ಬೆಂಗಳೂರು:ರಷ್ಯಾದಲ್ಲಿ ಬಂಡಾಯವೆದ್ದಿರುವ ಖಾಸಗಿ ಸೇನಾ ಗುಂಪಿನಿಂದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಕ್ರೇನ್ ಮೇಲಿನ ದಾಳಿ ಆರಂಭವಾದ ನಂತರ ರಷ್ಯಾದಲ್ಲಿ ಅತ್ಯಂತ ದೊಡ್ಡ ಆಂತರಿಕ ಬಿಕ್ಕಟ್ಟು ಉಂಟಾಗಿದೆ. ಖಾಸಗಿ ಸೇನಾ ಗುಂಪು (ಮರ್ಸಿನರಿ) ವ್ಯಾಗ್ನರ್ ಮುಖ್ಯಸ್ಥ ಯೆವ್ಗೆನಿ ಪ್ರಿಗೊಝಿನ್ ಅವರು ತಮ್ಮ ಪಡೆಯು 25,000 ಸೈನಿಕರೊಂದಿಗೆ ರಷ್ಯಾದೊಳಗೆ ನುಗ್ಗಿದೆ ಎಂದು ಹೇಳಿಕೊಂಡಿದ್ದಾರೆ.
ರಷ್ಯಾ ಸೇನಾ ನಾಯಕತ್ವವನ್ನು ಉರುಳಿಸುವ ಪ್ರಯತ್ನವಾಗಿ ತನ್ನ ಸಶಸ್ತ್ರ ಪಡೆಗಳನ್ನು ಮಾಸ್ಕೋದ ಕಡೆ 1200 ಕಿಮೀ ದೂರದಿಂದ ಕಳುಹಿಸಲಾಗಿದೆ ಎಂದು ಪ್ರಿಗೊಝಿನ್ ಹೇಳಿದ್ದಾರೆ. ಸೇನಾ ಬೆಂಗಾವಲು ಉಕ್ರೇನ್ ಗಡಿ ಸಮೀಪದ ಯುರೋಪಿಯನ್ ರಷ್ಯಾದ ದಕ್ಷಿಣ ಭಾಗ ಹಾಗೂ ಮಾಸ್ಕೋವನ್ನು ಸಂಪರ್ಕಿಸುವ ಮಾರ್ಗದಲ್ಲಿ ತೆರಳುತ್ತಿದ್ದು, ಜನರು ಅಲ್ಲಿಂದ ದೂರ ಇರಬೇಕು ಎಂದು ರಷ್ಯಾ ಅಧಿಕಾರಿಗಳು ಸಲಹೆ ನೀಡಿದ್ದಾರೆ.
ಟೆಲಿಗ್ರಾಂನಲ್ಲಿ ವಿಡಿಯೋ ಹಂಚಿಕೊಂಡಿದ್ದ ವ್ಯಾಗ್ನರ್ ಮುಖ್ಯಸ್ಥ ಪ್ರಿಗೊಝಿನ್, ತಾವು ದಕ್ಷಿಣ ಏಷ್ಯಾದ ರೋಸ್ತೊವ್ ಆನ್ ಡಾನ್ನಲ್ಲಿನ ಸೇನಾ ಕೇಂದ್ರ ಕಚೇರಿ ಒಳಗೆ ಇರುವುದಾಗಿ ಮತ್ತು ತಮ್ಮ ಪಡೆಯು ನಗರದ ಸೇನಾ ನೆಲೆಗಳ ಮೇಲೆ ನಿಯಂತ್ರಣ ಹೊಂದಿರುವುದಾಗಿ ತಿಳಿಸಿದ್ದಾರೆ. ಉಕ್ರೇನ್ ಭಾಗದಿಂದ ರಷ್ಯಾ ಒಳಗೆ ತಮ್ಮ ಸೇನೆ ಪ್ರವೇಶಿಸಿರುವುದಾಗಿ ಅವರು ಇದಕ್ಕೂ ಮೊದಲು ಹೇಳಿದ್ದರು. ತಾವು ಹಾಗೂ ತಮ್ಮ ಸಾವಿರಾರು ಸೈನಿಕರು ಸಾಯಲು ಸಿದ್ಧ ಎಂದಿದ್ದರು.
ವ್ಯಾಗ್ನರ್ ವಿರುದ್ಧ ಪುಟಿನ್ ಆಕ್ರೋಶ
ಇದು ಆಂತರಿಕ ವಿಶ್ವಾಸಘಾತುಕತನ ಎಂದು ಕಿಡಿಕಾರಿರುವ ವ್ಲಾಡಿಮಿರ್ ಪುಟಿನ್, ಬಂಡಾಯ ಎದ್ದಿರುವವರ ವಿರುದ್ಧ ಕಠಿಣಾತಿ ಕಠಿಣ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಹಾಗೆಯೇ ರೋಸ್ತೊವ್ನಲ್ಲಿರುವ ಸನ್ನಿವೇಶವು ಬಹಳ ‘ಕ್ಲಿಷ್ಟಕರ’ವಾಗಿದೆ ಎಂದು ಒಪ್ಪಿಕೊಂಡಿದ್ದಾರೆ.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…