ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಸ್ವರ್ಣಮುಖಿ ರಂಗ ಮಂದಿರದಲ್ಲಿ ಭರತನಾಟ್ಯ ದಿವ್ಯೋತ್ಸವ-ನೃತ್ಯಕಲೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಗುರುವಾರ ನಡೆಯಿತು.
ದೇಗುಲದ ಪವಿತ್ರ ವಾತಾವರಣದ ಮಧ್ಯೆ,ವಿವಿಧ ಭಾಗಗಳಿಂದ ಬಂದ 20ಕ್ಕೂ ಹೆಚ್ಚು ಯುವ ಕಲಾವಿದರು ಭರತನಾಟ್ಯವನ್ನು ಭಕ್ತಿ,ಶಿಸ್ತು ಮತ್ತು ನೃತ್ಯಶೈಲಿಯೊಂದಿಗೆ ಪ್ರಸ್ತುತಪಡಿಸಿದರು.
ದರ್ಶನಾರ್ಥಿಗಳು,ಪಾಲಕರು ಮತ್ತು ಕಲೆ ಪ್ರೇಮಿಗಳು ವೇದಿಕೆಯಲ್ಲಿ ಆಕರ್ಷಕ ಪ್ರದರ್ಶನಗಳಿಂದ ಮೋಹಿತರಾದರು.ರೇವತಿ ಶ್ರೀನಿವಾಸನ್ ಲಾಲಿತ್ಯಭರಿತ ನಿರೂಪಣೆಯಿಂದ ಕಾರ್ಯಕ್ರಮ ನಡೆಸಿಕೊಟ್ಟರು.
ನೃತ್ಯ ಬಿಂಬ ಪ್ರತಿಷ್ಠಾನ ಬೆಂಗಳೂರು ಸ್ಥಾಪಕಿ ಹೇಮ ಎನ್ ಅವರು ಕಾರ್ಯಕ್ರಮವನ್ನು ಆಯೋಸಿದರು.ಭರತನಾಟ್ಯ ಕಲೆಗಳ ಉತ್ಸವದ ಸಹ-ಸ್ಥಾಪಕಿ ಡಾ.ರಘಶ್ರೀ ಸಂಘಟಿಸಿದ್ದರು.
ಕಲೆಗಳ ಉತ್ಸವದ ಸ್ಥಾಪಕ ನಾಗೇಂದ್ರ ಎಸ್.ಗೌಡ ಸಹಕಾರ ನೀಡಿದ್ದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲಾವಿದರಿಗೆ ನೃತ್ಯ ಬಿಂಬ ಮತ್ತು ಕಲೆಗಳ ಉತ್ಸವದ ವತಿಯಿಂದ ಪ್ರಮಾಣಪತ್ರ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಯಿತು.
ದೇಗುಲದ ಆಡಳಿತ ಮಂಡಳಿ ಪ್ರೋತ್ಸಾಹ ನೀಡಿದ್ದರು.
ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಸಂಸ್ಥಾಪಕಿ ಹೇಮ ಮಾತನಾಡಿ,ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಿ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ ನಡೆಸಿಕೊಟ್ಪಿರುವುದು ನಮಗೆ ಬಹಳಷ್ಟು ಖುಷಿ ಕೊಟ್ಟಿದೆ.ಪ್ರೋತ್ಸಾಹ ನೀಡಿದ ದೇಗುಲದ ಆಡಳಿತ ಮಂಡಳಿಗೆ ಧನ್ಯವಾದ ಸಲ್ಲಿಸಿದರು.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…