ಕುಂದಾಪುರ

ನಾಡಕ್ಕೆ ಸರಕಾರಿ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ

Share

Advertisement
Advertisement
Advertisement

Advertisement

ಕುಂದಾಪುರ:ಸರಕಾರಿ ಮತ್ತು ಖಾಸಗಿ ಬಸ್‍ಗಳಿಗೆ ಪರ್ಮಿಟ್ ಇದ್ದರೂ ಬಹಳಷ್ಟು ಕಡೆ ಸಂಚಾರ ಮಾಡುತ್ತಿಲ್ಲ ಕಲೆಕ್ಷನ್ ದೃಷ್ಟಿಯಲ್ಲಿಟ್ಟುಕೊಂಡು ಟ್ರಿಪ್‍ಗಳನ್ನು ಓಡಿಸುತ್ತಾ ಇದ್ದಾರೆ.ಸಾರಿಗೆ ಜನರ ಮೂಲಭೂತ ವ್ಯವಸ್ಥೆಗಳಲ್ಲಿ ಪ್ರಧಾನವಾದದ್ದು ಸರಿಯಾದ ದರದಲ್ಲಿ ಮತ್ತು ಸರಿಯಾದ ಸಮಯಕ್ಕೆ ದೊರೆಯದೆ ಹೊದರೆ ಹಲವಾರು ರೀತಿಯ ಸಮಸ್ಯೆಗಳಿಗೆ ಜನರು ಒಳಗಾಗುತ್ತಾರೆ ಎಂದು ಡಿವೈಎಫ್‍ಐ ರಾಜ್ಯಾಧ್ಯಕ್ಷ ಮುನಿರಾಜ್ ಕಾಟಿಪಳ್ಳ ಹೇಳಿದರು.
ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ ಪಡುಕೋಣೆ ಘಟಕ,ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಬೈಂದೂರು ತಾಲೂಕು ವತಿಯಿಂದ ನಾಡ ಗ್ರಾಮ ಪಂಚಾಯತ್ ಎದುರುಗಡೆ ಬುಧವಾರ ಹಮ್ಮಿಕೊಂಡಿದ್ದ ಕೆಎಸ್‍ಆರ್‍ಟಿಸಿ ಬಸ್ ಸಂಚಾರ ಆರಂಭಿಸಲು ಆಗ್ರಹಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶಕ್ತಿ ಯೋಜನೆಯಿಂದ ಗ್ರಾಮೀಣ ಭಾಗದ ಬಡ ಮಹಿಳೆಯರು ವಂಚಿತರಾಗುತ್ತಿದ್ದಾರೆ ಈ ನಿಟ್ಟಿನಲ್ಲಿ ಸರಕಾರಿ ಬಸ್‍ಗಳನ್ನು ಓಡಿಸಲು ಸರಕಾರ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.ಕ್ರಮ ಜರುಗಿಸದೆ ಹೋದರೆ ಮುಂದಿನ ದಿನಗಳಲ್ಲಿ ಕರಾವಳಿ ಭಾಗದ ಹೆಣ್ಣು ಮಕ್ಕಳ ಧ್ವನಿಯಾಗಿ ಹೋರಾಟ ರೂಪಗೊಳ್ಳಲಿದೆ ಎಂದರು.
ಡಿವೈಎಫ್‍ಐ ಸಂಘಟನೆಯ ಹಿರಿಯ ಮುಖಂಡ ರಾಜೀವ ಪಡುಕೋಣೆ ಮಾತನಾಡಿ ನಾಡಕ್ಕೆ ಸರಕಾರಿ ಬಸ್ ಕಲ್ಪಿಸುವುದರ ಜತೆಗೆ ಈ ಭಾಗದ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಮರವಂತೆ ಮಾರಸ್ವಾಮಿ ದೇವಸ್ಥಾನದ ಎದುರಿನ ರಸ್ತೆ ಅಭಿವೃದ್ಧಿಗೊಳಿಸಬೇಕು.ಮಾರಸ್ವಾಮಿ ದೇವಳದ ಎದುರುಗಡೆ ಸರಕಾರಿ ಬಸ್‍ಗಳನ್ನು ಶಾಶ್ವತವಾಗಿ ನಿಲ್ಲಿಸಲು ಕ್ರಮ ಜರುಗಿಸಬೇಕೆಂದರು.ಸುರೇಶ್ ಕಲ್ಲೆಗಾರ್,ಜನವಾದಿ ಮಹಿಳಾ ಸಂಘಟನೆ ಬೈಂದೂರು ತಾಲೂಕು ಅಧ್ಯಕ್ಷೆ ನಾಗರತ್ನ ನಾಡ ಮತ್ತು ಕಾರ್ಯದರ್ಶಿ ನಾಗರತ್ನ ಪಡುವರಿ,ಫಿಲಿಪ್ ಡಿಸಿಲ್ವ,ಎಚ್.ನರಸಿಂಹ,ವೆಂಕಟೇಶ ಕೋಣಿ,ನಾಡ-ಪಡುಕೋಣೆ ಘಟಕದ ಅಧ್ಯಕ್ಷ ನಾಗರಾಜ ಕುರು,ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.ನಾಡ ಭಾಗಗಕ್ಕೆ ಸರಕಾರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ಇತರ ಐದು ಬೇಡಿಕೆಗಳ ಈಡೇರಿಕೆಗಾಗಿ ನಾಡ ಗ್ರಾಮ ಪಂಚಾಯತ್ ಅಧ್ಯಕ್ಷರ ಮುಖೇನ ಸಂಬಂಧಿಸಿದ ಇಲಾಖೆ ಮತ್ತು ಜಿಲ್ಲಾಧಿಕಾರಿ,ಶಾಸಕರಿಗೆ ಮನವಿಯನ್ನು ಸಲ್ಲಿಸಲಾಯಿತು.

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

2 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

3 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

6 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

7 days ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

7 days ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago