ಕುಂದಾಪುರ

ಧರೆಗುರುಳಿದ ಹೆಮ್ಮಾಡಿ ಸರಕಾರಿ ಶಾಲೆ ಕಟ್ಟಡ

Share

ಕುಂದಾಪುರ:ಸರಕಾರಿ ಹಿರಿಯ ಪ್ರಾಥಮಿಕ ಹೆಮ್ಮಾಡಿ ಶಾಲೆಯಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಬಾರಿ ಮಳೆಗೆ ಶನಿವಾರ ರಾತ್ರಿ ಧರೆಗುರುಳಿದೆ.ಶಾಲೆ ರಜಾ ದಿನವಾದ್ದರಿಂದ ಬಾರಿ ಅನಾಹುತ ತಪ್ಪಿದ್ದು ಮಕ್ಕಳ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.
ಶತಮಾನದ ಇತಿಹಾಸವನ್ನು ಹೊಂದಿರುವ ಸರಕಾರಿ ಹಿರಿಯ ಪ್ರಾಥಮಿಕ ಹೆಮ್ಮಾಡಿ ಶಾಲೆಯ ಕಟ್ಟಡ ದುರ್ಬಲವಾಗಿದ್ದು ಕಟ್ಟಡವನ್ನು ತೆರವುಗೊಳಿಸುವಂತೆ ವರ್ಷದ ಹಿಂದೆ ಶಿಕ್ಷಣ ಇಲಾಖೆಗೆ ಮನವಿಯನ್ನು ಸಲ್ಲಿಸಲಾಗಿತ್ತು.ಮನವಿಗೆ ಸ್ಪಂದನೆ ಮಾಡದ ಶಿಕ್ಷಣ ಇಲಾಖೆ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವನ್ನು ತೆರವುಗೊಳಿಸುವ ಗೋಜಿಗೆ ಹೋಗಿರಲಿಲ್ಲ.
ಏಳು ಕೋಣೆಗಳನ್ನು ಹೊಂದಿರುವ ಉದ್ದನೆಯ ಶಾಲಾ ಕಟ್ಟಡದ ಮೂರು ಕೋಣೆಗಳು ಶಿಥಿಲಗೊಂಡಿದ್ದವು.ಮಳೆಯ ಹೊಡೆತಕ್ಕೆ ಶಿಥಿಲಗೊಂಡಿದ್ದ ಎರಡು ಕೋಣೆಗಳು ಧರೆಗೆ ಉರುಳಿ ಬಿದ್ದಿದೆ,ಇನ್ನೊಂದು ಕೋಣೆ ಬೀಳುವ ಹಂತದಲ್ಲಿದೆ.ಶಿಥಿಲಗೊಂಡಿದ್ದ ಪಕ್ಕದ ಕೋಣೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ದಿನ ಪಾಠ ಪ್ರವಚನವನ್ನು ಮಾಡಲಾಗುತ್ತಿತ್ತು.ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಧರೆಗೆ ಉರುಳಿ ಬಿದ್ದಿರುವುದು ಭಾನುವಾರ ಬೆಳಿಗ್ಗೆ ಗೋಚರಕ್ಕೆ ಬಂದಿದೆ.ರಜಾ ದಿನದಲ್ಲಿ ಕಟ್ಟಡ ಬಿದ್ದಿರುವುದರಿಂದ ಮಕ್ಕಳ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.

ಶಾಲೆಯ ಕಟ್ಟಡದ ಮೂರು ಕೋಣೆಗಳು ಶಿಥಿಲಗೊಂಡಿದ್ದು ದುರ್ಬಲ ಕಟ್ಟಡವನ್ನು ತೆರವು ಮಾಡುವಂತೆ ಗ್ರಾಮಸ್ಥರು ಶಿಕ್ಷಣ ಇಲಾಖೆಗೆ ಮನವಿಯನ್ನು ನೀಡಿದ್ದರು.ಸಾರ್ವಜನಿಕರ ಮನವಿಗೆ ಶಿಕ್ಷಣ ಇಲಾಖೆ ಯಾವುದೇ ರೀತಿ ಸ್ಪಂದನೆ ತೊರದೆ ನಿರುತ್ಸಾಹದ ಧೋರಣೆ ತಾಳಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.ಶಿಕ್ಷಣ ಇಲಾಖೆ ಬೇಜವಾಬ್ದಾರಿ ತನದಿಂದ ಕಟ್ಟಡ ನೆಲಕ್ಕೆ ಉರುಳಿ ಬಿದ್ದಿದೆ ರಜಾ ದಿನವಾದ್ದರಿಂದ ಅದೃಷ್ಟವಶಾತ್ ಮಕ್ಕಳು ಪಾರಾಗಿದ್ದರೆ ಎಂದು ಮಕ್ಕಳ ಪೋಷಕರು ಹೇಳುತ್ತಾರೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago