಾಪಕಿ ರಾಝಿಕಾ ಉಪಸ್ಥಿತರಿದ್ದರು.ಸಂಸ್ಥೆಯ ಎಲ್ಲಾ ಉಪನ್ಯಾಸಕರ ಮತ್ತು ಉಪನ್ಯಾಸಕೇತರ ವೃಂದದವರು,ವಿದ್ಯಾರ್ಥಿ ವೃಂದದವರು ಭಾಗವಹಿಸಿದ್ದರು. ಉಪನ್ಯಾಸಕಿ ಅನ್ನಪೂರ್ಣ ಮತ್ತು ಪ್ರಿಯ ನಾಯಕ್ ಪರಿಚಯಿಸಿದರು. ಉಪನ್ಯಾಸಕಿ ಸಾಕ್ಷಿತಾ ಸ್ವಾಗತಿಸಿದರು,ಕನ್ನಡ ಉಪನ್ಯಾಸಕಿ ಅನುಪಮ ಪಿ ಭಟ್ ವಂದಿಸಿದರು,ವಾಣಿಜ್ಯ ವಿಭಾಗದ ಉಪನ್ಯಾಸಕಿ ಸ್ವಾತಿ ಕಾರ್ಯಕ್ರಮವನ್ನು ನಿರೂಪಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…