ಕುಂದಾಪುರ

ಸ್ಮಶಾನಕ್ಕೆ ದಾರಿ ಕಲ್ಪಿಸುವಂತೆ ಆಗ್ರಹಿಸಿ ಗುಜ್ಜಾಡಿ ಪಂಚಾಯಿತಿ ಎದುರು ಆಹೋರಾತ್ರಿ ಧರಣಿ ಸತ್ಯಾಗ್ರಹ

Share

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆ ಸ್ಮಶಾನ ಹಾಗೂ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಅನಾದಿ ಕಾಲದ ರಸ್ತೆಯನ್ನು ಖಾಸಗಿ ಜಾಗದ ಮಾಲೀಕರು ಬಂದ್ ಮಾಡಿರುವುದನ್ನು ವಿರೋಧಿಸಿ.ಸಾರ್ವಜನಿಕ ಸ್ಮಶಾನವನ್ನು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಿ ಕಂಚುಗೋಡು ಸನ್ಯಾಸಿ ಬಲ್ಲೆ ಗ್ರಾಮಸ್ಥರು ಗುಜ್ಜಾಡಿ ಗ್ರಾಮ ಪಂಚಾಯಿತಿ ಎದುರುಗಡೆ ಅಹೋರಾತ್ರಿ ಧರಣಿ ಸತ್ಯಾಗ್ರಹದ ಮೂಲಕ ಪ್ರತಿಭಟನೆಯನ್ನು ಶುಕ್ರವಾರ ನಡೆಸಿದರು.ಸ್ಮಶಾನ ಸಂಪರ್ಕಕ್ಕೆ ದಾರಿ ಕಲ್ಪಿಸುವುದರ ಜತೆಗೆ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಸುಮಾರು ಎರಡು ಶತಮಾನಕ್ಕೂ ಹೆಚ್ಚು ಕಾಲ ಕಂಚುಗೋಡು ಸನ್ಯಾಸಿ ಬಲ್ಲೆ ಸ್ಮಶಾನ ಹಾಗೂ ನಾಗದೇವಸ್ಥಾನ,ರಾಮನಾಥ ಮಹಮ್ಮಾಯಿ ಮತ್ತು ನವದುರ್ಗೆ ದೇವಸ್ಥಾನಕ್ಕೆ ಸಂರ್ಪಕ್ಕ ಹೊಂದಿರುವ ರಸ್ತೆಯನ್ನು ಖಾಸಗಿ ಜಾಗದ ಮಾಲೀಕರು ಕಳೆದ ಎರಡು ವರ್ಷಗಳಿಂದ ಬಂದ್ ಮಾಡಿದ್ದಾರೆ.ರಸ್ತೆ ಸಂಪರ್ಕ ವ್ಯವಸ್ಥೆ ಕಡಿತಮಾಡಿದ್ದರಿಂದ ಸ್ಮಶಾನ ಸಂಪರ್ಕಕ್ಕೆ ಮತ್ತು ದೇವಸ್ಥಾನಕ್ಕೆ ರಸ್ತೆ ಇಲ್ಲದಂತಾಗಿದೆ.ಸ್ಮಶಾನ ಸಂಪರ್ಕಕ್ಕೆ ದಾರಿ ವ್ಯವಸ್ಥೆ ಇಲ್ಲದೆ ಶವವನ್ನು ದಫನ ಮಾಡಲು ತೊಂದರೆ ಉಂಟಾಗುತ್ತಿದ್ದು.ಸತ್ತ ಜೀವಕ್ಕೆ ಮುಕ್ತಿ ನೀಡಲು ಊರೂರು ಸುತ್ತ ಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ಹೆಣವನ್ನು ಸುಡಲು ತೊಂದರೆ ಉಂಟಾಗುತ್ತಿದೆ.ದೇವಸ್ಥಾನದ ಅಭಿವೃದ್ಧಿಯನ್ನು ಕೂಡ ಮಾಡಲಾಗುತ್ತಿಲ್ಲ.ಸ್ಮಶಾನಕ್ಕೆ ರಸ್ತೆ ಸಂಪರ್ಕ ವ್ಯವಸ್ಥೆ ಕಲ್ಪಿಸುವಂತೆ ಕಳೆದ ಎರಡು ವರ್ಷಗಳಿಂದ ಗುಜ್ಜಾಡಿ ಪಂಚಾಯಿತಿಗೆ ಅಲೆದು ಅಲೆದು ಸಾಕಾಗಿ ಹೋಗಿದೆ.ಅಧಿಕಾರಿ ವರ್ಗದವರು ಹಣ ಬಲದ ಮುಂದೆ ಸಾರ್ವಜನಿಕ ಸಮಸ್ಯೆಗೆ ಸ್ಪಂದನೆ ಮಾಡುತ್ತಿಲ್ಲ ಎಂದು ಆಪಾದಿಸಿರುವ ಗ್ರಾಮದ ಜನರು.ಸ್ಮಶಾನವನ್ನು ಧ್ವಂಸ ಮಾಡಲಾಗಿದೆ ಎಂದು ದೂಷಿಸಿದ್ದಾರೆ.ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.ಜುಲೈ 7 ರಂದು ಅಣಕು ಶವಯಾತ್ರೆ ನಡೆಸಿ ಗ್ರಾಮಸ್ಥರು ಗುಜ್ಜಾಡಿ ಪಂಚಾಯಿತಿ ಎದುರುಗಡೆ ಪ್ರತಿಭಟನೆ ನಡೆಸಿದ್ದರು.ಕುಂದಾಪುರ ತಹಶೀಲ್ದಾರ್,ಇಒ,ಆರ್‍ಐ ಭೇಟಿ ನೀಡಿದ್ದರು.ಗಂಗೊಳ್ಳಿ ಠಾಣೆ ಪಿಎಸ್‍ಐ ಪವನ್ ನಾಯ್ಕ್ ನೇತೃತ್ವದಲ್ಲಿ ಪೆÇಲೀಸ್ ರಕ್ಷಣೆ ನೀಡಲಾಗಿದೆ.

Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

7 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago