ಕುಂದಾಪುರ:ತಾಲೂಕಿನ ಗಂಗೊಳ್ಳಿ,ತ್ರಾಸಿ,ಮುಳ್ಳಿಕಟ್ಟೆ,ಅರಾಟೆ,ಹಕ್ಲಾಡಿ,ಆಲೂರು,ಕುಂದಬಾರಂದಡಿ,ನಾಡ,ಪಡುಕೋಣೆ,ಬಡಾಕೆರೆ,ಹೆಮ್ಮಾಡಿ,ನೂಜಾಡಿ ಸೇರಿದಂತೆ ನಾನಾ ಭಾಗದಲ್ಲಿ ವಿವಿಧ ಸೇವಾ ಸಮಿತಿಗಳ ವತಿಯಿಂದ ಪೂಜಿಸಲ್ಪಟ್ಟ ಗಣಪತಿ ಮೂರ್ತಿ ಜಲಸ್ತಂಭ ಕಾರ್ಯ ಅಬ್ಬರಿಸಿದ ಮಳೆ ನಡುವೆ ಸಂಭ್ರಮದಿಂದ ನಡೆಯಿತು.
ಮಳೆಯನ್ನು ಲೆಕ್ಕಿಸದೆ ಮಹಿಳೆಯರು,ಪುರುಷರು,ಮಕ್ಕಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.ಕುಣಿತ ಭಜನೆ,ಚಂಡೆ ವಾದನ,ಟ್ಯಾಬ್ಲೋ ಮೆರವಣಿಗೆ ಸೊಬಗನ್ನು ಹೆಚ್ಚಿಸಿತು.ಭಜನಾ ತಂಡಗಳು ಮಳೆಗೆ ಸಡ್ಡು ಹೊಡೆದಂತೆ ಹೆಜ್ಞೆ ಹಾಕಿದರು.ಚೌತಿ ಸಂಭ್ರಮಕ್ಕೆ ಮಳೆರಾಯ ಅಡ್ಡಿ ಉಂಟು ಮಾಡಿದ್ದರು.ಭಕ್ತರ ಸಂಭ್ರಮಕ್ಕೆ ಕೊರತೆ ಉಂಟಾಗಿಲ್ಲ.ಯಾವುದೆ ರೀತಿಯ ಅಹಿತಕರ ಘಟನೆಗಳು ನಡೆಯದೆ ಭಕ್ತಿ ಭಾವ ಶೃದ್ಧೆಯಿಂದ ಗಣೇಶೋತ್ಸವ ಕಾರ್ಯಕ್ರಮ ಜರುಗಿತು.ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿರುವ ಪೆÇಲೀಸ್ ಇಲಾಖೆ ಕಾರ್ಯ ಜನಮೆಚ್ಚುಗೆಗೆ ಪಾತ್ರವಾಯಿತು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…