ಕುಂದಾಪುರ

ಶಕ್ತಿ ಯೋಜನೆ ಲಾಭ ಖಾಸಗಿ ಬಸ್ ಗಳಲ್ಲಿಯೂ ಸಿಗುವಂತೆ ಆಗಬೇಕು -ಸಂಸದ ಬಿ.ವೈ ರಾಘವೇಂದ್ರ

Share

Advertisement
Advertisement

ಕುಂದಾಪುರ:ಶಕ್ತಿ ಯೋಜನೆ ಪ್ರಯೋಜನ ಖಾಸಗಿ ಬಸ್‍ಗಳಲ್ಲಿಯೂ ಜನರಿಗೆ ಸಿಗುವಂತಾಗಬೇಕು.ಇದಲ್ಲದೆ ಕೆಎಸ್‍ಆರ್‍ಟಿಸಿ ಬಸ್‍ಗಳು ತುಂಬಿರುವುದರಿಂದ ಬೆಳಗ್ಗೆ ಹಾಗೂ ಸಂಜೆ ವೇಳೆ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದ್ದು,ಅದಕ್ಕೆ ಪರ್ಯಾಯ ವ್ಯವಸ್ಥೆ ಏನಾದರೂ ಮಾಡಲು ಸಾಧ್ಯವೇ ಎನ್ನುದನ್ನು ಸರಕಾರ ಚಿಂತಿಸಬೇಕು.ಒಳ್ಳೆಯ ಯೋಜನೆಗಳನ್ನು ಪೂರ್ವ ತಯಾರಿ ನಡೆಸಿ, ಅನುಷ್ಠಾನಗೊಳಿಸಬೇಕು ಈ ಬಗ್ಗೆ ಗಂಭೀರ ಚಿಂತನೆಯನ್ನು ರಾಜ್ಯ ಸರಕಾರ ಮಾಡಬೇಕಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಒತ್ತಾಯಿಸಿದರು.
ಹೆಮ್ಮಾಡಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು,ಶಿಕ್ಷಕರ ವರ್ಗಾವಣೆಯಿಂದ ಕೆಲ ಶಾಲೆಗಳಲ್ಲಿ ಸಮಸ್ಯೆಗಳಾಗುತ್ತಿದೆ, ಪರ್ಯಾಯ ವ್ಯವಸ್ಥೆ ಮಾಡದೇ ಶಿಕ್ಷಕರ ವರ್ಗಾವಣೆ ಮಾಡುವುದು ಸರಿಯಲ್ಲ.ಈ ಬಗ್ಗೆ ರಾಜ್ಯ ಸರಕಾರ ಗಮನಕೊಡಬೇಕು ಎಂದರು.

Advertisement


ಕಾಲು ಸಂಕಗಳು ಇನ್ನೂ ಪೂರ್ಣಗೊಳ್ಳದಿರುವ ಕುರಿತಂತೆ ಮಾತನಾಡಿದ ಸಂಸದರು,10 ಕೋ.ರೂ. ವೆಚ್ಚದಲ್ಲಿ 102 ಕಾಲು ಸಂಕಗಳನ್ನು ಮಾಡುವ ಯೋಜನೆ ಕೈಗೊಳ್ಳಲಾಗಿತ್ತು.ಅದರಲ್ಲಿ ಕೆಲವು ಆಗಿವೆ ಒಂದಿಷ್ಟು ಬಾಕಿ ಇದೆ ಆದರೆ ಈಗಿನ ಸರಕಾರ ಎಲ್ಲ ಕಾಮಗಾರಿಗಳನ್ನು ತಡೆ ಹಿಡಿದಿದ್ದರಿಂದ ವಿಳಂಬವಾಗಿದೆ.ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದು,ಬಜೆಟ್ ಬಳಿಕ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.ಆ ಬಳಿಕ ಈ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.
25 ಟವರ್ ಮಂಜೂರು:ಹಳ್ಳಿಹೊಳೆ,ಕಾಲ್ತೋಡು,ಹಳ್ಳಿಬೇರು ಸಹಿತ ವಿವಿಧೆಡೆಗಳಲ್ಲಿ 25 ಟವರ್‍ಗಳು ಕೇಂದ್ರದಿಂದ ಮಂಜೂರಾಗಿದ್ದು,ಆದಷ್ಟು ಬೇಗ ಅದರ ಕಾಮಗಾರಿ ಪೂರ್ಣಗೊಂಡು,ಜನರಿಗೆ ಪ್ರಯೋಜನ ಸಿಗಲಿದೆ.ಇನ್ನು 25-30 ಟವರ್‍ಗೆ ಅನುದಾನ ಸಿಗುವ ನಿರೀಕ್ಷೆಯಿದ್ದು,ಎಲ್ಲೆಲ್ಲ ಅಗತ್ಯವಿದೆಯೋ ಆ ಬಗ್ಗೆ ನಮಗೆ ಮಾಹಿತಿ ನೀಡಿ ಎಂದು ಸಂಸದರು ಇದೇ ವೇಳೆ ತಿಳಿಸಿದರು.

Advertisement
Advertisement

Share
Team Kundapur Times

Recent Posts

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

12 hours ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

1 day ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

3 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

4 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

4 days ago

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…

6 days ago