ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ ಅಲೆಗಳ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.ದುರ್ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಪಾರಾಗಿದ್ದಾನೆ.
ಹೊಸಹಿತ್ಲು ನುಕ್ಕಿತಾರು ಉದಯ ದೇವಾಡಿಗ ಅವರ ಪುತ್ರ ಆಶಿಶ್ ದೇವಾಡಿಗ,ಹೊಸಹಿತ್ಲು ನುಕ್ಕಿತಾರು ಮಾರುತಿ ಪೂಜಾರಿ ಅವರ ಪುತ್ರ ಸೂರಜ್ ಪೂಜಾರಿ,ಹೊಸಹಿತ್ಲು ನುಕ್ಕಿತಾರು ಸುದಾಕರ ದೇವಾಡಿಗ ಅವರ ಪುತ್ರ ಸಂಕೇತ್ ದೇವಾಡಿಗ ಮೃತಪಟ್ಟಿರುವ ವಿದ್ಯಾರ್ಥಿಗಳಾಗಿದ್ದಾರೆ.ಮಂಗಳವಾರ 5.30 ರ ಸುಮಾರಿಗೆ ನಾಲ್ವರು ವಿದ್ಯಾರ್ಥಿಗಳು ಜತೆಗೂಡಿ ಸಮುದ್ರಲ್ಲಿ ಈಜಲು ತೆರಳಿದ್ದರು.ಸಮುದ್ರ ಅಲೆಗಳ ಸೆಳೆತಕ್ಕೆ ಸಿಲುಕಿದ ನಾಲ್ವರ ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು.ಸ್ಥಳೀಯ ಮೀನುಗಾರರು ಸಮುದ್ರದಲ್ಲಿ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿಗಳ ಮೃತ ದೇಹವನ್ನು ಪತ್ತೆಹಚ್ಚಿ ದಡಕ್ಕೆ ತರಲು ನೆರವಾದರು.ವಿದ್ಯಾರ್ಥಿಗಳ ಅಗಲುವಿಕೆಯಿಂದ ಇಡಿ ಗ್ರಾಮ ಶೋಕತಪ್ತಗೊಂಡಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…