ಕುಂದಾಪುರ

ಶಕ್ತಿ ಯೋಜನೆ ಲಾಭ ಖಾಸಗಿ ಬಸ್ ಗಳಲ್ಲಿಯೂ ಸಿಗುವಂತೆ ಆಗಬೇಕು -ಸಂಸದ ಬಿ.ವೈ ರಾಘವೇಂದ್ರ

Share

ಕುಂದಾಪುರ:ಶಕ್ತಿ ಯೋಜನೆ ಪ್ರಯೋಜನ ಖಾಸಗಿ ಬಸ್‍ಗಳಲ್ಲಿಯೂ ಜನರಿಗೆ ಸಿಗುವಂತಾಗಬೇಕು.ಇದಲ್ಲದೆ ಕೆಎಸ್‍ಆರ್‍ಟಿಸಿ ಬಸ್‍ಗಳು ತುಂಬಿರುವುದರಿಂದ ಬೆಳಗ್ಗೆ ಹಾಗೂ ಸಂಜೆ ವೇಳೆ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದ್ದು,ಅದಕ್ಕೆ ಪರ್ಯಾಯ ವ್ಯವಸ್ಥೆ ಏನಾದರೂ ಮಾಡಲು ಸಾಧ್ಯವೇ ಎನ್ನುದನ್ನು ಸರಕಾರ ಚಿಂತಿಸಬೇಕು.ಒಳ್ಳೆಯ ಯೋಜನೆಗಳನ್ನು ಪೂರ್ವ ತಯಾರಿ ನಡೆಸಿ, ಅನುಷ್ಠಾನಗೊಳಿಸಬೇಕು ಈ ಬಗ್ಗೆ ಗಂಭೀರ ಚಿಂತನೆಯನ್ನು ರಾಜ್ಯ ಸರಕಾರ ಮಾಡಬೇಕಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಒತ್ತಾಯಿಸಿದರು.
ಹೆಮ್ಮಾಡಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು,ಶಿಕ್ಷಕರ ವರ್ಗಾವಣೆಯಿಂದ ಕೆಲ ಶಾಲೆಗಳಲ್ಲಿ ಸಮಸ್ಯೆಗಳಾಗುತ್ತಿದೆ, ಪರ್ಯಾಯ ವ್ಯವಸ್ಥೆ ಮಾಡದೇ ಶಿಕ್ಷಕರ ವರ್ಗಾವಣೆ ಮಾಡುವುದು ಸರಿಯಲ್ಲ.ಈ ಬಗ್ಗೆ ರಾಜ್ಯ ಸರಕಾರ ಗಮನಕೊಡಬೇಕು ಎಂದರು.


ಕಾಲು ಸಂಕಗಳು ಇನ್ನೂ ಪೂರ್ಣಗೊಳ್ಳದಿರುವ ಕುರಿತಂತೆ ಮಾತನಾಡಿದ ಸಂಸದರು,10 ಕೋ.ರೂ. ವೆಚ್ಚದಲ್ಲಿ 102 ಕಾಲು ಸಂಕಗಳನ್ನು ಮಾಡುವ ಯೋಜನೆ ಕೈಗೊಳ್ಳಲಾಗಿತ್ತು.ಅದರಲ್ಲಿ ಕೆಲವು ಆಗಿವೆ ಒಂದಿಷ್ಟು ಬಾಕಿ ಇದೆ ಆದರೆ ಈಗಿನ ಸರಕಾರ ಎಲ್ಲ ಕಾಮಗಾರಿಗಳನ್ನು ತಡೆ ಹಿಡಿದಿದ್ದರಿಂದ ವಿಳಂಬವಾಗಿದೆ.ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದು,ಬಜೆಟ್ ಬಳಿಕ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.ಆ ಬಳಿಕ ಈ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.
25 ಟವರ್ ಮಂಜೂರು:ಹಳ್ಳಿಹೊಳೆ,ಕಾಲ್ತೋಡು,ಹಳ್ಳಿಬೇರು ಸಹಿತ ವಿವಿಧೆಡೆಗಳಲ್ಲಿ 25 ಟವರ್‍ಗಳು ಕೇಂದ್ರದಿಂದ ಮಂಜೂರಾಗಿದ್ದು,ಆದಷ್ಟು ಬೇಗ ಅದರ ಕಾಮಗಾರಿ ಪೂರ್ಣಗೊಂಡು,ಜನರಿಗೆ ಪ್ರಯೋಜನ ಸಿಗಲಿದೆ.ಇನ್ನು 25-30 ಟವರ್‍ಗೆ ಅನುದಾನ ಸಿಗುವ ನಿರೀಕ್ಷೆಯಿದ್ದು,ಎಲ್ಲೆಲ್ಲ ಅಗತ್ಯವಿದೆಯೋ ಆ ಬಗ್ಗೆ ನಮಗೆ ಮಾಹಿತಿ ನೀಡಿ ಎಂದು ಸಂಸದರು ಇದೇ ವೇಳೆ ತಿಳಿಸಿದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago