ಕುಂದಾಪುರ:ಆದಿವಾಸಿ ಜನಾಂಗದ ಮುಖಂಡರಾದಂತಹ ಬಿರ್ಸಾ ಮುಂಡ ಅವರ ಜನ್ಮ ದಿನಾಚರಣೆ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂಕಲ್ಪ ಮಾಡಿದಂತೆ ಬುಡಕಟ್ಟು ಜನಾಂಗದವರು ವಾಸ ಮಾಡುವಂತಹ ಪ್ರದೇಶಗಳನ್ನು ಗುರುತಿಸಿ ಎಲ್ಲಾ ರೀತಿಯ ಸೌಲಭ್ಯಗಳನ್ನು ದೊರಕಿಸಿ ಕೊಡಬೇಕು ಎನ್ನುವ ಉದ್ದೇಶದಿಂದ ಯೋಜನೆಯನ್ನು ರೂಪಿಸಲಾಗಿದ್ದು.ಅದರ ಭಾಗವಾಗಿ ಬೈಂದೂರು ಕ್ಷೇತ್ರದಲ್ಲಿ ಸುಮಾರು 4.ಕೋಟಿಗೂ ಅಧಿಕ ಮೊತ್ತದ ಅನುದಾನದಲ್ಲಿ ಪಿಎಂ ಜನ್ಮನ್ ರಸ್ತೆ ಅಭಿವೃದ್ಧಿ ಕಾಮಗಾರಿ ಮಾಡಲಾಗುತ್ತಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ಪಿಎಂ ಜನ್ಮನ್ ಯೋಜನೆಯಡಿ 94.34 ಲಕ್ಷ.ರೂ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರ್ಕೂರು-ನಾರ್ಕಳಿ ಮದುಕೊಡ್ಲು ಎಸ್.ಟಿ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೆಲಸಕ್ಕೆ ಬುಧವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಜಲಜೀವನ್ ಮೆಷಿನ್ ಯೋಜನೆಯಡಿ 800 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ಕಾಮಗಾರಿ ಕೆಲಸ ಪ್ರಗತಿಯಲ್ಲಿದೆ.ಮೋದಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಅನೇಕ ಜನಾಪಯೋಗಿ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಾಗಿದೆ ಎಂದರು.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ,ಜನ್ಮನ್ ಯೋಜನೆ ದೇಶದ ಅಭಿವೃದ್ಧಿ ದಿಕ್ಕನೆ ಬದಲಿಸಲಿದೆ ಎಂದು ಅಭಿಪ್ರಾಯಪಟ್ಟರು.
ಬೈಂದೂರು ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ,ನಿಕಟಪೂರ್ವ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಆಲೂರು ಪಂಚಾಯಿತಿ ಅಧ್ಯಕ್ಷ ರಾಜೇಶ ಆರ್ ದೇವಾಡಿಗ,ಬಿಜೆಪಿ ಪಕ್ಷದ ಮುಖಂಡರಾದ ಚಿತ್ತರಂಜನ್ ಹೆಗ್ಡೆ ಹರ್ಕೂರು,ಮಂಜಯ್ಯ ಶೆಟ್ಟಿ ಹರ್ಕೂರು,ಪಂಚಾಯಿತಿ ಸದಸ್ಯರಾದ ಸುಬ್ಬಣ್ಣ ಶೆಟ್ಟಿ,ಪ್ರಸನ್ನ ಶೆಟ್ಟಿ,ಪ್ರಮೋದ ಶೆಟ್ಟಿ,ರವಿ ಶೆಟ್ಟಿ ಆಲೂರು,ಅಪ್ಪÅ ಕುಲಾಲ್,ರಾಜು ಪೂಜಾರಿ,ಪ್ರಶಾಂತ್ ಕುಲಾಲ್,ಬಿರ್ಸಾ ಮುಖಂಡ ರಾಜೇಶ ರಾಮಣ್ಣ,ಬಿಜೆಪಿ ಪಕ್ಷದ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…