ಕುಂದಾಪುರ:ಸರಕಾರಿ ಹಿರಿಯ ಪ್ರಾಥಮಿಕ ಹೆಮ್ಮಾಡಿ ಶಾಲೆಯಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಬಾರಿ ಮಳೆಗೆ ಶನಿವಾರ ರಾತ್ರಿ ಧರೆಗುರುಳಿದೆ.ಶಾಲೆ ರಜಾ ದಿನವಾದ್ದರಿಂದ ಬಾರಿ ಅನಾಹುತ ತಪ್ಪಿದ್ದು ಮಕ್ಕಳ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.
ಶತಮಾನದ ಇತಿಹಾಸವನ್ನು ಹೊಂದಿರುವ ಸರಕಾರಿ ಹಿರಿಯ ಪ್ರಾಥಮಿಕ ಹೆಮ್ಮಾಡಿ ಶಾಲೆಯ ಕಟ್ಟಡ ದುರ್ಬಲವಾಗಿದ್ದು ಕಟ್ಟಡವನ್ನು ತೆರವುಗೊಳಿಸುವಂತೆ ವರ್ಷದ ಹಿಂದೆ ಶಿಕ್ಷಣ ಇಲಾಖೆಗೆ ಮನವಿಯನ್ನು ಸಲ್ಲಿಸಲಾಗಿತ್ತು.ಮನವಿಗೆ ಸ್ಪಂದನೆ ಮಾಡದ ಶಿಕ್ಷಣ ಇಲಾಖೆ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವನ್ನು ತೆರವುಗೊಳಿಸುವ ಗೋಜಿಗೆ ಹೋಗಿರಲಿಲ್ಲ.
ಏಳು ಕೋಣೆಗಳನ್ನು ಹೊಂದಿರುವ ಉದ್ದನೆಯ ಶಾಲಾ ಕಟ್ಟಡದ ಮೂರು ಕೋಣೆಗಳು ಶಿಥಿಲಗೊಂಡಿದ್ದವು.ಮಳೆಯ ಹೊಡೆತಕ್ಕೆ ಶಿಥಿಲಗೊಂಡಿದ್ದ ಎರಡು ಕೋಣೆಗಳು ಧರೆಗೆ ಉರುಳಿ ಬಿದ್ದಿದೆ,ಇನ್ನೊಂದು ಕೋಣೆ ಬೀಳುವ ಹಂತದಲ್ಲಿದೆ.ಶಿಥಿಲಗೊಂಡಿದ್ದ ಪಕ್ಕದ ಕೋಣೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ದಿನ ಪಾಠ ಪ್ರವಚನವನ್ನು ಮಾಡಲಾಗುತ್ತಿತ್ತು.ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಧರೆಗೆ ಉರುಳಿ ಬಿದ್ದಿರುವುದು ಭಾನುವಾರ ಬೆಳಿಗ್ಗೆ ಗೋಚರಕ್ಕೆ ಬಂದಿದೆ.ರಜಾ ದಿನದಲ್ಲಿ ಕಟ್ಟಡ ಬಿದ್ದಿರುವುದರಿಂದ ಮಕ್ಕಳ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.
ಶಾಲೆಯ ಕಟ್ಟಡದ ಮೂರು ಕೋಣೆಗಳು ಶಿಥಿಲಗೊಂಡಿದ್ದು ದುರ್ಬಲ ಕಟ್ಟಡವನ್ನು ತೆರವು ಮಾಡುವಂತೆ ಗ್ರಾಮಸ್ಥರು ಶಿಕ್ಷಣ ಇಲಾಖೆಗೆ ಮನವಿಯನ್ನು ನೀಡಿದ್ದರು.ಸಾರ್ವಜನಿಕರ ಮನವಿಗೆ ಶಿಕ್ಷಣ ಇಲಾಖೆ ಯಾವುದೇ ರೀತಿ ಸ್ಪಂದನೆ ತೊರದೆ ನಿರುತ್ಸಾಹದ ಧೋರಣೆ ತಾಳಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.ಶಿಕ್ಷಣ ಇಲಾಖೆ ಬೇಜವಾಬ್ದಾರಿ ತನದಿಂದ ಕಟ್ಟಡ ನೆಲಕ್ಕೆ ಉರುಳಿ ಬಿದ್ದಿದೆ ರಜಾ ದಿನವಾದ್ದರಿಂದ ಅದೃಷ್ಟವಶಾತ್ ಮಕ್ಕಳು ಪಾರಾಗಿದ್ದರೆ ಎಂದು ಮಕ್ಕಳ ಪೋಷಕರು ಹೇಳುತ್ತಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…