ಕುಂದಾಪುರ

ಆಲೂರಿಗೆ ಸರಕಾರಿ ಬಸ್ ಸೌಲಭ್ಯ ಕಲ್ಪಿಸುವಂತೆ ಪ್ರತಿಭಟನೆ

Share


ಕುಂದಾಪುರ:ಆಲೂರು ಮಾರ್ಗಕ್ಕೆ ಸರಕಾರಿ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಕುಂದಾಪುರ ತಾಲೂಕು ಕಟ್ಟಡ ಕಾರ್ಮಿಕರ ಸಂಘ ಆಲೂರು ಮತ್ತು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರ ಸಂಘ ಆಲೂರು ಹಾಗೂ ಸ್ಥಳೀಯರ ವತಿಯಿಂದ ಆಲೂರು ಗ್ರಾಮ ಪಂಚಾಯತ್ ಎದುರು ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು.


ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ತಾಲೂಕು ಅಧ್ಯಕ್ಷ ಸುರೇಶ್ ಕಲ್ಲಾಗರ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ ಕಾಂಡಚಿನ ಪ್ರದೇಶವಾದ ಆಲೂರು ಭಾಗದ ಕೂಲಿ ಕಾರ್ಮಿಕರು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ದಿನಂಪ್ರತಿ ಕುಂದಾಪುರಕ್ಕೆ ತೆರಳುತ್ತಾರೆ ಸುಮಾರು 22.ಕಿಮೀ ದೂರದ ಕುಂದಾಪುರಕ್ಕೆ ತೆರಳಲು ಗ್ರಾಮೀಣ ಪ್ರದೇಶದ ಜನರಿಗೆ ಬಸ್ಸಿನ ಕೊರತೆ ಇದೆ.ಜನರ ಅನುಕೂಲದ ದೃಷ್ಟಿಯಿಂದ ಆಲೂರು-ಕುಂದಾಪುರಕ್ಕೆ ಸರಕಾರಿ ಬಸ್ ಸೌಲಭ್ಯವನ್ನು ಕಲ್ಪಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದರು.ಆಲೂರು ಮಾರ್ಗದಲ್ಲಿ ಸರಕಾರಿ ಬಸ್ ಸಂಚಾರ ಮಾಡುವುದರಿಂದ ಹತ್ತಕ್ಕೂ ಅಧಿಕ ಗ್ರಾಮಗಳಿಗೆ ಪ್ರಯೋಜನೆ ಆಗಲಿದೆ ಎಂದು ಹೇಳಿದರು.ಕುಂದಾಪುರ ತಾಲೂಕು ಕಟ್ಟಡ ಕಾರ್ಮಿಕರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಸಂತೋಷ್ ಹೆಮ್ಮಾಡಿ,ನಾಗರತ್ನ ನಾಡ,ರವಿ ವಿಎಂ,ಚಂದ್ರಶೇಖರ ವಿ,ಸುಮಿತ್ರಾ ಆಲೂರು,ಗೌರಿ ಆಲೂರು,ಅಂಬಿಕಾ ಉಪಸ್ಥಿತರಿದ್ದರು.ಸರಕಾರಿ ಬಸ್ ಸೌಲಭ್ಯ ಕಲ್ಪಿಸುಂತೆ ಆಲೂರು ಗ್ರಾ.ಪಂ ಅಧ್ಯಕ್ಷರು ಮತ್ತು ಪಿ.ಡಿ.ಒ ಗೆ ಮನವಿಯನ್ನು ಸಲ್ಲಿಸಲಾಯಿತು.ಕಟ್ಟಡ ಕಾರ್ಮಿಕ ಸಂಘ ಆಲೂರು ಅಧ್ಯಕ್ಷ ರಘುರಾಮ ಆಚಾರ್ ಮನವಿಯನ್ನು ಓದಿದರು.ಕಾರ್ಯದರ್ಶಿ ಗಣೇಶ್ ಆಚಾರ್ ವಂದಿಸಿದರು.

Advertisement

Share
Team Kundapur Times

Recent Posts

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

1 month ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

2 months ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

2 months ago