ಕುಂದಾಪುರ:ಸರಕಾರಿ ಹಿರಿಯ ಪ್ರಾಥಮಿಕ ಹೆಮ್ಮಾಡಿ ಶಾಲೆಯಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಬಾರಿ ಮಳೆಗೆ ಶನಿವಾರ ರಾತ್ರಿ ಧರೆಗುರುಳಿದೆ.ಶಾಲೆ ರಜಾ ದಿನವಾದ್ದರಿಂದ ಬಾರಿ ಅನಾಹುತ ತಪ್ಪಿದ್ದು ಮಕ್ಕಳ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.
ಶತಮಾನದ ಇತಿಹಾಸವನ್ನು ಹೊಂದಿರುವ ಸರಕಾರಿ ಹಿರಿಯ ಪ್ರಾಥಮಿಕ ಹೆಮ್ಮಾಡಿ ಶಾಲೆಯ ಕಟ್ಟಡ ದುರ್ಬಲವಾಗಿದ್ದು ಕಟ್ಟಡವನ್ನು ತೆರವುಗೊಳಿಸುವಂತೆ ವರ್ಷದ ಹಿಂದೆ ಶಿಕ್ಷಣ ಇಲಾಖೆಗೆ ಮನವಿಯನ್ನು ಸಲ್ಲಿಸಲಾಗಿತ್ತು.ಮನವಿಗೆ ಸ್ಪಂದನೆ ಮಾಡದ ಶಿಕ್ಷಣ ಇಲಾಖೆ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವನ್ನು ತೆರವುಗೊಳಿಸುವ ಗೋಜಿಗೆ ಹೋಗಿರಲಿಲ್ಲ.
ಏಳು ಕೋಣೆಗಳನ್ನು ಹೊಂದಿರುವ ಉದ್ದನೆಯ ಶಾಲಾ ಕಟ್ಟಡದ ಮೂರು ಕೋಣೆಗಳು ಶಿಥಿಲಗೊಂಡಿದ್ದವು.ಮಳೆಯ ಹೊಡೆತಕ್ಕೆ ಶಿಥಿಲಗೊಂಡಿದ್ದ ಎರಡು ಕೋಣೆಗಳು ಧರೆಗೆ ಉರುಳಿ ಬಿದ್ದಿದೆ,ಇನ್ನೊಂದು ಕೋಣೆ ಬೀಳುವ ಹಂತದಲ್ಲಿದೆ.ಶಿಥಿಲಗೊಂಡಿದ್ದ ಪಕ್ಕದ ಕೋಣೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ದಿನ ಪಾಠ ಪ್ರವಚನವನ್ನು ಮಾಡಲಾಗುತ್ತಿತ್ತು.ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಧರೆಗೆ ಉರುಳಿ ಬಿದ್ದಿರುವುದು ಭಾನುವಾರ ಬೆಳಿಗ್ಗೆ ಗೋಚರಕ್ಕೆ ಬಂದಿದೆ.ರಜಾ ದಿನದಲ್ಲಿ ಕಟ್ಟಡ ಬಿದ್ದಿರುವುದರಿಂದ ಮಕ್ಕಳ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.
ಶಾಲೆಯ ಕಟ್ಟಡದ ಮೂರು ಕೋಣೆಗಳು ಶಿಥಿಲಗೊಂಡಿದ್ದು ದುರ್ಬಲ ಕಟ್ಟಡವನ್ನು ತೆರವು ಮಾಡುವಂತೆ ಗ್ರಾಮಸ್ಥರು ಶಿಕ್ಷಣ ಇಲಾಖೆಗೆ ಮನವಿಯನ್ನು ನೀಡಿದ್ದರು.ಸಾರ್ವಜನಿಕರ ಮನವಿಗೆ ಶಿಕ್ಷಣ ಇಲಾಖೆ ಯಾವುದೇ ರೀತಿ ಸ್ಪಂದನೆ ತೊರದೆ ನಿರುತ್ಸಾಹದ ಧೋರಣೆ ತಾಳಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.ಶಿಕ್ಷಣ ಇಲಾಖೆ ಬೇಜವಾಬ್ದಾರಿ ತನದಿಂದ ಕಟ್ಟಡ ನೆಲಕ್ಕೆ ಉರುಳಿ ಬಿದ್ದಿದೆ ರಜಾ ದಿನವಾದ್ದರಿಂದ ಅದೃಷ್ಟವಶಾತ್ ಮಕ್ಕಳು ಪಾರಾಗಿದ್ದರೆ ಎಂದು ಮಕ್ಕಳ ಪೋಷಕರು ಹೇಳುತ್ತಾರೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…