ಯೋಗಾಚಾರ್ಯ ಸಂತೋಷಗೆ ವಿಶ್ವಮಾನ್ಯ ಯೋಗರತ್ನ ಪ್ರಶಸ್ತಿ
ಕುಂದಾಪುರ:ದೇಶ ವಿದೇಶಗಳಲ್ಲಿ ಯೋಗದ ಕಂಪನ್ನು ಬೀರಿ ಜನಜನಿತರಾಗಿರುವ ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ಕೊಳುರು ನಿವಾಸಿ ಯೋಗಾಚಾರ್ಯ ಸಂತೋಷ್ ಗೂರೂಜಿ ಅವರು ಯೋಗಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಬ್ರಹ್ಮೀಭೂತ ಶ್ರೀ ವಾಸುದೇವ ಮಹಾರಾಜ್ ಫೌಂಡೇಷನ್ ವತಿಯಿಂದ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ವಿಶ್ವಮಾನ್ಯ ಯೋಗರತ್ನ ಪ್ರಶಸ್ತಿ-2023 ನೀಡಿ ಗೌರವಿಸಲಾಯಿತು.



















































































































































































































































































































































































































































































































































































































































































































































































































































































































































































































































































































































































































































































































































































































































































