ಕುಂದಾಪುರ:ಆಲೂರು ಮಾರ್ಗಕ್ಕೆ ಸರಕಾರಿ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಕುಂದಾಪುರ ತಾಲೂಕು ಕಟ್ಟಡ ಕಾರ್ಮಿಕರ ಸಂಘ ಆಲೂರು ಮತ್ತು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರ ಸಂಘ ಆಲೂರು ಹಾಗೂ ಸ್ಥಳೀಯರ ವತಿಯಿಂದ ಆಲೂರು ಗ್ರಾಮ ಪಂಚಾಯತ್ ಎದುರು ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು.
ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ತಾಲೂಕು ಅಧ್ಯಕ್ಷ ಸುರೇಶ್ ಕಲ್ಲಾಗರ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ ಕಾಂಡಚಿನ ಪ್ರದೇಶವಾದ ಆಲೂರು ಭಾಗದ ಕೂಲಿ ಕಾರ್ಮಿಕರು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ದಿನಂಪ್ರತಿ ಕುಂದಾಪುರಕ್ಕೆ ತೆರಳುತ್ತಾರೆ ಸುಮಾರು 22.ಕಿಮೀ ದೂರದ ಕುಂದಾಪುರಕ್ಕೆ ತೆರಳಲು ಗ್ರಾಮೀಣ ಪ್ರದೇಶದ ಜನರಿಗೆ ಬಸ್ಸಿನ ಕೊರತೆ ಇದೆ.ಜನರ ಅನುಕೂಲದ ದೃಷ್ಟಿಯಿಂದ ಆಲೂರು-ಕುಂದಾಪುರಕ್ಕೆ ಸರಕಾರಿ ಬಸ್ ಸೌಲಭ್ಯವನ್ನು ಕಲ್ಪಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದರು.ಆಲೂರು ಮಾರ್ಗದಲ್ಲಿ ಸರಕಾರಿ ಬಸ್ ಸಂಚಾರ ಮಾಡುವುದರಿಂದ ಹತ್ತಕ್ಕೂ ಅಧಿಕ ಗ್ರಾಮಗಳಿಗೆ ಪ್ರಯೋಜನೆ ಆಗಲಿದೆ ಎಂದು ಹೇಳಿದರು.ಕುಂದಾಪುರ ತಾಲೂಕು ಕಟ್ಟಡ ಕಾರ್ಮಿಕರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಸಂತೋಷ್ ಹೆಮ್ಮಾಡಿ,ನಾಗರತ್ನ ನಾಡ,ರವಿ ವಿಎಂ,ಚಂದ್ರಶೇಖರ ವಿ,ಸುಮಿತ್ರಾ ಆಲೂರು,ಗೌರಿ ಆಲೂರು,ಅಂಬಿಕಾ ಉಪಸ್ಥಿತರಿದ್ದರು.ಸರಕಾರಿ ಬಸ್ ಸೌಲಭ್ಯ ಕಲ್ಪಿಸುಂತೆ ಆಲೂರು ಗ್ರಾ.ಪಂ ಅಧ್ಯಕ್ಷರು ಮತ್ತು ಪಿ.ಡಿ.ಒ ಗೆ ಮನವಿಯನ್ನು ಸಲ್ಲಿಸಲಾಯಿತು.ಕಟ್ಟಡ ಕಾರ್ಮಿಕ ಸಂಘ ಆಲೂರು ಅಧ್ಯಕ್ಷ ರಘುರಾಮ ಆಚಾರ್ ಮನವಿಯನ್ನು ಓದಿದರು.ಕಾರ್ಯದರ್ಶಿ ಗಣೇಶ್ ಆಚಾರ್ ವಂದಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…