ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಸ್ವರ್ಣಮುಖಿ ರಂಗ ಮಂದಿರದಲ್ಲಿ ಭರತನಾಟ್ಯ ದಿವ್ಯೋತ್ಸವ-ನೃತ್ಯಕಲೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಗುರುವಾರ ನಡೆಯಿತು.
ದೇಗುಲದ ಪವಿತ್ರ ವಾತಾವರಣದ ಮಧ್ಯೆ,ವಿವಿಧ ಭಾಗಗಳಿಂದ ಬಂದ 20ಕ್ಕೂ ಹೆಚ್ಚು ಯುವ ಕಲಾವಿದರು ಭರತನಾಟ್ಯವನ್ನು ಭಕ್ತಿ,ಶಿಸ್ತು ಮತ್ತು ನೃತ್ಯಶೈಲಿಯೊಂದಿಗೆ ಪ್ರಸ್ತುತಪಡಿಸಿದರು.
ದರ್ಶನಾರ್ಥಿಗಳು,ಪಾಲಕರು ಮತ್ತು ಕಲೆ ಪ್ರೇಮಿಗಳು ವೇದಿಕೆಯಲ್ಲಿ ಆಕರ್ಷಕ ಪ್ರದರ್ಶನಗಳಿಂದ ಮೋಹಿತರಾದರು.ರೇವತಿ ಶ್ರೀನಿವಾಸನ್ ಲಾಲಿತ್ಯಭರಿತ ನಿರೂಪಣೆಯಿಂದ ಕಾರ್ಯಕ್ರಮ ನಡೆಸಿಕೊಟ್ಟರು.
ನೃತ್ಯ ಬಿಂಬ ಪ್ರತಿಷ್ಠಾನ ಬೆಂಗಳೂರು ಸ್ಥಾಪಕಿ ಹೇಮ ಎನ್ ಅವರು ಕಾರ್ಯಕ್ರಮವನ್ನು ಆಯೋಸಿದರು.ಭರತನಾಟ್ಯ ಕಲೆಗಳ ಉತ್ಸವದ ಸಹ-ಸ್ಥಾಪಕಿ ಡಾ.ರಘಶ್ರೀ ಸಂಘಟಿಸಿದ್ದರು.
ಕಲೆಗಳ ಉತ್ಸವದ ಸ್ಥಾಪಕ ನಾಗೇಂದ್ರ ಎಸ್.ಗೌಡ ಸಹಕಾರ ನೀಡಿದ್ದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲಾವಿದರಿಗೆ ನೃತ್ಯ ಬಿಂಬ ಮತ್ತು ಕಲೆಗಳ ಉತ್ಸವದ ವತಿಯಿಂದ ಪ್ರಮಾಣಪತ್ರ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಯಿತು.
ದೇಗುಲದ ಆಡಳಿತ ಮಂಡಳಿ ಪ್ರೋತ್ಸಾಹ ನೀಡಿದ್ದರು.
ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಸಂಸ್ಥಾಪಕಿ ಹೇಮ ಮಾತನಾಡಿ,ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಿ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ ನಡೆಸಿಕೊಟ್ಪಿರುವುದು ನಮಗೆ ಬಹಳಷ್ಟು ಖುಷಿ ಕೊಟ್ಟಿದೆ.ಪ್ರೋತ್ಸಾಹ ನೀಡಿದ ದೇಗುಲದ ಆಡಳಿತ ಮಂಡಳಿಗೆ ಧನ್ಯವಾದ ಸಲ್ಲಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…