ಕುಂದಾಪುರ

ಹೆಚ್ಚುವರಿ ಆಧಾರದ ಮೇಲೆ ಹೊಸಾಡು ಶಾಲೆ ದೈಹಿಕ ಶಿಕ್ಷಕರ ವರ್ಗಾವಣೆ:ಶಿಕ್ಷಕರ ನೇಮಕಕ್ಕೆ ಪೋಷಕರ ಆಗ್ರಹ

Share


ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಹೊಸಾಡು ಶಾಲೆಯ ದೈಹಿಕ ಶಿಕ್ಷಣ ಶಿಕ್ಷರನ್ನು ಹೆಚ್ಚುವರಿ ಆಧಾರದ ಮೇಲೆ ಬೇರೆ ಶಾಲೆಗೆಮಾಡಿರುವುದನ್ನು ಖಂಡಿಸಿ,ಶಿಕ್ಷಕರನ್ನು ಮರು ನೇಮಕ ಮಾಡುವಂತೆ ಆಗ್ರಹಿಸಿ ಹೊಸಾಡು ಶಾಲೆಯ ಎಸ್‍ಡಿಎಂಸಿ ಮತ್ತು ಗ್ರಾಮಸ್ಥರ ವತಿಯಿಂದ ಶಿವಮೊಗ್ಗ ಕ್ಷೇತ್ರ ಸಂಸದ ಬಿ.ವೈ.ರಾಘವೇಂದ್ರ ಮತ್ತು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಶುಕ್ರವಾರ ಹೆಮ್ಮಾಡಿಯಲ್ಲಿ ಮನವಿಯನ್ನು ಸಲ್ಲಿಸಲಾಯಿತು.
ಸರಕಾರಿ ಹಿರಿಯ ಪ್ರಾಥಮಿಕ ಹೊಸಾಡು ಶಾಲೆಯಲ್ಲಿ 1 ರಿಂದ 8ನೇ ತರಗತಿ ವರೆಗೆ ವಿದ್ಯಾಭ್ಯಾಸವನ್ನು ನೀಡಲಾಗುತ್ತಿದೆ ಪ್ರಸ್ತುತ ಶಾಲೆಯಲ್ಲಿ 55 ಮಕ್ಕಳು ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ.ಶಾಲೆಯಲ್ಲಿ ಇಬ್ಬರು ಸರಕಾರಿ ಶಿಕ್ಷಕರು ಮತ್ತು ಒಂದು ಅತಿಥಿ ಶಿಕ್ಷಕರಿದ್ದು,ಜಿಪಿಟಿ ಶಿಕ್ಷಕರು ಸಹಿತ ಇಬ್ಬರು ಶಿಕ್ಷಕರ ಕೊರತೆ ಇದೆ,ಶಿಕ್ಷಕರ ಕೊರತೆ ನಡುವೆ ಹೆಚ್ಚುವರಿ ಆಧಾರದ ಮೇಲೆ ದೈಹಿಕ ಶಿಕ್ಷಣ ಶಿಕ್ಷರನ್ನು ವರ್ಗಾವಣೆ ಮಾಡಿರುವುದು ಪೋಷಕರ ಆಕ್ರೋಶ ಕಾರಣವಾಗಿದೆ.

ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿದ್ದಾರೆ.ಈ ಸಂದರ್ಭದಲ್ಲಿ ಶಾಲೆ ಎಸ್‍ಡಿಎಂಸಿ ಅಧ್ಯಕ್ಷೆ ರೇಖಾ ಗಣೇಶ್,ವಿಶ್ವನಾಥ್ ಶೆಟ್ಟಿ,ಸುರೇಶ್ ಶೆಟ್ಟಿಗಾರ್,ಸಂತೋಷ ಮೊಗವೀರ,ನಾಗರತ್ನ ಉಪಸ್ಥಿತರಿದ್ದರು.


Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

7 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago