ಕುಂದಾಪುರ

ಸಂಪರ್ಕ ರಸ್ತೆಯನ್ನು ಪುನರ್ ನಿರ್ಮಾಣ ಮಾಡಿಕೊಂಡ ಮೀನುಗಾರರು,ಸರ್ಕಾರದ ನಿರುತ್ಸಾಹ ಧೋರಣೆ

Share

Advertisement
Advertisement
Advertisement

Advertisement

ಕುಂದಾಪುರ:ಬಿಪರ್ ಜಾಯ್ ಚಂಡಮಾರುತದ ಪ್ರಭಾವದಿಂದ ಕಡಲಬ್ಬರ ಉಂಟಾಗಿ ಬೈಂದೂರು ತಾಲೂಕಿನ ಮರವಂತೆ ಕರಾವಳಿ ಭಾಗದ ಫಿಶರೀಷ್ ರಸ್ತೆ ಬಿರುಕು ಬಿಟ್ಟು ಸಂಪರ್ಕ ಕಡಿತವಾಗಿದ್ದರೂ ಸರಕಾರ ಮತ್ತು ಜನಪ್ರತಿನಿಧಿಗಳು,ಇಲಾಖಾಧಿಕಾರಿಗಳು ಯಾವುದೇ ರೀತಿ ಕ್ರಮಗಳನ್ನು ಕೈಗೊಳ್ಳದೆ ಇದ್ದಿದ್ದರಿಂದ ಬೇಸತ್ತ ಮೀನುಗಾರರು ರಸ್ತೆ ಸಂಪರ್ಕ ವ್ಯವಸ್ಥೆಗಾಗಿ ಶ್ರೀರಾಮ ಮಂದಿರ ಮರವಂತೆ ಮೀನುಗಾರರ ಸೇವಾ ಸಮಿತಿ ವತಿಯಿಂದ ಸುಮಾರು 10.ಲಕ್ಷ.ರೂ ವ್ಯಯಿಸಿ ಕಡಲ ದಂಡೆಗೆ ಕಲ್ಲುಗಳನ್ನು ಹಾಕಿ ಸುಮಾರು 100.ಮೀಟರ್ ವರೆಗಿನ ಸಂಪರ್ಕ ರಸ್ತೆಯನ್ನು ಪುನರ್ ನಿರ್ಮಾಣ ಮಾಡಿಕೊಂಡಿದ್ದಾರೆ.

ಮರವಂತೆ ಕಡಲ ತಡಿಯ ನಿವಾಸಿಗಳಾದ ಮೀನುಗಾರರಿಗೆ ಫಿಶರೀಷ್ ರಸ್ತೆ ಪ್ರಮುಖ ರಸ್ತೆ ಆಗಿದೆ,ಕಳೆದ ವರ್ಷ ಕಾಣಿಸಿಕೊಂಡಿದ್ದ ತೌಕ್ತೆ ಚಂಡ ಮಾರುತದ ಹೊಡೆತಕ್ಕೆ ಮೀನುಗಾರಿಕಾ ರಸ್ತೆ ಸಂಪೂರ್ಣ ಹಾನಿಯಾಗಿತ್ತು.ಕಡಲ ದಂಡೆ ಸಮುದ್ರ ಪಾಲಾಗಿ ಮೀನುಗಾರರ ಮೂಲಭೂತ ಸೌಕರ್ಯಗಳು ನಾಶವಾಗಿದ್ದರೂ ಸರಕಾರ ಯಾವುದೇ ರೀತಿ ಕ್ರಮಗಳನ್ನು ಕೈಗೊಳ್ಳದೆ ಪರಿಹಾರ ನೀಡದೆ ಅಸಡ್ಡೆಯನ್ನು ತೋರಿದೆ.ಈ ಬಾರಿ ಕಾಣಿಸಿಕೊಂಡಿದ್ದ ಬಿಪರ್ ಜಾಯ್ ಚಂಡ ಮಾರುತದಿಂದ ಮತ್ತೆ ಮರವಂತೆ ಫಿಶರೀಷ್ ರಸ್ತೆಗೆ ಹಾನಿಯಾಗಿದ್ದರೂ ಜನಪ್ರತಿನಿಧಿಗಳು,ಅಧಿಕಾರಿಗಳು ಯಾವುದೇ ರೀತಿ ಕ್ರಮಗಳನ್ನು ಕೈಗೊಂಡಿರಲಿಲ್ಲ. ಚಂಡಮಾರುತದ ಪ್ರಭಾವದಿಂದ ಕರಾವಳಿ ಭಾಗದ ಮರವಂತೆಯಲ್ಲಿ ಹಾನಿಯಾಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬಂದರು ಮತ್ತು ಮೀನುಗಾರಿಕಾ ಸಚಿವರು ಇತ್ತ ಕಡೆ ದೃಷ್ಟಿಯನ್ನು ಹಾಯಿಸದೆ ತಮಗೂ ಕಡಲ್ಕೊರೆತಕ್ಕೂ ಯಾವುದೆ ರೀತಿ ಸಂಬಂಧವಿಲ್ಲ ಎನ್ನುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ.

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 week ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 week ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

2 weeks ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

2 weeks ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

2 weeks ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

3 weeks ago