ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು ಬ್ಯಾಂಕ್,ಸೌಪರ್ಣಿಕಾ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ ಹೊಸಾಡು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹೊಸಾಡು ಗ್ರಾಮ ಪಂಚಾಯಿತಿ ವಠಾರದಲ್ಲಿ ಸೋಮವಾರ ಗ್ರಾಮೋತ್ಸವ ಕಾರ್ಯಕ್ರಮ ನಡೆಯಿತು.
ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೊಸಾಡು ಗ್ರಾಮೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಬೇರೆ ಬೇರೆ ಇಲಾಖೆಗಳ ಯೋಜನೆಗಳು ಸೌಲಭ್ಯಗಳು ಜನರಿಗೆ ನೇರವಾಗಿ ತಲುಪಿಸಬೇಕು ಎನ್ನುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ಮತ್ತು ಸಂಜೀವಿನಿ ಸಂಘಗಳ ಮೂಲಕ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮೋತ್ಸವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದ್ದು ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು.
ಪಂಚಾಯಿಯಲ್ಲಿ ಬೋರ್ಡ್ ಇಲ್ಲದೆ ಇದ್ದರೂ ತಮ್ಮ ಕಾರ್ಯವೈಖರಿ ಮೂಲಕ ಅಚ್ಚುಕಟ್ಟಾಗಿ ಗ್ರಾಮೋತ್ಸವ ಕಾರ್ಯಕ್ರಮ ಆಯೋಜನೆ ಮಾಡಿ ಸರಕಾರಿ ಸೌಲಭ್ಯ ಮಾಹಿತಿ ವಿಚಾರಗಳನ್ನು ಗ್ರಾಮೀಣ ಪ್ರದೇಶದ ಜನರಿಗೆ ತಲುಪಿಸುವಲ್ಲಿ ಶ್ರಮಿಸಿದ ಪಂಚಾಯಿ ಅಧಿಕಾರಿಗಳು ಮತ್ತು ಸಂಜೀವಿನಿ ಸಂಘದ ಸದಸ್ಯರ ಕಾರ್ಯವೈಖರಿಯನ್ನು ಶ್ಲಾಘೀಸಿದರು.
ಹೊಸಾಡು ಪಂಚಾಯಿತಿ ಆಡಳಿತಾಧಿಕಾರಿ ಸತ್ಯನಾರಾಯಣ ಜಿ ಅಧ್ಯಕ್ಷತೆ ವಹಿಸಿದ್ದರು,ಡಾ.ವಿನಿತಾ,ಡಾ.ಸುಲೋಚನಾ,ಸೌಪರ್ಣಿಕಾ ಸಂಜೀವಿನಿ ಒಕ್ಕೂಟ ಹೊಸಾಡು ಅಧ್ಯಕ್ಷೆ ಯಶೋದ,ಗಂಗೊಳ್ಳಿ ಠಾಣೆ ಪಿಎಸ್ಐ ಪವನ್ ನಾಯ್ಕ್,ಹೊಸಾಡು ಗ್ರಾಮ ಆಡಳಿತಾಧಿಕಾರಿ ಮಾಧವ ಕೊಠಾರಿ ಮತ್ತು ಸೇನಾಪುರ ಗ್ರಾಮ ಆಡಳಿತಾಧಿಕಾರಿ ಅನಿಲ್ ಮೇತ್ರಿ,ಶರತ್ ಕುಮಾರ್ ಶೆಟ್ಟಿ ಬೆಳ್ಳಾಡಿ,ಹೊಸಾಡು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಮತ್ತು ಮಾಜಿ ಸದಸ್ಯ ರಮೇಶ್ ಆಚಾರ್ಯ,ವಿವಿಧ ಸಂಘಟನೆಗಳ ಪದಾಧಿಕಾರಿಗಳು,ಸಂಜೀವಿನಿ ಸಂಘದ ಸದಸ್ಯರು,ಹೊಸಾಡು ಮತ್ತು ಸೇನಾಪುರ ಗ್ರಾಮದ ಶಾಲೆ ಮತ್ತು ಅಂಗನವಾಡಿ ಶಾಲೆಗಳ ಶಿಕ್ಷಕರು ಉಪಸ್ಥಿತರಿದ್ದರು.ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ,ಆರೋಗ್ಯ ತಪಾಸಣೆ,ಇಲಾಖೆಗಳ ಮಾಹಿತಿ ಕಾರ್ಯಕ್ರಮ ನಡೆಯಿತು.ಉತ್ಸುಕತೆಯಿಂದ ಗ್ರಾಮಸ್ಥರು ಗ್ರಾಮೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಹೊಸಾಡು ಪಿಡಿಒ ಶೋಭಾ ಸ್ವಾಗತಿಸಿದರು.ಸುಂದರ ಜಿ ನಿರೂಪಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…