ಕುಂದಾಪುರ

ಸ್ಮಶಾನಕ್ಕೆ ದಾರಿ ಕಲ್ಪಿಸುವಂತೆ ಆಗ್ರಹಿಸಿ ಗುಜ್ಜಾಡಿ ಪಂಚಾಯಿತಿ ಎದುರು ಆಹೋರಾತ್ರಿ ಧರಣಿ ಸತ್ಯಾಗ್ರಹ

Share

Advertisement
Advertisement
Advertisement

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆ ಸ್ಮಶಾನ ಹಾಗೂ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಅನಾದಿ ಕಾಲದ ರಸ್ತೆಯನ್ನು ಖಾಸಗಿ ಜಾಗದ ಮಾಲೀಕರು ಬಂದ್ ಮಾಡಿರುವುದನ್ನು ವಿರೋಧಿಸಿ.ಸಾರ್ವಜನಿಕ ಸ್ಮಶಾನವನ್ನು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಿ ಕಂಚುಗೋಡು ಸನ್ಯಾಸಿ ಬಲ್ಲೆ ಗ್ರಾಮಸ್ಥರು ಗುಜ್ಜಾಡಿ ಗ್ರಾಮ ಪಂಚಾಯಿತಿ ಎದುರುಗಡೆ ಅಹೋರಾತ್ರಿ ಧರಣಿ ಸತ್ಯಾಗ್ರಹದ ಮೂಲಕ ಪ್ರತಿಭಟನೆಯನ್ನು ಶುಕ್ರವಾರ ನಡೆಸಿದರು.ಸ್ಮಶಾನ ಸಂಪರ್ಕಕ್ಕೆ ದಾರಿ ಕಲ್ಪಿಸುವುದರ ಜತೆಗೆ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಸುಮಾರು ಎರಡು ಶತಮಾನಕ್ಕೂ ಹೆಚ್ಚು ಕಾಲ ಕಂಚುಗೋಡು ಸನ್ಯಾಸಿ ಬಲ್ಲೆ ಸ್ಮಶಾನ ಹಾಗೂ ನಾಗದೇವಸ್ಥಾನ,ರಾಮನಾಥ ಮಹಮ್ಮಾಯಿ ಮತ್ತು ನವದುರ್ಗೆ ದೇವಸ್ಥಾನಕ್ಕೆ ಸಂರ್ಪಕ್ಕ ಹೊಂದಿರುವ ರಸ್ತೆಯನ್ನು ಖಾಸಗಿ ಜಾಗದ ಮಾಲೀಕರು ಕಳೆದ ಎರಡು ವರ್ಷಗಳಿಂದ ಬಂದ್ ಮಾಡಿದ್ದಾರೆ.ರಸ್ತೆ ಸಂಪರ್ಕ ವ್ಯವಸ್ಥೆ ಕಡಿತಮಾಡಿದ್ದರಿಂದ ಸ್ಮಶಾನ ಸಂಪರ್ಕಕ್ಕೆ ಮತ್ತು ದೇವಸ್ಥಾನಕ್ಕೆ ರಸ್ತೆ ಇಲ್ಲದಂತಾಗಿದೆ.ಸ್ಮಶಾನ ಸಂಪರ್ಕಕ್ಕೆ ದಾರಿ ವ್ಯವಸ್ಥೆ ಇಲ್ಲದೆ ಶವವನ್ನು ದಫನ ಮಾಡಲು ತೊಂದರೆ ಉಂಟಾಗುತ್ತಿದ್ದು.ಸತ್ತ ಜೀವಕ್ಕೆ ಮುಕ್ತಿ ನೀಡಲು ಊರೂರು ಸುತ್ತ ಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ಹೆಣವನ್ನು ಸುಡಲು ತೊಂದರೆ ಉಂಟಾಗುತ್ತಿದೆ.ದೇವಸ್ಥಾನದ ಅಭಿವೃದ್ಧಿಯನ್ನು ಕೂಡ ಮಾಡಲಾಗುತ್ತಿಲ್ಲ.ಸ್ಮಶಾನಕ್ಕೆ ರಸ್ತೆ ಸಂಪರ್ಕ ವ್ಯವಸ್ಥೆ ಕಲ್ಪಿಸುವಂತೆ ಕಳೆದ ಎರಡು ವರ್ಷಗಳಿಂದ ಗುಜ್ಜಾಡಿ ಪಂಚಾಯಿತಿಗೆ ಅಲೆದು ಅಲೆದು ಸಾಕಾಗಿ ಹೋಗಿದೆ.ಅಧಿಕಾರಿ ವರ್ಗದವರು ಹಣ ಬಲದ ಮುಂದೆ ಸಾರ್ವಜನಿಕ ಸಮಸ್ಯೆಗೆ ಸ್ಪಂದನೆ ಮಾಡುತ್ತಿಲ್ಲ ಎಂದು ಆಪಾದಿಸಿರುವ ಗ್ರಾಮದ ಜನರು.ಸ್ಮಶಾನವನ್ನು ಧ್ವಂಸ ಮಾಡಲಾಗಿದೆ ಎಂದು ದೂಷಿಸಿದ್ದಾರೆ.ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.ಜುಲೈ 7 ರಂದು ಅಣಕು ಶವಯಾತ್ರೆ ನಡೆಸಿ ಗ್ರಾಮಸ್ಥರು ಗುಜ್ಜಾಡಿ ಪಂಚಾಯಿತಿ ಎದುರುಗಡೆ ಪ್ರತಿಭಟನೆ ನಡೆಸಿದ್ದರು.ಕುಂದಾಪುರ ತಹಶೀಲ್ದಾರ್,ಇಒ,ಆರ್‍ಐ ಭೇಟಿ ನೀಡಿದ್ದರು.ಗಂಗೊಳ್ಳಿ ಠಾಣೆ ಪಿಎಸ್‍ಐ ಪವನ್ ನಾಯ್ಕ್ ನೇತೃತ್ವದಲ್ಲಿ ಪೆÇಲೀಸ್ ರಕ್ಷಣೆ ನೀಡಲಾಗಿದೆ.

Advertisement
Advertisement
Advertisement

Share
Team Kundapur Times

Recent Posts

ಧರೆಗುರುಳಿದ ಮಹಾರಾಜ ಸ್ವಾಮಿ ದೇವಸ್ಥಾನದ ಪ್ರಾಂಗಾಣದ ಸೀಟ್ ಮಾಡು

ಕುಂದಾಪುರ:ಆರ್ಭಟಿಸಿದ ಗಾಳಿ ರಭಸಕ್ಕೆ ಬೈಂದೂರು ತಾಲೂಕಿನ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿನ ಪ್ರಾಂಗಾಣದ ಸೀಟ್ ಮಾಡು ತುಂಡು ತುಂಡಾಗಿ…

16 hours ago

ಗಾಳಿ ಆರ್ಭಟಕ್ಕೆ ನಲುಗಿದ ಕುಂದಾಪ್ರ

ಕುಂದಾಪುರ:ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಿಸಿದ ಗಾಳಿ ಅಬ್ಬರಕ್ಕೆ ಅಕ್ಷರಹ ಸಹ ಕುಂದಾಪ್ರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳು…

17 hours ago

ಗಾಳಿ ಅಬ್ಬರಕ್ಕೆ ಧರೆಗುರುಳಿದ ವಿದ್ಯುತ್ ಕಂಬ:50 ಕ್ಕೂ ಹೆ0ಚ್ಚು ಕಂಬಕ್ಕೆ ಹಾನಿ

ಕುಂದಾಪುರ:ಏಕಏಕಿ ಶನಿವಾರ ಸಂಜೆ ಬೀಸಿದ ಭಾರಿ ಗಾಳಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಒಳಪಟ್ಟಿರುವ ತಲ್ಲೂರು ಉಪವಿಭಾಗದ ವ್ಯಾಪ್ತಿಯಲ್ಲಿನ ಹೆಮ್ಮಾಡಿ,ದೇವಲ್ಕುಂದ,ಆಲೂರು,ಬಡಾಕೆರೆ,ಗಂಗೊಳ್ಳಿ…

17 hours ago

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

4 weeks ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

4 weeks ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

1 month ago