ಪ್ರಾದೇಶಿಕ ಸುದ್ದಿ

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

Share

ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿ
ವತಿಯಿಂದ ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರ ನೆರವಿಗೆ ಕಾರ್ಯಕ್ರಮ, ಸನ್ಮಾನ ಹಾಗೂ ಶ್ರೀ ಗುರುಪ್ರಸಾದಿತ ಯಕ್ಷಗಾನ ಮಂಡಳಿ ಸಾಲಿಗ್ರಾಮ ಮೇಳದವರಿಂದ ಯಕ್ಷಗಾನ ಕಾರ್ಯಕ್ರಮ ಮುಳ್ಳಿಕಟ್ಟೆ ನಗುಸಿಟಿ ಮೈದಾನದಲ್ಲಿ ಶನಿವಾರ ನಡೆಯಿತು.

ಲಯನ್ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ಅವರು ಫಲಾನುಭವಿಗಳಿಗೆ ಮನೆ ನಿರ್ಮಾಣದ ನೆರವು ಪತ್ರವನ್ನು ವಿತರಿಸಿ ಮಾತನಾಡಿ,ಸಂಘ ಸಂಸ್ಥೆಗಳ ಗುರಿ ದೈಯೋದ್ದೇಶ ಈಡೇರಿಕೆ ಆದಾಗ ಸಮಾಜಕ್ಕೆ ಒಳಿತಾಗಲಿದೆ.ಆ ನಿಟ್ಟಿನಲ್ಲಿ
ಮಹಿಳೆಗೆ ನೆಲೆಯನ್ನು ಒದಗಿಸಿ ಕೊಡುವ ನೆಲೆಯಲ್ಲಿ ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಕೈಗೊಂಡಿರುವ ಕಾರ್ಯ ಶ್ಲಾಘನೀಯವಾದುದು ಎಂದು ಹೇಳಿದರು.
ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಅಧ್ಯಕ್ಷ ಸುರೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.ಎಲ್ ಎನ್ ಪಿಎಂಜೆಎಫ್ ಸುರೇಶ ಪ್ರಭು ಪಿಡಿಜೆ, ಎಲ್.ಎನ್ ಪಿಎಂಜೆಎಫ್ ರಾಜೀವ್ ಕೋಟ್ಯಾನ್, ಎಲ್.ಎನ್ ಪಿಎಂಜೆಎಫ್ ಹರಿಪ್ರಸಾದ್ ರೈ, ಎಲ್.ಎನ್ ಪಿಎಂಜೆಎಫ್ ಚಂದ್ರಶೇಖರ ಕಲ್ಪತರು, ಲಯನ್ ಜಿಲ್ಲಾ ಸಾಂಸ್ಕೃತಿಕ ಸಂಯೋಜಕ ರಂಜನ್ ಕಲ್ಕೂರ,ಎಂ.ಎಂ ಲಾಂಡ್ರಿ ದುಬೈ ಉದ್ಯಮಿ ಮಂಜು ಪೂಜಾರಿ ಸೇನಾಪುರ,ಹಕ್ಲಾಡಿ ಕ್ಲಬಿನ ಕಾರ್ಯದರ್ಶಿ ಲ.ಚಂದ್ರಶೇಖರ ಶೆಟ್ಟಿ, ಕೋಶಾಧಿಕಾರಿ ಸಂತೋಷ ಮೊಗವೀರ ಮತ್ತು ಕ್ಲಬ್ಬಿನ ಸದಸ್ಯರು, ಯಕ್ಷಾಭಿಮಾನಿಗಳು ಉಪಸ್ಥಿತರಿದ್ದರು.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕೋಡಿ ಗಂಗಾಧರ ಪೂಜಾರಿ ಮತ್ತು ಯುವ ಬಂಟರ ಸಂಘ ಕುಂದಾಪುರ ಸ್ಥಾಪಕಾಧ್ಯಕ್ಷ ಅಂಪಾರು ನಿತ್ಯಾನಂದ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಡಾ ಸ್ವಾಗತಿಸಿ,ನಿರೂಪಿಸಿದರು.
ಸಾಲಿಗ್ರಾಮ ಮೇಳದವರಿಂದ ಯಕ್ಷಗಾನ ಪ್ರದರ್ಶನ ನಡೆಯಿತು.

oplus_2

Advertisement

Share
Team Kundapur Times

Recent Posts

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

1 month ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

2 months ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

2 months ago