ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಹೊಸಾಡು ಶಾಲೆಯ ದೈಹಿಕ ಶಿಕ್ಷಣ ಶಿಕ್ಷರನ್ನು ಹೆಚ್ಚುವರಿ ಆಧಾರದ ಮೇಲೆ ಬೇರೆ ಶಾಲೆಗೆಮಾಡಿರುವುದನ್ನು ಖಂಡಿಸಿ,ಶಿಕ್ಷಕರನ್ನು ಮರು ನೇಮಕ ಮಾಡುವಂತೆ ಆಗ್ರಹಿಸಿ ಹೊಸಾಡು ಶಾಲೆಯ ಎಸ್ಡಿಎಂಸಿ ಮತ್ತು ಗ್ರಾಮಸ್ಥರ ವತಿಯಿಂದ ಶಿವಮೊಗ್ಗ ಕ್ಷೇತ್ರ ಸಂಸದ ಬಿ.ವೈ.ರಾಘವೇಂದ್ರ ಮತ್ತು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಶುಕ್ರವಾರ ಹೆಮ್ಮಾಡಿಯಲ್ಲಿ ಮನವಿಯನ್ನು ಸಲ್ಲಿಸಲಾಯಿತು.
ಸರಕಾರಿ ಹಿರಿಯ ಪ್ರಾಥಮಿಕ ಹೊಸಾಡು ಶಾಲೆಯಲ್ಲಿ 1 ರಿಂದ 8ನೇ ತರಗತಿ ವರೆಗೆ ವಿದ್ಯಾಭ್ಯಾಸವನ್ನು ನೀಡಲಾಗುತ್ತಿದೆ ಪ್ರಸ್ತುತ ಶಾಲೆಯಲ್ಲಿ 55 ಮಕ್ಕಳು ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ.ಶಾಲೆಯಲ್ಲಿ ಇಬ್ಬರು ಸರಕಾರಿ ಶಿಕ್ಷಕರು ಮತ್ತು ಒಂದು ಅತಿಥಿ ಶಿಕ್ಷಕರಿದ್ದು,ಜಿಪಿಟಿ ಶಿಕ್ಷಕರು ಸಹಿತ ಇಬ್ಬರು ಶಿಕ್ಷಕರ ಕೊರತೆ ಇದೆ,ಶಿಕ್ಷಕರ ಕೊರತೆ ನಡುವೆ ಹೆಚ್ಚುವರಿ ಆಧಾರದ ಮೇಲೆ ದೈಹಿಕ ಶಿಕ್ಷಣ ಶಿಕ್ಷರನ್ನು ವರ್ಗಾವಣೆ ಮಾಡಿರುವುದು ಪೋಷಕರ ಆಕ್ರೋಶ ಕಾರಣವಾಗಿದೆ.
ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿದ್ದಾರೆ.ಈ ಸಂದರ್ಭದಲ್ಲಿ ಶಾಲೆ ಎಸ್ಡಿಎಂಸಿ ಅಧ್ಯಕ್ಷೆ ರೇಖಾ ಗಣೇಶ್,ವಿಶ್ವನಾಥ್ ಶೆಟ್ಟಿ,ಸುರೇಶ್ ಶೆಟ್ಟಿಗಾರ್,ಸಂತೋಷ ಮೊಗವೀರ,ನಾಗರತ್ನ ಉಪಸ್ಥಿತರಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…