ರಾಜ್ಯ

ಬಿಜೆಪಿಯಲ್ಲಿ ನಳಿನ್ ಕುಮಾರ್ ಕಟೀಲ್ ತಲೆ ದಂಡ ನಿಶ್ಚಿತ-ಸಮರ್ಥ ನಾಯಕನಿಗಾಗಿ ತಲಾಶ್

Share

ಬೆಂಗಳೂರು :ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತು ಮುಖಭಂಗಕ್ಕೀಡಾಗಿರುವ ಬಿಜೆಪಿ ಈಗ ಲೋಕಸಭೆ ಚುನಾವಣೆಗಾಗುವಾಗ ಪಕ್ಷದ ವರ್ಚಸ್ಸನ್ನು ಮೇಲೆತ್ತಬಲ್ಲ ರಾಜ್ಯಾಧ್ಯಕ್ಷನನ್ನು ಹುಡುಕುತ್ತಿದೆ. ಜುಲೈ 3ರಂದು ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು,ಅದಕ್ಕೂ ಮೊದಲು ರಾಜ್ಯಾಧ್ಯಕ್ಷ ಮತ್ತು ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿಯಲ್ಲಿ ಪ್ರಕ್ರಿಯೆ ಶುರುವಾಗಿದೆ.

ಸದ್ಯಕ್ಕೆ ರಾಜ್ಯಾಧ್ಯಕ್ಷರಾಗಿರುವ ನಳಿನ್‌ಕುಮಾರ್ ಕಟೀಲು ಅವರ ಅವಧಿ ಮುಗಿದಿದ್ದು ಮತ್ತೆ ಅವರನ್ನೇ ಮುಂದುವರಿಸುವ ಉದ್ದೇಶ ಬಿಜೆಪಿ ಹೈಕಮಾಂಡ್‌ಗೆ ಇಲ್ಲ. ಸ್ವತಹ ನಳಿನ್‌ಕುಮಾರ್‌ ಕಟೀಲು ಜವಾಬ್ದಾರಿಯಿಂದ ಕಳಚಿಕೊಳ್ಳಲು ರೆಡಿಯಾಗಿದ್ದಾರೆ.
ಅರುವತ್ತೈದು ಸ್ಥಾನಕ್ಕೆ ಕುಸಿದಿರುವ ಬಿಜೆಪಿ ಚುನಾವಣೆ ಮುಗಿದು ಎರಡು ತಿಂಗಳಾಗುತ್ತಾ ಬಂದಿದ್ರೂ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯನ್ನು ಮಾಡಿಲ್ಲ.ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿ ಹಲವು ಹೆಸರುಗಳ ಪರಿಶೀಲನೆ ನಡೆಯುತ್ತಿದೆ.ಏಳು ಮಂದಿ ನಾಯಕರನ್ನು ಶಾರ್ಟ್‌ಲಿಸ್ಟ್‌ ಮಾಡಲಾಗಿದೆ.ಈ ಪೈಕಿ ಒಬ್ಬರು ವಿಪಕ್ಷ ನಾಯಕ ಹಾಗೂ ಇನ್ನೊಬ್ಬರು ರಾಜ್ಯಾಧ್ಯಕ್ಷ ಆಗಲಿದ್ದಾರೆ.
ಆರ್.ಅಶೋಕ್, ಸಿ.ಟಿ. ರವಿ, ಶೋಭಾ ಕರಂದ್ಲಾಜೆ, ಬಿ.ವೈ. ವಿಜಯೇಂದ್ರ,ಸೋಮಣ್ಣ, ಶ್ರೀರಾಮುಲು ಹಾಗೂ ಕಾರ್ಕಳದ ಶಾಸಕ ಸುನಿಲ್ ಕುಮಾರ್ ಹೆಸರು ಈ ಲಿಸ್ಟ್‌ನಲ್ಲಿದೆ ಎನ್ನಲಾಗುತ್ತಿದೆ.
ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಸೈಡ್‌ಲೈನ್ ಮಾಡಿದ ಕಾರಣಕ್ಕಾಗಿ ರಾಜ್ಯದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದೆ ಎಂಬ ಕಾರಣಕ್ಕಾಗಿ ಈಗ ಅವರ ಪುತ್ರ ವಿಜಯೇಂದ್ರ ಹೆಸರನ್ನು ರಾಜ್ಯಾಧ್ಯಕ್ಷ ಹುದ್ದೆಗೆ ಪರಿಗಣಿಸಬೇಕು ಎಂಬ ಪ್ರಬಲ ಒತ್ತಾಯ ಕೇಳಿ ಬರುತ್ತಿದೆ. ಆದರೆ ಪಕ್ಷದಲ್ಲಿ ಬಹಳ ಹಿರಿಯರಾಗಿರುವ ಹಾಗೂ ಒಕ್ಕಲಿಗ ನಾಯಕರಾದ ಸಿ.ಟಿ. ರವಿ, ಆರ್. ಅಶೋಕ್, ಶೋಭಾ ಕರಂದ್ಲಾಜೆ ಅವರಿಗೆ ಜವಾಬ್ದಾರಿ ನೀಡಿದರೆ ಪಕ್ಷಕ್ಕೆ ಒಳ್ಳೆಯದಾಗಲಿದೆ ಎಂಬುದು ಇನ್ನೊಂದ ತರ್ಕ.
ಹಿಂದುಳಿದ ಸಮುದಾಯದ ಶ್ರೀರಾಮುಲು ಅಥವಾ ಸುನಿಲ್ ಕುಮಾರ್ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಬೇಕು ಎಂಬ ಬೇಡಿಕೆ ಇದೆ.ಇವೆಲ್ಲದರ ನಡುವೆ ವಿ.ಸೋಮಣ್ಣ ಹೈಕಮಾಂಡ್ ಆದೇಶದ ಪ್ರಕಾರ ವರುಣಾ ಮತ್ತು ಚಾಮರಾಜನಗರದಲ್ಲಿ ಸ್ಪರ್ಧೆ ಮಾಡುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಸವಾಲಿಗೆ ಒಡ್ಡಿದ್ದರು.ಹಾಗಾಗಿ ಸೋಮಣ್ಣ ಹೆಸರು ಕೂಡ ಪ್ರಬಲವಾಗಿ ಕೇಳಿ ಬರ್ತಿದೆ. ಒಂದು ಅವಕಾಶವನ್ನ ಕೊಟ್ಟು ನೋಡಿ ಪಕ್ಷವನ್ನ ಕಟ್ಟುತ್ತೇನೆ ಎಂದು ವಿ ಸೋಮಣ್ಣ ಹೈಕಮಾಂಡ್‌ ನಾಯಕರ ಮುಂದೆ ತಮ್ಮ ಆಸೆಯನ್ನ ವ್ಯಕ್ತಪಡಿಸಿದ್ದಾರೆ.

ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಆಯ್ಕೆಗೆ ಆಯ್ಕೆ ಪ್ರಕ್ರಿಯೆಯಲ್ಲಿ ಜಾತಿ ರಾಜಕಾರಣವೂ‌ ಬಿಜೆಪಿಯಲ್ಲಿ ಮುನ್ನೆಲೆಗೆ ಬರುವ ಲಕ್ಷಣಗಳಿವೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago