ಕುಂದಾಪುರ

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ “ಐಕ್ಯಂ” 2k25 ಕಾರ್ಯಕ್ರಮ

Share

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ “ಐಕ್ಯಂ” 2025 ಅದ್ದೂರಿಯಿಂದ ನಡೆಯಿತು.
ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ ಸ್ವತಃ ತಾವೇ ವಿನ್ಯಾಸಗೊಳಿಸಿರುವ ಸೀರೆಯ ಮೇಲೆ ಚಿತ್ರಗಳ ಚಿತ್ತಾರ,ಎಂಬ್ರಾಡರಿ ಪ್ರದರ್ಶನ ಮತ್ತು ರ್‍ಯಾಂಪ್ ವಾಕ್ ಜರುಗಿತು.
ಶೈಕ್ಷಣಿಕವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ನಾನಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.
ರಾಜ್ಯಶಾಸ್ತ್ರ ನಿವೃತ್ತ ಉಪನ್ಯಾಸಕ ಡಾ.ದಯಾನಂದ ನಾಯಕ್ ಮಂಗಳೂರು ವಿಶ್ವವಿದ್ಯಾಲಯ ಹಾಗೂ ಅಧ್ಯಾಪಕರಾದ ಕರುಣಾಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ವಿದ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಭವಿಷ್ಯವನ್ನು ಉತ್ತಮವಾಗಿ ನಿರ್ಮಿಸಿಕೊಳ್ಳುವುದು ನಮ್ಮ ಕೈಯಲ್ಲಿರುತ್ತದೆ.ಮತ್ತು ವಿದ್ಯೆಯ ಜೊತೆಗೆ ನಮ್ಮ ನಡತೆ ಎಂಬುದು ಅತಿ ಮುಖ್ಯವಾದಂತಹ ವಿಚಾರ ಎಂದು ತಿಳಿಸಿದರು.ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ,ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಶಸ್ಸು ಪಡೆಯಲು ಉತ್ತಮವಾದಂತಹ ಸಾಧಿಸುವ ಛಲಬೇಕು ಎಂದು ಶುಭ ಹಾರೈಸಿದರು. ನಿರ್ದೇಶಕಿ ಮಮತಾ ಮತ್ತು ಪ್ರಿನ್ಸಿಪಾಲ್ ಡಾ.ಸೀಮಾ.ಜಿ ಭಟ್ ಮತ್ತು ಸಾಂಸ್ಕೃತಿಕ ಸಮಿತಿಯ ವ್ಯವಸ್ಥಾಪಕಿ ರಾಝಿಕಾ ಉಪಸ್ಥಿತರಿದ್ದರು.ಸಂಸ್ಥೆಯ ಎಲ್ಲಾ ಉಪನ್ಯಾಸಕರ ಮತ್ತು ಉಪನ್ಯಾಸಕೇತರ ವೃಂದದವರು,ವಿದ್ಯಾರ್ಥಿ ವೃಂದದವರು ಭಾಗವಹಿಸಿದ್ದರು. ಉಪನ್ಯಾಸಕಿ ಅನ್ನಪೂರ್ಣ ಮತ್ತು ಪ್ರಿಯ ನಾಯಕ್ ಪರಿಚಯಿಸಿದರು. ಉಪನ್ಯಾಸಕಿ ಸಾಕ್ಷಿತಾ ಸ್ವಾಗತಿಸಿದರು,ಕನ್ನಡ ಉಪನ್ಯಾಸಕಿ ಅನುಪಮ ಪಿ ಭಟ್ ವಂದಿಸಿದರು,ವಾಣಿಜ್ಯ ವಿಭಾಗದ ಉಪನ್ಯಾಸಕಿ ಸ್ವಾತಿ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

4 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago