ವಿದ್ಯಾರ್ಥಿಗಳಿಗೆ ಶಬ್ದಕೋಶ ಪುಸ್ತಕ ವಿತರಣೆ
ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಹೊಸಾಡು ಶಾಲೆಯ 6,7 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ನಿವೃತ್ತ ಅಧ್ಯಾಪಕರಾದ ಸಂಪತ್ ಕುಮಾರ್ ಪಾಂಗಾಳ ಅವರು ಅತ್ಯುತ್ತಮ ಗುಣಮಟ್ಟದ ಶಬ್ದಕೋಶ ಪುಸ್ತಕವನ್ನು ಉಚಿತವಾಗಿ ನೀಡಿ ಶುಭಹಾರೈಸಿದರು.ದೈಹಿಕ ಶಿಕ್ಷಣ ಪರಿವಿಕ್ಷಣಾಕಾರಿ ಚಂದ್ರಶೇಖರ ಶೆಟ್ಟಿ,ಮುಖ್ಯೋಪಾಧ್ಯಾಯರಾದ ರಾಜೇಶ್,ಶಿಕ್ಷಕವೃಂದವರು ಉಪಸ್ಥಿತರಿದ್ದರು.





















































































































































































































































































































































































































































































































































































































































































































































































































































































































































































































































































































































































































































































































































































































































































