ಪ್ರಮುಖ

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

Share

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಸ್ವರ್ಣಮುಖಿ ರಂಗ ಮಂದಿರದಲ್ಲಿ ಭರತನಾಟ್ಯ ದಿವ್ಯೋತ್ಸವ-ನೃತ್ಯಕಲೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಗುರುವಾರ ನಡೆಯಿತು.
ದೇಗುಲದ ಪವಿತ್ರ ವಾತಾವರಣದ ಮಧ್ಯೆ,ವಿವಿಧ ಭಾಗಗಳಿಂದ ಬಂದ 20ಕ್ಕೂ ಹೆಚ್ಚು ಯುವ ಕಲಾವಿದರು ಭರತನಾಟ್ಯವನ್ನು ಭಕ್ತಿ,ಶಿಸ್ತು ಮತ್ತು ನೃತ್ಯಶೈಲಿಯೊಂದಿಗೆ ಪ್ರಸ್ತುತಪಡಿಸಿದರು.
ದರ್ಶನಾರ್ಥಿಗಳು,ಪಾಲಕರು ಮತ್ತು ಕಲೆ ಪ್ರೇಮಿಗಳು ವೇದಿಕೆಯಲ್ಲಿ ಆಕರ್ಷಕ ಪ್ರದರ್ಶನಗಳಿಂದ ಮೋಹಿತರಾದರು.ರೇವತಿ ಶ್ರೀನಿವಾಸನ್ ಲಾಲಿತ್ಯಭರಿತ ನಿರೂಪಣೆಯಿಂದ ಕಾರ್ಯಕ್ರಮ ನಡೆಸಿಕೊಟ್ಟರು.
ನೃತ್ಯ ಬಿಂಬ ಪ್ರತಿಷ್ಠಾನ ಬೆಂಗಳೂರು ಸ್ಥಾಪಕಿ ಹೇಮ ಎನ್ ಅವರು ಕಾರ್ಯಕ್ರಮವನ್ನು ಆಯೋಸಿದರು.ಭರತನಾಟ್ಯ ಕಲೆಗಳ ಉತ್ಸವದ ಸಹ-ಸ್ಥಾಪಕಿ ಡಾ.ರಘಶ್ರೀ ಸಂಘಟಿಸಿದ್ದರು.
ಕಲೆಗಳ ಉತ್ಸವದ ಸ್ಥಾಪಕ ನಾಗೇಂದ್ರ ಎಸ್.ಗೌಡ ಸಹಕಾರ ನೀಡಿದ್ದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲಾವಿದರಿಗೆ ನೃತ್ಯ ಬಿಂಬ ಮತ್ತು ಕಲೆಗಳ ಉತ್ಸವದ ವತಿಯಿಂದ ಪ್ರಮಾಣಪತ್ರ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಯಿತು.
ದೇಗುಲದ ಆಡಳಿತ ಮಂಡಳಿ ಪ್ರೋತ್ಸಾಹ ನೀಡಿದ್ದರು.
ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಸಂಸ್ಥಾಪಕಿ ಹೇಮ ಮಾತನಾಡಿ,ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಿ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ ನಡೆಸಿಕೊಟ್ಪಿರುವುದು ನಮಗೆ ಬಹಳಷ್ಟು ಖುಷಿ ಕೊಟ್ಟಿದೆ.ಪ್ರೋತ್ಸಾಹ ನೀಡಿದ ದೇಗುಲದ ಆಡಳಿತ ಮಂಡಳಿಗೆ ಧನ್ಯವಾದ ಸಲ್ಲಿಸಿದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

4 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

4 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago