ಕುಂದಾಪುರ:ಬಿಪರ್ ಜಾಯ್ ಚಂಡಮಾರುತದ ಪ್ರಭಾವದಿಂದ ಕಡಲಬ್ಬರ ಉಂಟಾಗಿ ಬೈಂದೂರು ತಾಲೂಕಿನ ಮರವಂತೆ ಕರಾವಳಿ ಭಾಗದ ಫಿಶರೀಷ್ ರಸ್ತೆ ಬಿರುಕು ಬಿಟ್ಟು ಸಂಪರ್ಕ ಕಡಿತವಾಗಿದ್ದರೂ ಸರಕಾರ ಮತ್ತು ಜನಪ್ರತಿನಿಧಿಗಳು,ಇಲಾಖಾಧಿಕಾರಿಗಳು ಯಾವುದೇ ರೀತಿ ಕ್ರಮಗಳನ್ನು ಕೈಗೊಳ್ಳದೆ ಇದ್ದಿದ್ದರಿಂದ ಬೇಸತ್ತ ಮೀನುಗಾರರು ರಸ್ತೆ ಸಂಪರ್ಕ ವ್ಯವಸ್ಥೆಗಾಗಿ ಶ್ರೀರಾಮ ಮಂದಿರ ಮರವಂತೆ ಮೀನುಗಾರರ ಸೇವಾ ಸಮಿತಿ ವತಿಯಿಂದ ಸುಮಾರು 10.ಲಕ್ಷ.ರೂ ವ್ಯಯಿಸಿ ಕಡಲ ದಂಡೆಗೆ ಕಲ್ಲುಗಳನ್ನು ಹಾಕಿ ಸುಮಾರು 100.ಮೀಟರ್ ವರೆಗಿನ ಸಂಪರ್ಕ ರಸ್ತೆಯನ್ನು ಪುನರ್ ನಿರ್ಮಾಣ ಮಾಡಿಕೊಂಡಿದ್ದಾರೆ.
ಮರವಂತೆ ಕಡಲ ತಡಿಯ ನಿವಾಸಿಗಳಾದ ಮೀನುಗಾರರಿಗೆ ಫಿಶರೀಷ್ ರಸ್ತೆ ಪ್ರಮುಖ ರಸ್ತೆ ಆಗಿದೆ,ಕಳೆದ ವರ್ಷ ಕಾಣಿಸಿಕೊಂಡಿದ್ದ ತೌಕ್ತೆ ಚಂಡ ಮಾರುತದ ಹೊಡೆತಕ್ಕೆ ಮೀನುಗಾರಿಕಾ ರಸ್ತೆ ಸಂಪೂರ್ಣ ಹಾನಿಯಾಗಿತ್ತು.ಕಡಲ ದಂಡೆ ಸಮುದ್ರ ಪಾಲಾಗಿ ಮೀನುಗಾರರ ಮೂಲಭೂತ ಸೌಕರ್ಯಗಳು ನಾಶವಾಗಿದ್ದರೂ ಸರಕಾರ ಯಾವುದೇ ರೀತಿ ಕ್ರಮಗಳನ್ನು ಕೈಗೊಳ್ಳದೆ ಪರಿಹಾರ ನೀಡದೆ ಅಸಡ್ಡೆಯನ್ನು ತೋರಿದೆ.ಈ ಬಾರಿ ಕಾಣಿಸಿಕೊಂಡಿದ್ದ ಬಿಪರ್ ಜಾಯ್ ಚಂಡ ಮಾರುತದಿಂದ ಮತ್ತೆ ಮರವಂತೆ ಫಿಶರೀಷ್ ರಸ್ತೆಗೆ ಹಾನಿಯಾಗಿದ್ದರೂ ಜನಪ್ರತಿನಿಧಿಗಳು,ಅಧಿಕಾರಿಗಳು ಯಾವುದೇ ರೀತಿ ಕ್ರಮಗಳನ್ನು ಕೈಗೊಂಡಿರಲಿಲ್ಲ. ಚಂಡಮಾರುತದ ಪ್ರಭಾವದಿಂದ ಕರಾವಳಿ ಭಾಗದ ಮರವಂತೆಯಲ್ಲಿ ಹಾನಿಯಾಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬಂದರು ಮತ್ತು ಮೀನುಗಾರಿಕಾ ಸಚಿವರು ಇತ್ತ ಕಡೆ ದೃಷ್ಟಿಯನ್ನು ಹಾಯಿಸದೆ ತಮಗೂ ಕಡಲ್ಕೊರೆತಕ್ಕೂ ಯಾವುದೆ ರೀತಿ ಸಂಬಂಧವಿಲ್ಲ ಎನ್ನುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…