ಕುಂದಾಪುರ

ಶಕ್ತಿ ಯೋಜನೆ ಲಾಭ ಖಾಸಗಿ ಬಸ್ ಗಳಲ್ಲಿಯೂ ಸಿಗುವಂತೆ ಆಗಬೇಕು -ಸಂಸದ ಬಿ.ವೈ ರಾಘವೇಂದ್ರ

Share

ಕುಂದಾಪುರ:ಶಕ್ತಿ ಯೋಜನೆ ಪ್ರಯೋಜನ ಖಾಸಗಿ ಬಸ್‍ಗಳಲ್ಲಿಯೂ ಜನರಿಗೆ ಸಿಗುವಂತಾಗಬೇಕು.ಇದಲ್ಲದೆ ಕೆಎಸ್‍ಆರ್‍ಟಿಸಿ ಬಸ್‍ಗಳು ತುಂಬಿರುವುದರಿಂದ ಬೆಳಗ್ಗೆ ಹಾಗೂ ಸಂಜೆ ವೇಳೆ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದ್ದು,ಅದಕ್ಕೆ ಪರ್ಯಾಯ ವ್ಯವಸ್ಥೆ ಏನಾದರೂ ಮಾಡಲು ಸಾಧ್ಯವೇ ಎನ್ನುದನ್ನು ಸರಕಾರ ಚಿಂತಿಸಬೇಕು.ಒಳ್ಳೆಯ ಯೋಜನೆಗಳನ್ನು ಪೂರ್ವ ತಯಾರಿ ನಡೆಸಿ, ಅನುಷ್ಠಾನಗೊಳಿಸಬೇಕು ಈ ಬಗ್ಗೆ ಗಂಭೀರ ಚಿಂತನೆಯನ್ನು ರಾಜ್ಯ ಸರಕಾರ ಮಾಡಬೇಕಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಒತ್ತಾಯಿಸಿದರು.
ಹೆಮ್ಮಾಡಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು,ಶಿಕ್ಷಕರ ವರ್ಗಾವಣೆಯಿಂದ ಕೆಲ ಶಾಲೆಗಳಲ್ಲಿ ಸಮಸ್ಯೆಗಳಾಗುತ್ತಿದೆ, ಪರ್ಯಾಯ ವ್ಯವಸ್ಥೆ ಮಾಡದೇ ಶಿಕ್ಷಕರ ವರ್ಗಾವಣೆ ಮಾಡುವುದು ಸರಿಯಲ್ಲ.ಈ ಬಗ್ಗೆ ರಾಜ್ಯ ಸರಕಾರ ಗಮನಕೊಡಬೇಕು ಎಂದರು.


ಕಾಲು ಸಂಕಗಳು ಇನ್ನೂ ಪೂರ್ಣಗೊಳ್ಳದಿರುವ ಕುರಿತಂತೆ ಮಾತನಾಡಿದ ಸಂಸದರು,10 ಕೋ.ರೂ. ವೆಚ್ಚದಲ್ಲಿ 102 ಕಾಲು ಸಂಕಗಳನ್ನು ಮಾಡುವ ಯೋಜನೆ ಕೈಗೊಳ್ಳಲಾಗಿತ್ತು.ಅದರಲ್ಲಿ ಕೆಲವು ಆಗಿವೆ ಒಂದಿಷ್ಟು ಬಾಕಿ ಇದೆ ಆದರೆ ಈಗಿನ ಸರಕಾರ ಎಲ್ಲ ಕಾಮಗಾರಿಗಳನ್ನು ತಡೆ ಹಿಡಿದಿದ್ದರಿಂದ ವಿಳಂಬವಾಗಿದೆ.ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದು,ಬಜೆಟ್ ಬಳಿಕ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.ಆ ಬಳಿಕ ಈ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.
25 ಟವರ್ ಮಂಜೂರು:ಹಳ್ಳಿಹೊಳೆ,ಕಾಲ್ತೋಡು,ಹಳ್ಳಿಬೇರು ಸಹಿತ ವಿವಿಧೆಡೆಗಳಲ್ಲಿ 25 ಟವರ್‍ಗಳು ಕೇಂದ್ರದಿಂದ ಮಂಜೂರಾಗಿದ್ದು,ಆದಷ್ಟು ಬೇಗ ಅದರ ಕಾಮಗಾರಿ ಪೂರ್ಣಗೊಂಡು,ಜನರಿಗೆ ಪ್ರಯೋಜನ ಸಿಗಲಿದೆ.ಇನ್ನು 25-30 ಟವರ್‍ಗೆ ಅನುದಾನ ಸಿಗುವ ನಿರೀಕ್ಷೆಯಿದ್ದು,ಎಲ್ಲೆಲ್ಲ ಅಗತ್ಯವಿದೆಯೋ ಆ ಬಗ್ಗೆ ನಮಗೆ ಮಾಹಿತಿ ನೀಡಿ ಎಂದು ಸಂಸದರು ಇದೇ ವೇಳೆ ತಿಳಿಸಿದರು.

Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

7 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago