ಪ್ರಮುಖ

ಮರವಂತೆ ಕಡಲ್ಕೊರೆತ ಪ್ರದೇಶಕ್ಕೆ ಸಂಸದ ಬಿ.ವೈ ರಾಘವೇಂದ್ರ ಭೇಟಿ,ಪರಿಶೀಲನೆ

Share


ಕುಂದಾಪುರ:ಪ್ರತಿ ವರ್ಷ ಮರವಂತೆಯಲ್ಲಿ ಸಂಭವಿಸುತ್ತಿರುವ ಕಡಲ್ಕೊರೆತದಿಂದ ಸ್ಥಳೀಯರಿಗೂ ಆತಂಕದ ವಿಚಾರವಾಗಿದೆ ಸಮುದ್ರ ಕೊರೆತದಿಂದ ನಿದ್ದೆ ಇಲ್ಲದ ರಾತ್ರಿಯನ್ನು ಜನರು ಕಳೆಯುವಂತಹ ಪರಿಸ್ಥಿತಿ ಎದುರಾಗಿದೆ.ಕಡಲ್ಕೊರೆತದ ತಡೆಗೆ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಕೇಂದ್ರ ಸರಕಾರಕ್ಕೆ ಮನವಿಯನ್ನು ನೀಡಲಾಗುವುದು ಆದ್ಯತೆ ಮೆರೆಗೆ ಶೀಘೃ ಕ್ರಮಗಳನ್ನು ಕೈಗೊಳ್ಳಲು ಪ್ರಯತ್ನಿಸಲಾಗುದೆಂದು ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ಬಿಪರ್‍ಜಾಯ್ ಚಂಡಮಾರುತದದಿಂದ ಕಡಲ್ಕೊರೆತ ಉಂಟಾಗಿ ಹಾನಿ ಸಂಭವಿಸಿದ ಬೈಂದೂರು ತಾಲೂಕಿನ ಮರವಂತೆ ಕರಾವಳಿ ಸಮುದ್ರ ತೀರ ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿದ ಸಂಸದರು ಹಾನಿಯ ಪ್ರಮಾಣವನ್ನು ಅವಲೋಕಿಸಿ ಮಾತನಾಡಿದರು.
ಜೂ,26 ರಂದು ಕೇಂದ್ರದಿಂದ ವಿಶೇಷ ತಂಡ ಮರವಂತೆಗೆ ಆಗಮಿಸಿ ಕಡಲ್ಕೊರೆತದ ಪರಿಸ್ಥಿತಿಯ ಬಗ್ಗೆ ವರದಿಯನ್ನು ನೀಡಲಿದ್ದಾರೆ ಆದಷ್ಟು ಬೇಗ ಕೇಂದ್ರದಿಂದ ಹಣವನ್ನು ಬಿಡುಗಡೆ ಮಾಡಲು ಕ್ರಮ ಜರುಗಿಸಲಾಗುವುದು ಮರವಂತೆ ಕಡಲ್ಕೊರೆತದ ಬಗ್ಗೆ ಬಂದರು ಮತ್ತು ಮೀನುಗಾರಿಕೆ ಸಚಿವರ ಜತೆ ಈಗಾಗಲೆ ಮಾತನಾಡಲಾಗಿದೆ ಎಂದು ಹೇಳಿದರು.ಯಡಿಯೂರಪ್ಪನವರ ಸರಕಾರದ ಅವದಿಯಲ್ಲಿ 54.ಕೋಟಿ.ರೂ ವೆಚ್ಚದಲ್ಲಿ ಮರವಂತೆಯಲ್ಲಿ ಬಂದರು ಅಭಿವೃದ್ಧಿ ಕಾಮಗಾರಿಯನ್ನು ಮಾಡಲಾಗಿದೆ.ಬಂದರಿನ ಎರಡನೇ ಹಂತದ ಕಾಮಗಾರಿಗೆ 84.ಕೋಟಿ.ರೂ ಹಣವನ್ನು ನಮ್ಮ ಬಿಜೆಪಿ ಸರಕಾರ ಬಿಡುಗಡೆ ಮಾಡಿತ್ತು ಸರಕಾರ ಬದಲಾದರು ಅಭಿವೃದ್ಧಿ ಕೆಲಸಗಳಿಗೆ ಹಿನ್ನಡೆ ಆಗದು.2ನೇ ಹಂತದ ಕಾಮಗಾರಿ ಕೆಲಸವನ್ನು ಆರಂಭಿಸಲು ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ರಾಜ್ಯ ಸರಕಾರವನ್ನು ವಿನಂತಿಸುತ್ತೇನೆ ಎಂದರು.

ಕಳೆದ ವರ್ಷ ಕಾಣಿಸಿಕೊಂಡಿದ್ದ ತೌಕ್ತೆ ಚಂಡಮಾರುತದಿಂದ ಮರವಂತೆಯಲ್ಲಿ ತೀವೃ ಕಡಲ್ಕೊರೆತ ಉಂಟಾಗಿ ಸಂಭವಿಸಿದ ಹಾನಿಗೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ಯಾವುದೇ ರೀತಿ ಪರಿಹಾರದ ಕ್ರಮಗಳನ್ನು ಕೈಗೊಳ್ಳದಿರದ ಬಗ್ಗೆ ಮೀನುಗಾರರು ಸಂಸದರ ಎದುರು ತಮ್ಮ ಅಸಮಾಧಾನವನ್ನು ತೊಡಿಕೊಂಡರು.ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ,ಅಪರ ಜಿಲ್ಲಾಧಿಕಾರಿ ವೀಣಾ,ಬೈಂದೂರು ತಹಶೀಲ್ದಾರ್ ಶ್ರೀಕಾಂತ್ ಎಸ್ ಹೆಗ್ಡೆ,ಆರ್‍ಐ ಮಂಜು,ಮೀನುಗಾರರ ಮುಖಂಡರಾದ ವಾಸುದೇವ ಖಾರ್ವಿ,ಚಂದ್ರ ಖಾರ್ವಿ ಮತ್ತು ಸ್ಥಳೀಯರು,ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಮರವಂತೆ ಗ್ರಾ.ಪಂ ಉಪಾಧ್ಯಕ್ಷ ಲೋಕೇಶ್ ಖಾರ್ವಿ ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago