ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು ಕಿಶೋರಿಯರಲ್ಲಿ ರಕ್ತಹೀನತೆ ಕಂಡು ಬಂದಿರುವುದು ಮಾತ್ರವಲ್ಲದೆ,ಶೇ.30 ರಷ್ಟು ಗಂಡು ಮಕ್ಕಳಲ್ಲಿಯೂ ಕೂಡ ರಕ್ತಹೀನತೆ ಇದೆ ಎಂದು ವರದಿಯಾಗಿರುವುದು ಆತಂಕಕಾರಿ ವಿಷಯವಾಗಿದೆ.ಪೌಷ್ಟಿಕ ಆಹಾರ ಸೇವನೆಯಿಂದ ಮಾತ್ರ ಪರಿಹಾರವನ್ನು ಕಂಡು ಕೊಳ್ಳಲು ಸಾಧ್ಯವಾಗಿರುವುದರಿಂದ ಆಂದೋಲನದ ರೀತಿಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಗ್ರಾಮ ಮಟ್ಟದಲ್ಲಿ ಆಯೋಜನೆ ಮಾಡಲಾಗುತ್ತಿದೆ ಎಂದು ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಭಾಗ್ಯಲಕ್ಷ್ಮೀ ಹೇಳಿದರು.
ಹೊಸಾಡು ಗ್ರಾಮ ಪಂಚಾಯತಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ,ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ,ಹೊಸಾಡು ಗ್ರಾ.ಪಂ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳು ಹಾಗೂ ಸಂಜೀವಿನಿ ಒಕ್ಕೂಟ ಹೊಸಾಡು ಸಂಯುಕ್ತ ಆಶ್ರಯದಲ್ಲಿ ಬುಧವಾರ ಹೊಸಾಡು ಗ್ರಾಮ ಪಂಚಾಯತಿ ಸಭಾಭವನದಲ್ಲಿ ನಡೆದ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಹಾಗೂ ಪೌಷ್ಟಿಕ ಆಹಾರಗಳ ಬಗೆಗಿನ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹೊಸಾಡು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶೋಭಾ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿದರು.
ಅಂಗನವಾಡಿ ವಲಯ ಮೇಲ್ವಿಚಾರಕಿ ರೇಖಾ ಕೆ,ದಾನಿ ಎಂ.ಎಂ.ಸುವರ್ಣ,ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್,ಹಿರಿಯ ಆರೋಗ್ಯ ಸಹಾಯಕ ಹುಲಿಯಪ್ಪ ಗೌಡ,ಎನ್ಆರ್ಎಲ್ಎಂ ಮೇಲ್ವಿಚಾರಕಿ ಮಮತಾ,ಆರೋಗ್ಯ ಸುರಕ್ಷಾ ಅಧಿಕಾರಿ ದೀಪಾ,ಹೊಸಾಡು ಒಕ್ಕೂಟದ ಅಧ್ಯಕ್ಷೆ ಯಶೋಧ,ಬಾಲ ವಿಕಾಸ ಸಮಿತಿ ಅಧ್ಯಕ್ಷೆ ರೇಖಾ,ಕಪಿಲ್ ಚೋಪ್ರಾ, ಅಂಗನವಾಡಿ ಕಾರ್ಯಕರ್ತೆಯರು,ಸಹಾಯಕಿಯರು,ಸಂಜೀವಿನಿ ಒಕ್ಕೂಟದ ಸದಸ್ಯರು,ಆಶಾ ಕಾರ್ಯಕರ್ತರು,ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬಂದಿಗಳು,ಗ್ರಾಮಸ್ಥರು,ಸಂಜೀವಿನಿ ಎಲ್ಸಿಆರ್ಪಿ,ಸಖಿಯರು,ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.ಗರ್ಭಿಣಿ ಮಹಿಳೆಯರಿಗೆ ಸೀಮಂತ ನೆರವೇರಿಸಲಾಯಿತು.ಪೌಷ್ಟಿಕಾಂಶಭರಿತ ಆಹಾರ ಪ್ರದರ್ಶನ ಜರುಗಿತು.ಎಂಬಿಕೆ ಚೈತ್ರಾ ಸ್ವಾಗತಿಸಿದರು,ಅಂಗನವಾಡಿ ಕಾರ್ಯಕರ್ತೆ ಸುನೀತಾ ನಿರೂಪಿಸಿದರು.ಪ್ರೇಮ ವಂದಿಸಿದರು.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…