ಕುಂದಾಪುರ

ಧರೆಗುರುಳಿದ ಹೆಮ್ಮಾಡಿ ಸರಕಾರಿ ಶಾಲೆ ಕಟ್ಟಡ

Share

ಕುಂದಾಪುರ:ಸರಕಾರಿ ಹಿರಿಯ ಪ್ರಾಥಮಿಕ ಹೆಮ್ಮಾಡಿ ಶಾಲೆಯಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಬಾರಿ ಮಳೆಗೆ ಶನಿವಾರ ರಾತ್ರಿ ಧರೆಗುರುಳಿದೆ.ಶಾಲೆ ರಜಾ ದಿನವಾದ್ದರಿಂದ ಬಾರಿ ಅನಾಹುತ ತಪ್ಪಿದ್ದು ಮಕ್ಕಳ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.
ಶತಮಾನದ ಇತಿಹಾಸವನ್ನು ಹೊಂದಿರುವ ಸರಕಾರಿ ಹಿರಿಯ ಪ್ರಾಥಮಿಕ ಹೆಮ್ಮಾಡಿ ಶಾಲೆಯ ಕಟ್ಟಡ ದುರ್ಬಲವಾಗಿದ್ದು ಕಟ್ಟಡವನ್ನು ತೆರವುಗೊಳಿಸುವಂತೆ ವರ್ಷದ ಹಿಂದೆ ಶಿಕ್ಷಣ ಇಲಾಖೆಗೆ ಮನವಿಯನ್ನು ಸಲ್ಲಿಸಲಾಗಿತ್ತು.ಮನವಿಗೆ ಸ್ಪಂದನೆ ಮಾಡದ ಶಿಕ್ಷಣ ಇಲಾಖೆ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವನ್ನು ತೆರವುಗೊಳಿಸುವ ಗೋಜಿಗೆ ಹೋಗಿರಲಿಲ್ಲ.
ಏಳು ಕೋಣೆಗಳನ್ನು ಹೊಂದಿರುವ ಉದ್ದನೆಯ ಶಾಲಾ ಕಟ್ಟಡದ ಮೂರು ಕೋಣೆಗಳು ಶಿಥಿಲಗೊಂಡಿದ್ದವು.ಮಳೆಯ ಹೊಡೆತಕ್ಕೆ ಶಿಥಿಲಗೊಂಡಿದ್ದ ಎರಡು ಕೋಣೆಗಳು ಧರೆಗೆ ಉರುಳಿ ಬಿದ್ದಿದೆ,ಇನ್ನೊಂದು ಕೋಣೆ ಬೀಳುವ ಹಂತದಲ್ಲಿದೆ.ಶಿಥಿಲಗೊಂಡಿದ್ದ ಪಕ್ಕದ ಕೋಣೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ದಿನ ಪಾಠ ಪ್ರವಚನವನ್ನು ಮಾಡಲಾಗುತ್ತಿತ್ತು.ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಧರೆಗೆ ಉರುಳಿ ಬಿದ್ದಿರುವುದು ಭಾನುವಾರ ಬೆಳಿಗ್ಗೆ ಗೋಚರಕ್ಕೆ ಬಂದಿದೆ.ರಜಾ ದಿನದಲ್ಲಿ ಕಟ್ಟಡ ಬಿದ್ದಿರುವುದರಿಂದ ಮಕ್ಕಳ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.

ಶಾಲೆಯ ಕಟ್ಟಡದ ಮೂರು ಕೋಣೆಗಳು ಶಿಥಿಲಗೊಂಡಿದ್ದು ದುರ್ಬಲ ಕಟ್ಟಡವನ್ನು ತೆರವು ಮಾಡುವಂತೆ ಗ್ರಾಮಸ್ಥರು ಶಿಕ್ಷಣ ಇಲಾಖೆಗೆ ಮನವಿಯನ್ನು ನೀಡಿದ್ದರು.ಸಾರ್ವಜನಿಕರ ಮನವಿಗೆ ಶಿಕ್ಷಣ ಇಲಾಖೆ ಯಾವುದೇ ರೀತಿ ಸ್ಪಂದನೆ ತೊರದೆ ನಿರುತ್ಸಾಹದ ಧೋರಣೆ ತಾಳಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.ಶಿಕ್ಷಣ ಇಲಾಖೆ ಬೇಜವಾಬ್ದಾರಿ ತನದಿಂದ ಕಟ್ಟಡ ನೆಲಕ್ಕೆ ಉರುಳಿ ಬಿದ್ದಿದೆ ರಜಾ ದಿನವಾದ್ದರಿಂದ ಅದೃಷ್ಟವಶಾತ್ ಮಕ್ಕಳು ಪಾರಾಗಿದ್ದರೆ ಎಂದು ಮಕ್ಕಳ ಪೋಷಕರು ಹೇಳುತ್ತಾರೆ.

Advertisement

Share
Team Kundapur Times

Recent Posts

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

6 days ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

3 months ago